Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಚಿಕೆರೆ ಭೂಮಿಯಲ್ಲಿ ಬಿರುಕು: ಭೂ...

ಮಂಚಿಕೆರೆ ಭೂಮಿಯಲ್ಲಿ ಬಿರುಕು: ಭೂ ವಿಜ್ಞಾನಿಗಳ ತಂಡದಿಂದ ಪರಿಶೀಲನೆ

‘ಮುರಕಲ್ಲಿನ ಭೌಗೋಳಿಕ ಶಿಲಾ ರಚನೆಯಲ್ಲಿ ಬಿರುಕು ಸಾಮಾನ್ಯ’

ವಾರ್ತಾಭಾರತಿವಾರ್ತಾಭಾರತಿ19 Jun 2019 8:28 PM IST
share
ಮಂಚಿಕೆರೆ ಭೂಮಿಯಲ್ಲಿ ಬಿರುಕು: ಭೂ ವಿಜ್ಞಾನಿಗಳ ತಂಡದಿಂದ ಪರಿಶೀಲನೆ

ಉಡುಪಿ, ಜೂ.19: 80 ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯ ಮಣಿಪಾಲ- ಅಲೆವೂರು ರಸ್ತೆಯ ಮಂಚಿಕೆರೆ ಎಂಬಲ್ಲಿ ಭೂಮಿ ಹಾಗೂ ಮನೆಗಳ ಗೋಡೆ ಗಳಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಡುಪಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಅಂತರ್ಜಲ ಪ್ರಾಧಿಕಾರದ ಭೂ ವಿಜ್ಞಾನಿಗಳ ತಂಡ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಾನ್‌ಜಿ ನಾಯ್ಕ ನೇತೃತ್ವದಲ್ಲಿ ಭೂ ವಿಜ್ಞಾನಿಗಳಾದ ಮಹೇಶ್, ಡಾ.ಮಹದೇಶ್ವರ, ಗೌತಮ್ ಶಾಸ್ತ್ರಿ, ಸಂಧ್ಯಾ, ಅಂತರ್ಜಲ ಪ್ರಾಧಿಕಾರದ ಪ್ರಭಾರ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ, ಕಂದಾಯ ನಿರೀಕ್ಷಕ ಉಪೇಂದ್ರ ತಂಡ ಮಂಚಿಕೆರೆಯ ಭೌಗೋಳಿಕ ಶಿಲಾ ರಚನೆಯ ಬಗ್ಗೆ ಅಧ್ಯಯನ ನಡೆಸಿತು.

ಬಿರುಕು ಬಿಟ್ಟ ಮಂಚಿಕೆರೆಯ ನಾಗಬ್ರಹ್ಮಸ್ಥಾನದ ಎದುರಿನ ಎರಡನೆ ಅಡ್ಡ ರಸ್ತೆಯ ಭೂಮಿ, ಮುರಕಲ್ಲಿನ ಪ್ರದೇಶ, ಮುಖ್ಯರಸ್ತೆಯ ಇನ್ನೊಂದು ಭಾಗ ದಲ್ಲಿರುವ ರಮೇಶ್ ನಾಯ್ಕೊ ಹಾಗೂ ಲೋಕೇಶ್ ದೇವಾಡಿಗ ಎಂಬವರ ಬಿರುಕು ಬಿಟ್ಟ ಗೋಡೆ, ಬಾವಿ, ಕಂಪೌಂಡು ಮತ್ತು ಅಲ್ಲೇ ಸಮೀಪದಲ್ಲಿ ಮಳೆಯ ನೀರು ಬಿರುಕಿನೊಳಗೆ ಹರಿದು ಸೇರುವ ಸ್ಥಳಗಳ ಬಗ್ಗೆ ಕೂಲಂಕಷ ವಾಗಿ ಪರಿಶೀಲನೆ ನಡೆಲಾಯಿತು.

