Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್‌ನ ರೊಹಿಂಗ್ಯಾ ಸಮಸ್ಯೆಯನ್ನು...

ಮ್ಯಾನ್ಮಾರ್‌ನ ರೊಹಿಂಗ್ಯಾ ಸಮಸ್ಯೆಯನ್ನು ನಿಬಾಯಿಸುವಲ್ಲಿ ವ್ಯವಸ್ಥಿತ ವೈಫಲ್ಯ ಒಪ್ಪಿಕೊಂಡ ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ18 Jun 2019 10:53 PM IST
share
ಮ್ಯಾನ್ಮಾರ್‌ನ ರೊಹಿಂಗ್ಯಾ ಸಮಸ್ಯೆಯನ್ನು ನಿಬಾಯಿಸುವಲ್ಲಿ ವ್ಯವಸ್ಥಿತ ವೈಫಲ್ಯ ಒಪ್ಪಿಕೊಂಡ ವಿಶ್ವಸಂಸ್ಥೆ

ಲಂಡನ್, ಜೂ.18: ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯಾ ಸಮಸ್ಯೆಯನ್ನು ನಿಬಾಯಿಸಿರುವ ಕುರಿತು ಸಿದ್ಧಪಡಿಸಿರುವ ವರದಿಯಲ್ಲಿ ತನ್ನನ್ನೇ ದೂರಿಕೊಂಡಿರುವ ವಿಶ್ವಸಂಸ್ಥೆ, ಮ್ಯಾನ್ಮಾರ್‌ನಲ್ಲಿ ಯುಎನ್ ನಿರ್ವಹಣೆ ಖಂಡಿತವಾಗಿಯೂ ಸ್ಫೂರ್ತಿದಾಯಕವಾಗಿರಲಿಲ್ಲ ಮತ್ತು ಅದು ಮಾನವ ಹಕ್ಕುಗಳನ್ನು ರಕ್ಷಿಸುವ ತನ್ನ ಉದ್ದೇಶವನ್ನು ಸಾಧಿಸುವಲ್ಲಿ ವ್ಯವಸ್ಥಿತಿ ವೈಫಲ್ಯ ಕಂಡಿದೆ ಎಂದು ತಿಳಿಸಿದೆ. 2017ರಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ 7,30,000ಕ್ಕೂ ಅಧಿಕ ರೊಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್‌ನಿಂದ ಸಮೀಪದ ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದರು. ಮಾನವ ಹಕ್ಕುಗಳ ವಿಚಾರದಲ್ಲಿರುವ ಋಣಾತ್ಮಕ ವಿನ್ಯಾಸವನ್ನು ಬದಲಿಸಲು ಮತ್ತು ಇತರ ಕ್ಷೇತ್ರಗಳಲ್ಲಿ ಗುಣಾತ್ಮಕ ವಿನ್ಯಾಸವನ್ನು ಉಳಿಸಲು ಮ್ಯಾನ್ಮಾರ್ ಸರಕಾರದ ಜೊತೆ ಪರಿಣಾಮಕಾರಿಯಾಗಿ ಕೆಲಸ ಮಾಡುವಲ್ಲಿ ವಿಶ್ವಸಂಸ್ಥೆಯ ವ್ಯವಸ್ಥೆ ಒಟ್ಟಾರೆಯಾಗಿ ಅಸಮರ್ಥವಾಗಿದೆ ಎಂದು ಈ ವರದಿಯನ್ನು ಸಿದ್ಧಪಡಿಸಿರುವ ಗ್ವಾಟೆಮಾಲದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಗೆರ್ಟ್ ರೊಸೆಂತಲ್ ತಿಳಿಸಿದ್ದಾರೆ. 2010ರಿಂದ 2018ರ ವರೆಗೆ ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರ ಮೇಲೆ ದೌರ್ಜನ್ಯಗಳು ನಡೆದ ಸಂದರ್ಭದಲ್ಲಿ ವಿಶ್ವ ಸಂಘಟನೆಗಳು ಅಲ್ಲಿ ನಿರ್ವಹಿಸಿದ್ದ ಪಾತ್ರಗಳ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಈ ವರದಿಯನ್ನು ಸಿದ್ಧಪಡಿಸಲು ಆದೇಶಿಸಿದ್ದರು. ವಿಶ್ವಸಂಸ್ಥೆಯ ವಿವಿಧ ವಿಭಾಗಗಳಿಂದ ತನಗೆ ಸಿಕ್ಕ ಮಾಹಿತಿಯನ್ನು ಮ್ಯಾನ್ಮಾರ್ ಸರಕಾರ ತನ್ನ ಲಾಭಕ್ಕೆ ಬಳಸಿದೆ ಎಂದು ರೊಸೆಂತಲ್ ತಿಳಿಸಿದ್ದಾರೆ. ರೊಹಿಂಗ್ಯಾ ಮುಸ್ಲಿಮರ ಮೇಲೆ ನಡೆದ ದೌರ್ಜನ್ಯಗಳಿಗೆ ಸರಕಾರವೇ ಹೊಣೆಯಾಗಿದೆ. ವಿಶ್ವಸಂಸ್ಥೆಯ ವ್ಯವಸ್ಥಿತ ವೈಫಲ್ಯ ಕೇವಲ ಒಂದು ವಿಭಾಗ ಅಥವಾ ವ್ಯಕ್ತಿಗೆ ಸೀಮಿತವಾಗಿಲ್ಲ. ಆದರೆ ರಚನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರಕಾರದ ಜೊತೆ ಕೈಜೋಡಿಸುವ ಜವಾಬ್ದಾರಿಯಿಂದ ನುಣುಚಿಕೊಂಡ ಎಲ್ಲ ಸಂಘಟನೆಗಳ ವೈಫಲ್ಯವಾಗಿದೆ ಎಂದು ರೊಸೆಂತಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X