Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಕ್ಯಾನಿಕಲ್ ವಿದ್ಯಾರ್ಥಿಗಳಿಂದ ವಿಶಿಷ್ಟ...

ಮೆಕ್ಯಾನಿಕಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ಬಸ್ ನಿಲ್ದಾಣ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ17 Jun 2019 10:34 PM IST
share
ಮೆಕ್ಯಾನಿಕಲ್ ವಿದ್ಯಾರ್ಥಿಗಳಿಂದ ವಿಶಿಷ್ಟ ಬಸ್ ನಿಲ್ದಾಣ ನಿರ್ಮಾಣ

ಬೆಂಗಳೂರು, ಜೂ.17: ತೆಂಗಿನ ನಾರಿನ ಮೂಲಕ ನಗರದ ಸಾಯಿ ವಿದ್ಯಾ ಇನ್‌ಸ್ಟಿಟ್ಯೂಟ್‌ನ ಮೆಕಾನಿಕಲ್ ವಿಭಾಗದ ವಿದ್ಯಾರ್ಥಿಗಳು ವಿಶಿಷ್ಟವಾದ ಬಸ್ ನಿಲ್ದಾಣ ನಿರ್ಮಾಣ ಮಾಡಿದ್ದಾರೆ. ಕಾಲೇಜಿನ 8 ನೆ ಸೆಮಿಸ್ಟರ್‌ನಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಾದ ಮನೋಜ್, ಪವನ್, ಸುರೇಶ್, ಹರ್ಷ ಮೆಕಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ, ರಾಘವೇಂದ್ರ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಬಸ್ ನಿಲ್ದಾಣ ನಿರ್ಮಾಣ ಮಾಡಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿದ್ದಾರೆ.

ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೊನೆ ಸೆಮಿಸ್ಟರ್‌ನಲ್ಲಿ ಪ್ರಾಜೆಕ್ಟ್ ಒಂದನ್ನು ತಯಾರಿಸುವುದು ಕಡ್ಡಾಯ. ಅದರಂತೆ ಈ ವರ್ಷ ನಮ್ಮ ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ, ದೀರ್ಘ ಬಾಳಿಕೆಯ ಪರಿಸರ ಸ್ನೇಹಿ ಬಸ್ ನಿಲ್ದಾಣವನ್ನು ತೆಂಗಿನ ನಾರು ಬಳಸಿ ನಿರ್ಮಿಸಿದ್ದಾರೆ. ಇದನ್ನು ನಗರದ ಇತರೆಡೆಗಳಲ್ಲೂ ಅಳವಡಿಸಿದರೆ, ತೆಂಗುನಾರಿನ ಮಂಡಳಿಗೂ ಅನುಕೂಲ, ತೆಂಗು ಬೆಳೆಗಾರರಿಗೂ ಆರ್ಥಿಕವಾಗಿ ನೆರವಾಗಲಿದೆ ಎಂದು ಸಹಾಯಕ ಪ್ರಾಧ್ಯಾಪಕ ಡಾ.ಸುಬ್ರಮಣ್ಯ ರಾಘವೇಂದ್ರ ಹೇಳಿದ್ದಾರೆ.

ಪ್ರಾಜೆಕ್ಟ್ ತಯಾರಿಸಲು ಸುಮಾರು 2 ತಿಂಗಳು ಸಮಯ ತೆಗೆದುಕೊಂಡಿದ್ದು, ಅಂದಾಜು 12 ಸಾವಿರ ರೂ. ಖರ್ಚಾಗಿದೆ. ನಮ್ಮದು ವಿಶಿಷ್ಟ ಹಾಗೂ ಸಮಾಜಕ್ಕೆ ಉಪಯುಕ್ತವಾದ ಪ್ರಾಜೆಕ್ಟ್ ಆಗಿರುವುದರಿಂದ ಕೆಎಸ್‌ಸಿಎಸ್‌ಟಿಯಿಂದ 7,500 ರೂ. ಪ್ರೋತ್ಸಾಹಧನ ಸಿಕ್ಕಿರುವುದು ನಮಗೆ ಸಂತಸ ತಂದಿದೆ ಎಂದು ತಂಡದ ಮುಖಂಡ ಮನೋಜ್ ಅಭಿಪ್ರಾಯಪಟ್ಟರು.

