Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಜ್ ಯಾತ್ರೆಯ ನೀತಿ ನಿಯಮದ ತಿಳುವಳಿಕೆ...

ಹಜ್ ಯಾತ್ರೆಯ ನೀತಿ ನಿಯಮದ ತಿಳುವಳಿಕೆ ಅಗತ್ಯ: ಸಯ್ಯದ್ ಏಜಾಝ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ17 Jun 2019 9:36 PM IST
share
ಹಜ್ ಯಾತ್ರೆಯ ನೀತಿ ನಿಯಮದ ತಿಳುವಳಿಕೆ ಅಗತ್ಯ: ಸಯ್ಯದ್ ಏಜಾಝ್ ಅಹ್ಮದ್

ಧಾರವಾಡ, ಜೂ.17: ಇಸ್ಲಾಮ್ ಧರ್ಮದ ಐದು ಸಿದ್ಧಾಂತಗಳಲ್ಲಿ ಹಜ್ ಸಹ ಒಂದಾಗಿದೆ. ಇದು ಮುಸ್ಲಿಮರಿಗೆ ಜೀವನದಲ್ಲಿ ಒಂದು ಸಲ ನಿರ್ವಹಿಸುವುದು ಕಡ್ಡಾಯವಾಗಿದೆ. ಇಂತಹ ಯಾತ್ರೆ ಮಾಡುವಾಗ ಯಾತ್ರಿಕರು ಅಲ್ಲಿಯ ನೀತಿ ನಿಯಮ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ರಾಜ್ಯ ಹಜ್ ಸಮಿತಿಯ ನೋಡಲ್ ಅಧಿಕಾರಿ ಸಯ್ಯದ್ ಎಜಾಝ್ ಅಹ್ಮದ್ ಹೇಳಿದ್ದಾರೆ.

ಸೋಮವಾರ ನಗರದ ಮಾಳಾಪೂರದ ಎ.ಪಿ.ಎಂ.ಸಿ ಯಾರ್ಡ್ ಹತ್ತಿರದ ಪಠಾಣ್ ಹಾಲ್‌ನಲ್ಲಿ ರಾಜ್ಯ ಹಜ್ ಸಮಿತಿ, ಇಂಡಿಯನ್ ಹಜ್ ಟ್ರೇನಿಂಗ್ ಪ್ರೋಗ್ರಾಮ್ ಹಾಗೂ ಧಾರವಾಡ ಜಿಲ್ಲಾ ಅಂಜುಮನ್ ಇಸ್ಲಾಮ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಒಂದು ದಿನದ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವದಲ್ಲಿಯೇ ಹಜ್ ಅತ್ಯಂತ ದೊಡ್ಡ ಧಾರ್ಮಿಕ ಯಾತ್ರೆಯಾಗಿದೆ. ಅಲ್ಲಿ ಸಾಮಾನ್ಯ ಉಡುಗೆಯಲ್ಲಿ ಒಂದೇ ಸ್ಥಳದಲ್ಲಿ, ಸಾಮಾನ್ಯ ಪ್ರಾರ್ಥನೆ ಮಾಡುವ ಉದ್ದೇಶದಿಂದ ಲಕ್ಷಾಂತರ ಜನ ಸೇರುತ್ತಾರೆ. ವಿಶ್ವದಲ್ಲಿಯೇ ಅತಿ ಹೆಚ್ಚು ಹಜ್ ಯಾತ್ರಾರ್ಥಿಗಳನ್ನು ಕಳುಹಿಸುವ ಅಗ್ರ ಮೂರು ರಾಷ್ಟ್ರಗಳಲ್ಲಿ ಭಾರತವು ಒಂದಾಗಿದೆ ಎಂದು ಅವರು ತಿಳಿಸಿದರು.

