Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇಲ್ಲದ ಶಿಸ್ತು ಸಮಿತಿಗೆ ಪ್ರಜ್ಞಾ ಸಿಂಗ್...

ಇಲ್ಲದ ಶಿಸ್ತು ಸಮಿತಿಗೆ ಪ್ರಜ್ಞಾ ಸಿಂಗ್ ಪ್ರಕರಣ ವಹಿಸಿದ ಬಿಜೆಪಿ !

ಗೋಡ್ಸೆ ದೇಶಭಕ್ತ ಎಂಬ ವಿವಾದಾಸ್ಪದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ18 Jun 2019 11:40 PM IST
share
ಇಲ್ಲದ ಶಿಸ್ತು ಸಮಿತಿಗೆ ಪ್ರಜ್ಞಾ ಸಿಂಗ್ ಪ್ರಕರಣ ವಹಿಸಿದ ಬಿಜೆಪಿ !

ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಬಣ್ಣಿಸಿ ವ್ಯಾಪಕ ಆಕ್ರೋಶ ಎದುರಿಸಿದ್ದ ಮಾಲೇಗಾಂವ್ ಸ್ಫೋಟ ಆರೋಪಿ ಹಾಗು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧದ ಬಿಜೆಪಿ ಶಿಸ್ತುಕ್ರಮ ತೆಗೆದುಕೊಳ್ಳುವ ವಿಷಯ ಏನಾಯಿತು ? ಈವರೆಗೆ ಏನೂ ಆಗಿಲ್ಲ ಹಾಗು ಸದ್ಯದ ಪರಿಸ್ಥಿತಿ ನೋಡಿದರೆ ಏನು ಆಗುವ ಸಾಧ್ಯತೆಯೂ ಬಹಳ ವಿರಳ. ಏಕೆಂದರೆ ಈ ಕ್ರಮಕ್ಕೆ ಶಿಫಾರಸು ಮಾಡಬೇಕಾದ ಪಕ್ಷದ ಶಿಸ್ತು ಸಮಿತಿಯೇ ಸದ್ಯಕ್ಕೆ ಬಹುತೇಕ ಅಸ್ತಿತ್ವದಲ್ಲಿಲ್ಲ ! 

ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಪ್ರಚಾರದಲ್ಲಿರುವಾಗ ಪ್ರಜ್ಞಾ ಸಿಂಗ್ ಈ ವಿವಾದಾಸ್ಪದ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾದಾಗ ಬಿಜೆಪಿ ಇದನ್ನು ಶಿಸ್ತು ಸಮಿತಿಗೆ ವಹಿಸಿತ್ತು. ಮೇ 17 ರಂದು ಈ ಬಗ್ಗೆ ಬಿಜೆಪಿ ಪ್ರಕಟಣೆ ನೀಡಿತ್ತು. ಹತ್ತು ದಿನದೊಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಪಕ್ಷಾಧ್ಯಕ್ಷ ಅಮಿತ್ ಶಾ ಹೇಳಿದ್ದರು.  ಗಾಂಧಿ ಹಂತಕ ದೇಶಭಕ್ತ ಎಂದು ಪ್ರಜ್ಞಾ ಸಿಂಗ್ ಹೇಳಿರುವುದನ್ನು ತಾನು ಇಂದಿಗೂ ಕ್ಷಮಿಸುವುದಿಲ್ಲ ಎಂದು ಅದೇ ದಿನ ಪ್ರಧಾನಿ ಮೋದಿ ಅವರೂ ಹೇಳಿದ್ದರು. ಈಗ ತಿಂಗಳಾದರೂ ಈ ಬಗ್ಗೆ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ. 