ಭೂಮಿಯೊಳಗಿನ ಸಾಮಾನ್ಯ ಪ್ರಕ್ರಿಯೆ

‘ಮಂಚಿಕೆರೆಯ ಭೌಗೋಳಿಕ ಶಿಲಾ ರಚನೆ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಇಲ್ಲಿ ಒಂದೆಡೆ ತಗ್ಗು ಮತ್ತೊಂದು ಕಡೆ ಎತ್ತರ ಪ್ರದೇಶ ಇದೆ. ಇಲ್ಲಿನ ಭೂಮಿಯ ಮೇಲ್ಭಾಗದಲ್ಲಿ ಮುರಕಲ್ಲು ಮತ್ತು ಒಳಗಿನ ಪದರದಲ್ಲಿ ಜೇಡಿ ಮಣ್ಣು ಇದೆ. ಇತ್ತೀಚೆಗೆ ಅಂತರ್ಜಲ ಮಟ್ಟ ಕಡಿಮೆಯಾಗಿರುವ ಪರಿಣಾಮ ಭೂಮಿ ಒಳಗೆ ಉಷ್ಣತೆ ಹೆಚ್ಚಾಗಿದೆ. ಹೀಗೆ ಮಳೆಯ ನೀರು ಭೂಮಿ ಒಳಗೆ ಇಂಗಿದಾಗ ಮುರಕಲ್ಲಿನ ಅಡಿಭಾಗದಲ್ಲಿರುವ ಮೃದುವಾದ ಜೇಡಿ ಮಣ್ಣು ಮಳೆಯ ನೀರಿ ನಲ್ಲಿ ನಿಧಾನವಾಗಿ ಕೊಚ್ಚಿಕೊಂಡು ಹೋಗಿರುತ್ತದೆ. ಇದರಿಂದ ಭೂಮಿ ಒಳಗಡೆ ನಡೆಯುತ್ತಿರುವ ಸಾಮಾನ್ಯ ಪ್ರಕ್ರಿಯೆಯಿಂದ ಮೇಲ್ಭಾಗದಲ್ಲಿರುವ ಸಡಿಲಾದ ರಚನೆಯಲ್ಲಿ ಬಿರುಕು ಕಾಣಿಸಿಕೊಂಡಿದೆ’ ಎಂದು ಹಿರಿಯ ಭೂ ವಿಜ್ಞಾನಿ ರಾನ್‌ಜಿ ನಾಯ್ಕ ಅಭಿಪ್ರಾಯ ಪಟ್ಟರು.

ಇಲ್ಲಿ ಉದ್ದಕ್ಕೆ ಬಿರುಕು ಬಿಡದೆ ವೃತ್ತಕಾರದಲ್ಲಿ ಬಿರುಕು ಕಾಣಸಿಕೊಂಡಿದೆ. ವೃತ್ತ ಆಕಾರದಲ್ಲಿರುವ ಇಲ್ಲಿನ ತಗ್ಗು ಪ್ರದೇಶದ ಭೂಮಿ ಒಳಗಡೆ ನಡೆದ ಪ್ರತ್ರಿಯೆಯಿಂದ ವೃತ್ತ ಆಕಾರದಲ್ಲಿ ಭೂಮಿ ಬಿರುಕು ಬಿಟ್ಟು ಸಿಂಕ್ ಆಗಿರುವ ರೀತಿಯಲ್ಲಿ ಕಾಣುತ್ತದೆ. ಇಲ್ಲಿನ ಎತ್ತರ ಪ್ರದೇಶದ ಎಲ್ಲೂ ಬಿರುಕು ಕಾಣಿಸಿ ಕೊಂಡಿಲ್ಲ. ಇದು ಬಹಳ ನಿಧಾನವಾದ ಪ್ರಕ್ರಿಯೆಯಾಗಿದ್ದು, ತಕ್ಷಣಕ್ಕೆ ಆಗಿರುವು ದಲ್ಲ. ಬಿರುಕು ತುಂಬಾ ಹಿಗ್ಗುವ ಸಾಧ್ಯತೆ ಕಡಿಮೆ ಎಂದರು.