ಹಿಂದಿನ ದಿನಗಳಲ್ಲಿ ಹಜ್ ಯಾತ್ರೆ ವೇಳೆ ಬೆಂಕಿ ಘಟನೆಗಳು, ಕಾಲ್ತುಳಿತದಲ್ಲಿ ಅನೇಕ ಜೀವಗಳನ್ನು ಕಳೆದುಕೊಳ್ಳುವಂತೆ ಮಾಡಿದ್ದರಿಂದ ಸೌದಿ ಅರೇಬಿಯಾ ಸರಕಾರವು ಇದನ್ನು ತಡೆಗಟ್ಟುವದು ಅವಶ್ಯಕವೆಂದು ಭಾವಿಸಿ, ಬೇರೆ ಬೇರೆ ದೇಶಗಳಿಂದ ಹೊರಡುವ ಹಜ್ ಯಾತ್ರಾರ್ಥಿಗಳಿಗೆ ಸಂಪೂರ್ಣವಾಗಿ ತರಬೇತಿ ನೀಡಲು ಪ್ರತಿ ರಾಷ್ಟ್ರವನ್ನು ವಿನಂತಿಸಿದೆ ಎಂದು ಏಜಾಝ್ ಅಹ್ಮದ್ ಹೇಳಿದರು.

ಈ ಹಿನ್ನೆಲೆಯಲ್ಲಿ ಹಜ್ ಯಾತ್ರಿಕರಿಗೆ ತಮ್ಮ ಪ್ರಯಾಣ ಆರಾಮದಾಯಕ ಸುಖಕರ, ಸುಲಭವಾಗಿಸುವ ದೃಷ್ಟಿಕೋನದಿಂದ ಈ ತರಬೇತಿ ನೀಡುವಂತೆ ಕೇಂದ್ರ ಸರಕಾರವು ಎಲ್ಲ ರಾಜ್ಯ ಹಜ್ ಸಮಿತಿಗಳಿಗೆ, ಭಾರತೀಯ ಹಜ್ ಸಮಿತಿ ಮೂಲಕ ಸೂಚಿಸಿದೆ ಎಂದು ಅವರು ತಿಳಿಸಿದರು.

ಸಮುದಾಯದ ಮುಖಂಡ ಇಮ್ರಾನ್ ಕಳ್ಳಿಮನಿ ಮಾತನಾಡಿ, ಹಜ್ ಪ್ರಯಾಣದ ಬ್ಯಾಗೇಜ್ ಪ್ಯಾಕಿಂಗ್ ಕೇವಲ 45 ಕಿ.ಲೋ.ಗೆ ಸೀಮಿತವಾಗಿದೆ. ಹೀಗಾಗಿ ಪ್ರಯಾಣಿಕರು ಕೇವಲ ಎರಡು ಸೂಟ್‌ಕೇಸ್‌ಗಳನ್ನು ಮಾತ್ರ ಕೊಂಡೊಯ್ಯಬೇಕು ಎಂದರು.

ಅಲ್ಲದೆ, ಬೆಂಗಳೂರಿನ ಹಜ್ ಭವನ, ಅಂತರ್‌ರಾಷ್ಟ್ರೀಯ ಪ್ರವಾಸ, ಜಿದ್ದಾ ಮತ್ತು ಮದೀನಾ ವಿಮಾನ ನಿಲ್ದಾಣಗಳ ಔಪಚಾರಿಕತೆಗಳು, ಮಕ್ಕಾ ಮತ್ತು ಮದೀನಾದಲ್ಲಿ ಊಟ ಮತ್ತು ವಸತಿ ಸೌಕರ್ಯ, ಬಸ್, ರೈಲುಗಳಲ್ಲಿ ಪ್ರಯಾಣಿಸುವುದರ ಕುರಿತು ಅವರು ಮಾಹಿತಿ ನೀಡಿದರು.

ಈ ತರಬೇತಿ ಕಾರ್ಯಕ್ರಮದಲ್ಲಿ ಧಾರ್ಮಿಕ ವಿದ್ವಾಂಸರಾದ ಮೌಲಾನ ಮುಪ್ತುಲ್ಲಾ ಮಝರ್ ರಶಾದಿ, ಸಂಚಾಲಕ ಮುಬೀನ್ ಅಹ್ಮದ್, ಎಂ.ಎಂ.ಶಹಾ ಖಾದ್ರಿ, ಮುಹಮ್ಮದ್ ಅಶ್ರಫ್ ಅವರು ಹಜ್ ಆಚರಣೆ, ಕುರ್ಬಾನಿ ಮತ್ತು ಮದಿನಾಗೆ ಭೇಟಿ ಮಾಡುವುದು ಸೇರಿದಂತೆ ಪ್ರಮುಖವಾದ ಸಂಗತಿಗಳ ಬಗ್ಗೆ ಉಪನ್ಯಾಸ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X