Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದ್ಯಾರ್ಥಿಗಳಿಗೆ ಇತಿಹಾಸ ನೆನಪಿಸಬೇಕಾದ...

ವಿದ್ಯಾರ್ಥಿಗಳಿಗೆ ಇತಿಹಾಸ ನೆನಪಿಸಬೇಕಾದ ಅಗತ್ಯವಿದೆ: ಡಾ.ಎಚ್.ರಾಮರಾವ್

ವಾರ್ತಾಭಾರತಿವಾರ್ತಾಭಾರತಿ18 Jun 2019 10:52 PM IST
share

ಬೆಂಗಳೂರು, ಜೂ.18: ಇಂದಿನ ಕಂಪ್ಯೂಟರ್ ಯುಗದಲ್ಲಿ ಯುವ ಸಮುದಾಯಕ್ಕೆ ಇತಿಹಾಸವನ್ನು ನೆನಪಿಸಬೇಕಾದ ಅಗತ್ಯವಿದೆ ಎಂದು ನ್ಯಾಷನಲ್ ಕಾಲೇಜು ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ.ಎ.ಎಚ್.ರಾಮರಾವ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ನಗರದ ನ್ಯಾಷನಲ್ ಕಾಲೇಜಿನಲ್ಲಿ ಸಮುದಾಯ ಸಂಘಟನೆಯಿಂದ ಆಯೋಜಿಸಿದ್ದ ಜಲಿಯನ್ ವಾಲಾಬಾಗ್ ಶತಮಾನದ ಸ್ಮರಣೆ, ವಿದ್ಯಾರ್ಥಿ-ಯುವಜನರ ಜೊತೆ ಸ್ವಾತಂತ್ರ ಸಂಗ್ರಾಮದ ನೆನಪುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಯುವ ಸಮುದಾಯ ಪ್ರತಿದಿನವೂ ಮೊಬೈಲ್‌ನಲ್ಲಿಯೇ ಕಾಲ ಕಳೆಯುತ್ತಾರೆ. ಅವರಿಗೆ ಇತಿಹಾಸವನ್ನು ಅರ್ಥ ಮಾಡಿಸಬೇಕಾದ ಅಗತ್ಯವಿದೆ ಎಂದು ನುಡಿದರು.

ಭಾರತ ದೇಶ ಸ್ವಾತಂತ್ರ ಪಡೆಯಲು ಅನೇಕರು ಪ್ರಾಣ ತ್ಯಾಗ ಮಾಡಿದ್ದಾರೆ. ಅದರಲ್ಲಿ ಜಲಿಯನ್ ವಾಲಾಬಾಗ್ ದುರಂತವೂ ಒಂದಾಗಿದೆ. ಬ್ರಿಟಿಷ್ ಅಧಿಕಾರಿಯ ಕ್ರೂರತನದಿಂದ ಸಾವಿರಾರು ಸಂಖ್ಯೆಯಲ್ಲಿ ಅಮಾಯಕ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡು. ನಮ್ಮ ಇತಿಹಾಸವನ್ನು ಇಂದಿನ ವಿದ್ಯಾರ್ಥಿ-ಯುವಜನರು ಅರಿಯಬೇಕು. ಆ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ನುಡಿದರು.

ಪಂಜಾನ್‌ನ ಅಮೃತಸರದಲ್ಲಿರುವ ಜಲಿಯನ್ ವಾಲಾಬಾಗ್‌ನಲ್ಲಿ ಇಬ್ಬರು ದೇಶಪ್ರೇಮಿಗಳನ್ನು ಬ್ರಿಟಿಷರು ದೇಶದ್ರೋಹಿಗಳೆಂದು ಬಿಂಬಿಸಿ ಅಪಪ್ರಚಾರ ಮಾಡುತ್ತಿದ್ದರು. ಇದನ್ನು ಖಂಡಿಸುವ ಸಲುವಾಗಿ ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಆದರೆ, ಅಂದಿನ ಬ್ರಿಟಿಷ್ ಅಧಿಕಾರಿ ಒಳಗೆ ಪ್ರವೇಶಿಸಲು ಇದ್ದ ಒಂದೇ ಬಾಗಿಲಿನಿಂದ ನೂರಾರು ಸಂಖ್ಯೆಯಲ್ಲಿ ಪೊಲೀಸರು ಒಳನುಸುಳಿ, ಬಾಗಿಲು ಮುಚ್ಚಿ ಗುಂಡು ಹಾರಿಸಿ ಕೊಂದರು. ಅದು ನಮ್ಮ ದೇಶದ ಸ್ವಾತಂತ್ರ ಹೋರಾಟ ಬಲಗೊಳ್ಳಲು ಮತ್ತಷ್ಟು ಆಕ್ರೋಶವನ್ನು ಹುಟ್ಟುಹಾಕಿತು ಎಂದು ತಿಳಿಸಿದರು.