ಭೂಕಂಪನದ ಬಿರುಕು ಅಲ್ಲ

ಇದು ಭೂಕಂಪನದಿಂದ ಆಗಿರುವ ಬಿರುಕು ಅಲ್ಲ. ಕರಾವಳಿ ಹಾಗೂ ಮಲೆ ನಾಡು ಪ್ರದೇಶದ ಭೌಗೋಳಿಕ ಶಿಲಾ ರಚನೆಯಲ್ಲಿ ಮಳೆಗಾಲ ಆರಂಭದಲ್ಲಿ ಇಂತಹ ಪ್ರಕ್ರಿಯೆ ಸಾಮಾನ್ಯವಾಗಿ ನಡೆಯುತ್ತಿರುತ್ತದೆ. ಮೇಲ್ನೋಟಕ್ಕೆ ಈ ಬಿರುಕು ಭೂಕಂಪನಕ್ಕೆ ಸಂಬಂಧಿಸಿದ್ದಲ್ಲ ಎಂಬುದು ಕಂಡು ಬರುತ್ತದೆ ಎಂದು ರಾನ್‌ಜಿ ನಾಯ್ಕ ಸ್ಪಷ್ಟಪಡಿಸಿದರು.

ಈ ಬೆಳವಣಿಗೆಯಿಂದ ಯಾರು ಕೂಡ ಭಯ ಪಡುವ ಅಗತ್ಯ ಇಲ್ಲ. ಇಂತಹ ಮುರಕಲ್ಲಿನ ಪ್ರದೇಶಗಳಲ್ಲಿ ಇದು ಸಾಮಾನ್ಯವಾಗಿರುತ್ತದೆ. ಇದು ಗಂಭೀರ ವಿಚಾರ ಅಲ್ಲ. ಇಡೀ ತಂಡ ಈ ಕುರಿತು ಅವಲೋಕನ ನಡೆಸಿ ವರದಿ ಸಿದ್ಧಪಡಿಸಲಿದೆ. ಅಲ್ಲದೆ ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರ ಲಾುವುದು ಎಂದು ಅವರು ತಿಳಿಸಿದರು.

ಮಂಚಿಕೆರೆಯ ನಾಲ್ಕು ದಿಕ್ಕಿನಲ್ಲಿರುವ ಗುಹೆಯಿಂದ ಈ ಬಿರುಕು ಕಾಣಿಸಿ ಕೊಂಡಿರಬಹುದು ಎಂಬುದನ್ನು ನಾವು ತಕ್ಷಣಕ್ಕೆ ಹೇಳಲು ಆಗಲ್ಲ. ಈ ಕುರಿತು ಉನ್ನತ ಮಟ್ಟದ ಸಂಶೋಧನೆ ನಡೆಸಿದ ನಂತರವೇ ಹೇಳಬಹುದು. ಸದ್ಯ ಇಲ್ಲಿ ದೊಡ್ಡ ಮಟ್ಟದ ಸಂಶೋಧನೆ ಮಾಡುವಷ್ಟು ಗಂಭೀರ ಸಮಸ್ಯೆ ಕಂಡು ಬಂದಿಲ್ಲ ಎಂದು ಅವರು ಹೇಳಿದರು.