ಇದಕ್ಕೆ ಕಾರಣ - ಪಕ್ಷದ ಮೂರು ಸದಸ್ಯರ ಶಿಸ್ತು ಸಮಿತಿಯೇ ಈಗ ಬಹುತೇಕ ಅಸ್ತಿತ್ವದಲ್ಲಿಲ್ಲ. ಅದರ ಅಧ್ಯಕ್ಷ ಗಣೇಶಿ ಲಾಲ್ ಒಡಿಶಾ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಇನ್ನೋರ್ವ ಸದಸ್ಯ ವಿಜಯ್ ಚಕ್ರವರ್ತಿ ವೈಯಕ್ತಿಕ ಕಾರಣ ನೀಡಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂರನೇ ಸದಸ್ಯ ಸತ್ಯದೇವ್ ಸಿಂಗ್ ಅವರು ಉತ್ತರ ಪ್ರದೇಶ ರಾಜ್ಯ ಘಟಕದ ಶಿಸ್ತು ಸಮಿತಿಯ ಅಧ್ಯಕ್ಷರೂ ಹೌದು. ಅಲ್ಲಿ ಅವರಿಗೆ ಈಗಾಗಲೇ ಪಕ್ಷ ವಿರೋಧಿ ಚಟುವಟಿಕೆಗಳ ಕುರಿತ ನೂರಕ್ಕೂ ಹೆಚ್ಚು ದೂರುಗಳನ್ನು ಪರಿಶೀಲಿಸುವ ಕೆಲಸ ಬಾಕಿಯುಳಿದಿದೆ! 

ಪ್ರಜ್ಞಾ ಸಿಂಗ್ ಪ್ರಕರಣವನ್ನು ಶಿಸ್ತು ಸಮಿತಿಗೆ ವಹಿಸಿದಾಗ ಅದರಲ್ಲಿದ್ದ ಏಕೈಕ ಸದಸ್ಯ ಸತ್ಯದೇವ್ ಸಿಂಗ್ ಅವರು ಇಷ್ಟು ದೊಡ್ಡ ಪ್ರಕರಣವನ್ನು ಒಬ್ಬ ಸದಸ್ಯ ತೀರ್ಮಾನಿಸಲು ಅಸಾಧ್ಯ. ಹಾಗಾಗಿ ಪ್ರಜ್ಞಾ ಸಿಂಗ್ ಅವರನ್ನು ಅಮಾನತು ಮಾಡುವ ಕುರಿತು ನೀವೇ ನಿರ್ಧಾರ ತೆಗೆದುಕೊಳ್ಳಿ ಅಥವಾ ಪಕ್ಷಾಧ್ಯಕ್ಷರಿಗೆ ವರ್ಗಾಯಿಸಿ ಎಂದು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರನ್ನು ಕೇಳಿಕೊಂಡಿದ್ದರು. 

ಅಮಿತ್ ಶಾ ಸೂಚಿಸಿದ್ದ ಹತ್ತು ದಿನಗಳ ಗಡುವು ಮುಗಿದು ಹಲವು ದಿನಗಳ ಬಳಿಕ ಜೂನ್ 4 ರಂದು ಶಿಸ್ತು ಸಮಿತಿಗೆ ಪಂಜಾಬ್ ನ ಅವಿನಾಶ್ ರಾಯ್ ಖನ್ನಾ ಹಾಗು ಉತ್ತರ ಪ್ರದೇಶದ ಓಮ್ ಪಾಠಕ್ ಅವರನ್ನು ಪಕ್ಷ ನೇಮಿಸಿತು.  ಪ್ರಜ್ಞಾ ಪ್ರಕರಣದ ಕುರಿತು theprint.in  ಪಾಠಕ್ ಅವರನ್ನು ಕೇಳಿದಾಗ ನಾನು ಆ ಬಗ್ಗೆ ಮಾತಾಡಲು ಸಾಧ್ಯವಿಲ್ಲ ಎಂದವರು ಹೇಳಿದರೆ ಇನ್ನೋರ್ವ ಹೊಸ ಸದಸ್ಯ ಖನ್ನಾ ಅವರು ಪ್ರಕರಣದ ಸಭೆಗಳ ವಿವರ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಅವರಲ್ಲಿದೆ ಎಂದು ಹೇಳಿದರಲ್ಲದೆ ತನಗೆ ತಿಳಿದಂತೆ ಈವರೆಗೆ ಈ ವಿಷಯದಲ್ಲಿ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ, ಅಮಿತ್ ಶಾ ಅವರ ಕೈಯಲ್ಲಿ ಅಂತಿಮ ತೀರ್ಮಾನವಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X