ಸಾಮಾನ್ಯವಾಗಿ ನಗರದಲ್ಲಿ ನಿರ್ಮಿಸುವ ಬಸ್ ತಂಗುದಾಣ 30 ಸಾವಿರ ರೂ.ನಿಂದ 50 ಸಾವಿರ ರೂ. ಹಾಗೂ ಮೇಲ್ಪಟ್ಟು ವೆಚ್ಚ ತಗಲುತ್ತದೆ. ಆದರೆ ನಮ್ಮ ತೆಂಗಿನ ನಾರಿನ ಬಸ್ ತಂಗುದಾಣ ಕಡಿಮೆ ವೆಚ್ಚದ್ದು. ನಾವು ನಿರ್ಮಿಸಿರುವ ನಿಲ್ದಾಣವನ್ನು ನಮ್ಮ ಕಾಲೇಜಿನ ಮುಂಭಾಗದಲ್ಲೇ ಲೋಕಾರ್ಪಣೆಗೊಳಿಸಿದ್ದೇವೆ. ಆರ್ಥಿಕ ನೆರವು ನೀಡಿದರೆ ನಗರದಲ್ಲಿ ಅಗತ್ಯವಿರುವೆಡೆ ಕಡಿಮೆ ವೆಚ್ಚದಲ್ಲಿ ನಿಲ್ದಾಣ ನಿರ್ಮಿಸಿಕೊಡಲು ನಾವು ತಯಾರಿದ್ದೇವೆ ಎಂದು ಮತ್ತೊಬ್ಬ ವಿದ್ಯಾರ್ಥಿ ಮನೋಜ್ ಹೇಳಿದ್ದಾರೆ.

ತಂಗುದಾಣದ ವಿಶೇಷತೆ: ಹತ್ತು ಅಡಿ ಉದ್ದ ಮತ್ತು 12 ಅಡಿ ಅಗಲವನ್ನು ಹೊಂದಿದೆ. ತಂಗುದಾಣದ ರ್ೂ ಅನ್ನು ಪೂರ್ತಿ ತೆಂಗಿನ ನಾರಿನಲ್ಲಿ ನಿರ್ಮಿಸಲಾಗಿದ್ದು, ವಾಟರ್ ಪ್ರೂಫ್ ಕೋಟಿಂಗ್ ಮಾಡಿರುವುದರಿಂದ ಮಳೆ ಬಿದ್ದರೆ ನೀರು ಇಳಿಯುವುದಿಲ್ಲ. ಒಂದು ವೇಳೆ ಬೆಂಕಿ ತಾಗಿದರೂ ತಕ್ಷಣಕ್ಕೆ ಯಾವುದೇ ಹಾನಿ ಸಂಭವಿಸದಂತೆ ಗಮ್ ಹಾಕಿ ನಿರ್ಮಿಸಲಾಗಿದೆ. ತೆಂಗುನಾರಿನ ಮಂಡಳಿಯಿಂದ ತಂಗುದಾಣಕ್ಕೆ ಬೇಕಾದ 4 ಇಂಚು 6 ಅಡಿ ಅಳತೆಯ ತೆಂಗಿನ ನಾರಿನ ಪ್ಲೇಟ್‌ಗಳನ್ನು ಖರೀದಿಸಿ ಬಳಸಲಾಗಿದೆ. ಎಡ, ಬಲ ಬದಿಗಳಲ್ಲಿ ಛಾವಣಿಯನ್ನು ನಿಲ್ಲಿಸಲು ಕಬ್ಬಿಣದ ಸರಳುಗಳನ್ನು ಬಳಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X