Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಿಂಗ ರೂಢಮಾದರಿಯನ್ನು ಕೈಬಿಟ್ಟ...

ಲಿಂಗ ರೂಢಮಾದರಿಯನ್ನು ಕೈಬಿಟ್ಟ ಮಹಾರಾಷ್ಟ್ರದ ಶಾಲಾ ಪಠ್ಯಪುಸ್ತಕಗಳು

ವಾರ್ತಾಭಾರತಿವಾರ್ತಾಭಾರತಿ19 Jun 2019 7:35 PM IST
share
ಲಿಂಗ ರೂಢಮಾದರಿಯನ್ನು ಕೈಬಿಟ್ಟ ಮಹಾರಾಷ್ಟ್ರದ ಶಾಲಾ ಪಠ್ಯಪುಸ್ತಕಗಳು

ಪುಣೆ,ಜೂ.19: ತಾಯಿ ಅಡುಗೆಮನೆಯಲ್ಲಿ ತರಕಾರಿಗಳನ್ನು ಹೆಚ್ಚುತ್ತಿರುವ ಮತ್ತು ತಂದೆ ಹಾಯಾಗಿ ಕುರ್ಚಿಯಲ್ಲಿ ಕುಳಿತುಕೊಂಡು ವೃತ್ತಪತ್ರಿಕೆಯನ್ನು ಓದುತ್ತಿರುವ ಚಿತ್ರಗಳಿದ್ದ ಪಠ್ಯಪುಸ್ತಕಗಳನ್ನು ಓದಿಕೊಂಡೇ ಅವೆಷ್ಟೋ ತಲೆಮಾರುಗಳು ಬೆಳೆದಿವೆ. ಆದರೆ ಮಹಾರಾಷ್ಟ್ರದಲ್ಲಿ ಇದೀಗ ಸಂಪೂರ್ಣವಾಗಿ ಬದಲಾಗಲಿದೆ.

ರಾಜ್ಯದ ಪಠ್ಯಕ್ರಮ ಮಂಡಳಿ ಬಾಲಭಾರತಿಯು ಬದಲಾಗುತ್ತಿರುವ ಸಾಮಾಜಿಕ ಸ್ವರೂಪಕ್ಕನುಗುಣವಾಗಿ ಲಿಂಗ ಸಮಾನತೆಯನ್ನು ಎತ್ತಿಹಿಡಿಯಲು ಮತ್ತು ಮಹಿಳೆಯನ್ನು ಹೆಚ್ಚು ಪ್ರಗತಿಪರ ಹಿನ್ನೆಲೆಯಲ್ಲಿ ಬಿಂಬಿಸಲು ತನ್ನ ಹಲವಾರು ಪಠ್ಯಪುಸ್ತಕಗಳು ಮತ್ತು ಅವುಗಳಲ್ಲಿಯ ಇಂತಹ ಚಿತ್ರಗಳಲ್ಲಿ ಬದಲಾವಣೆಗಳನ್ನು ತಂದಿದೆ ಎಂದು ಮಂಡಳಿಯ ಅಧಿಕಾರಿಯೋರ್ವರು ತಿಳಿಸಿದರು. ಬಾಲಭಾರತಿಯು ಪಠ್ಯ ಪುಸ್ತಕಗಳಲ್ಲಿಯ ಲಿಂಗ ರೂಢಮಾದರಿಯನ್ನು ನಿವಾರಿಸಲು ಉದ್ದೇಶಿಸಿದೆ ಮತ್ತು ಎರಡನೇ ತರಗತಿಯ ಪರಿಷ್ಕೃತ ಪಠ್ಯಪುಸ್ತಕದಲ್ಲಿ ಪುರುಷರು ಮತ್ತು ಮಹಿಳೆಯರು ಮನೆಗೆಲಸಗಳನ್ನು ಹಂಚಿಕೊಂಡು ಮಾಡುತ್ತಿರುವ ಚಿತ್ರಗಳು ಮತ್ತು ವಿಷಯಗಳನ್ನು ಸೇರಿಸಿದೆ ಎಂದು ಅವರು ಹೇಳಿದರು.

ಚಿತ್ರವೊಂದರಲ್ಲಿ ಪುರುಷ ಮತ್ತು ಮಹಿಳೆ ಅಕ್ಕಪಕ್ಕದಲ್ಲಿ ಕುಳಿತುಕೊಂಡು ತರಕಾರಿಗಳನ್ನು ಸ್ವಚ್ಛಗೊಳಿಸುತ್ತಿದ್ದರೆ,ಇತರ ಚಿತ್ರಗಳಲ್ಲಿ ಮಹಿಳೆಯನ್ನು ವೈದ್ಯೆ,ಟ್ರಾಫಿಕ್ ಪೊಲೀಸ್ ಇತ್ಯಾದಿ ರೂಪಗಳಲ್ಲಿ ಬಿಂಬಿಸಲಾಗಿದೆ. ಒಂದು ಚಿತ್ರದಲ್ಲಿ ಪುರುಷನನ್ನು ಬಾಣಸಿಗನ ರೂಪದಲ್ಲಿ ತೋರಿಸಲಾಗಿದ್ದು,ಚಿತ್ರವನ್ನು ನೋಡಿ ಕೆಲವು ವಾಕ್ಯಗಳನ್ನು ಬರೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ಚಿತ್ರದಲ್ಲಿ ಪುರುಷ ಬಟ್ಟೆಗಳಿಗೆ ಇಸ್ತ್ರಿ ಹಾಕುತ್ತಿರುವುದನ್ನು ತೋರಿಸಲಾಗಿದೆ.

 ಪಠ್ಯಪುಸ್ತಕದ ಆರಂಭದಲ್ಲಿ ಹಲವಾರು ಸೂಚನೆಗಳ ಮೂಲಕ ಮಹಿಳಾ ಪೈಲಟ್,ಪುರುಷ ಬಾಣಸಿಗ ಮತ್ತು ಮಹಿಳಾ ಪೊಲೀಸ್‌ನಂತಹ ಚಿತ್ರಗಳು ಮತ್ತು ವಿಷಯಗಳನ್ನು ಗಮನಿಸುವಂತೆ ಹಾಗೂ ಅವುಗಳ ಬಗ್ಗೆ ಮತ್ತು ಈ ಸಾಮಾಜಿಕ ಬದಲಾವಣೆಗಳ ಕುರಿತು ಮಾತನಾಡುವಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

ಪುರುಷರು ಮತ್ತು ಮಹಿಳೆಯರು ಸಮಾನರು ಮತ್ತು ಇಬ್ಬರೂ ಯಾವುದೇ ಕೆಲಸವನ್ನು ಮಾಡಬಲ್ಲರು ಎಂಬ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ ಮೈಗೂಡಿಸುವುದು ಈ ಬದಲಾವಣೆಗಳ ಹಿಂದಿನ ಉದ್ದೇಶವಾಗಿದೆ ಎಂದು ಬಾಲಭಾರತಿಯ ನಿರ್ದೇಶಕ ಸುನಿಲ ಮಗರ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಲಿಂಗ ಸಮಾನತೆಗೆ ಒತ್ತು ನೀಡುವ ಪಠ್ಯಪುಸ್ತಕಗಳಲ್ಲಿಯ ಈ ಬದಲಾವಣೆಗಳನ್ನು ಶಿಕ್ಷಕ ವೃಂದವು ಸ್ವಾಗತಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X