ಸಮುದಾಯ ಸಂಘಟನೆಯ ಕೆ.ಎಸ್.ವಿಮಲಾ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿರುವ ಜಲಿಯನ್ ವಾಲಾಬಾಗ್ ದುರಂತ ನಡೆದು ಇಂದಿಗೆ ನೂರು ವರ್ಷಗಳು ಕಳೆಯುತ್ತಿವೆ. ಆದರೆ, ಇಂದಿಗೂ ಬ್ರಿಟಿಷರು ನಡೆಸುತ್ತಿದ್ದ ದಬ್ಬಾಳಿಕೆ, ದೌರ್ಜನ್ಯವನ್ನು ನೆನಪಿಸುತ್ತಿದೆ. ಈ ದುರಂತದಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲರೂ ಮಡಿದಿದ್ದರು ಎಂದು ಹೇಳಿದರು.

ಬ್ರಿಟಿಷರು ತಂದ ರೌಲಟ್ ಕಾಯ್ದೆಯನ್ನು ವಿರೋಧಿಸಿ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿನ ಜಲಿಯನ್ ವಾಲಾಬಾಗ್‌ನಲ್ಲಿ ಸೇರಿ ಸಿಖ್‌ರ ಪ್ರಮುಖ ಹಬ್ಬವಾದ ಬೈಸಾಖಿಯನ್ನು ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಒಳನುಗ್ಗಿದ ಅಂದಿನ ಬ್ರಿಟಿಷ್ ಅಧಿಕಾರಿ ಜನರಲ್ ಡಯರ್ ಸಭೆ ಸೇರಿದ್ದ ಭಾರತೀಯರ ಮೇಲೆ ಗುಂಡು ಹಾರಿಸಿದ. ಈ ವೇಳೆ ಸಾವಿರಾರು ಜನರು ಮೃತಪಟ್ಟರೆ, ನೂರಾರು ಜನರಿಗೆ ತೀವ್ರವಾದ ಗಾಯಗಳಾದವು. ಈ ದುರಂತದಿಂದ ರೊಚ್ಚಿಗೆದ್ದ ಲಕ್ಷಾಂತರ ಜನರು ಬ್ರಿಟಿಷರ ವಿರುದ್ಧ ಅನೇಕ ಕ್ರಾಂತಿಕಾರಿ ಹೋರಾಟಗಳನ್ನು ಕಟ್ಟಿದರು ಎಂದು ತಿಳಿಸಿದರು.

ಜಲಿಯನ್ ವಾಲಾಬಾಗ್‌ನಲ್ಲಿ ಅಂದು ಮಕ್ಕಳು, ವಯಸ್ಕರು, ಯುವಕರು, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಹೀಗೆ ಎಲ್ಲ ವರ್ಗಗಳಿಗೂ ಸೇರಿದವರಿದ್ದರು. ಬ್ರಿಟಿಷ್ ಪೊಲೀಸರು ಸುಟ್ಟ ಒಂದೇ ಒಂದು ಗುಂಡೂ ವ್ಯರ್ಥವಾಗಿರಲಿಲ್ಲ. ಇಂದಿಗೂ ಅಲ್ಲಿರುವ ಬೃಹತ್ ಗೋಡೆಯ ಮೇಲೆ ರಕ್ತದ ಕಲೆಗಳು ಹಾಗೂ ಗುಂಡು ಹೊಡೆದಿರುವ ಕಲೆಗಳು ಇವೆ ಎಂದರು. ಕಾರ್ಯಕ್ರಮದಲ್ಲಿ ನ್ಯಾಷನಲ್ ಪಿಯು ಕಾಲೇಜಿನ ಪ್ರಾಂಶುಪಾಲ ವಿ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X