ಇಲ್ಲಿನ ಭೂಮಿಯ ಮೇಲೆ ಮುರಕಲ್ಲಿನ ಮಣ್ಣಿನ ಅಂಶ ಜಾಸ್ತಿ ಇದೆ. ಈ ರೀತಿ ಪ್ರಕ್ರಿಯೆಗಳು ಮುರಕಲ್ಲಿನ ಪ್ರದೇಶಗಳಲ್ಲಿ ಹೆಚ್ಚಾಗಿ ನಡೆಯುತ್ತಿರುತ್ತದೆ. ಇಲ್ಲಿ ಜನ ವಸತಿ ಹೆಚ್ಚು ಇರುವುದರಿಂದ ಇದು ಗಮನಕ್ಕೆ ಬಂದಿದೆ. ಮುರಕಲ್ಲಿನ ಮಣ್ಣಿನಲ್ಲಿ ನೀರು ಬೇಗ ಇಂಗಿದರೆ, ಕೆಳಗಿನ ಪದರದಲ್ಲಿರುವ ಜೆಡಿಮಣ್ಣಿನಲ್ಲಿ ನೀರು ಕೆಳಗೆ ಇಳಿಯುವುದಿಲ್ಲ. ಆದುದರಿಂದ ಜೇಡಿಮಣ್ಣು ಕೊಚ್ಚಿ ಕೊಂಡು ಹೋದ ಪರಿಣಾಮ ಇಲ್ಲಿನ ತಗ್ಗು ಪ್ರದೇಶವು ವೃತ್ತ ಆಕಾರದಲ್ಲಿ ಸಿಂಕ್ ಆಗಿದೆ. ಇದಕ್ಕೆ ಭಯ ಪಡುವ ಅಗತ್ಯ ಇಲ್ಲ. ಇದು ಮುಂದೆ ದೊಡ್ಡ ಮಟ್ಟಕ್ಕೆ ಹೋಗಲ್ಲ.
-ಡಾ.ದಿನಕರ ಶೆಟ್ಟಿ, ಹಿರಿಯ ಭೂವಿಜ್ಞಾನಿ, ಅಂತರ್ಜಲ ಪ್ರಾಧಿಕಾರ.

ಮನೆಯ ಕಂಪೌಂಡ್ ಬಿರುಕು ಬಿಟ್ಟಿದ್ದು, ನೆರೆಮನೆಯ ಗೋಡೆ, ಬಾವಿ ಯಲ್ಲಿಯೂ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಮನೆಯಲ್ಲಿ ವಾಸ ಮಾಡಲು ಭಯವಾಗುತ್ತದೆ.

-ಮಾಲಿನಿ ಮಂಚಿಕೆರೆ, ಸ್ಥಳೀಯರು

ಗಂಜಿ ಕೇಂದ್ರಕ್ಕೆ ತೆರಳಲು ನಿರಾಕರಣೆ

ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜು, ಭೂಮಿ ಬಿರುಕು ಬಿಟ್ಟ ಮಂಚಿಕೆರೆ ಪ್ರದೇಶಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಗೋಡೆ, ಬಾವಿಯಲ್ಲಿ ಬಿರುಕು ಕಾಣಿಸಿಕೊಂಡಿರುವ ರಮೇಶ್ ನಾಯಕ್ ಕುಟುಂಬವನ್ನು ಗಂಜಿ ಕೇಂದ್ರಕ್ಕೆ ವರ್ಗಾಯಿಸುವಂತೆ ಸ್ಥಳೀಯ ಪಿಡಿಓಗೆ ಸೂಚನೆ ನೀಡಿದರು.

ಕುಟುಂಬದ ಜೀವದ ರಕ್ಷಣೆಯ ಹಿನ್ನೆಲೆಯಲ್ಲಿ ಬೇರೆ ಕಡೆ ಹೋಗುವುದು ಉತ್ತಮ ಎಂಬ ರಾಜು ಅವರ ಸಲಹೆಯನ್ನು ನಿರಾಕರಿಸಿದ ರಮೇಶ್ ನಾಯಕ್, ನಾನು 1991ರಲ್ಲಿ ಬ್ಯಾಂಕ್ ಸಾಲ ಮಾಡಿ ಈ ಮನೆ ನಿರ್ಮಿಸಿ ದ್ದೇನೆ. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸ ಮಾಡಿಕೊಂಡಿದ್ದೇನೆ. ಯಾವುದೇ ಕಾರಣಕ್ಕೂ ಈ ಮನೆ ಬಿಟ್ಟು ಹೋಗಲ್ಲ. ಬೇಕಾದರೆ ನಾನು ‘ಇಲ್ಲಿ ಯಾವುದೇ ಅಪಾಯವಾದರೂ ನಾನೇ ಹೊಣೆ’ ಎಂದು ಬರೆದು ಕೊಡುತ್ತೇನೆ. ಆದರೆ ಗಂಜಿ ಕೇಂದ್ರಕ್ಕೆ ಹೆಗಲು ನನಗೆ ಇಷ್ಟ ಇಲ್ಲ ಎಂದರು.

ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಪಂ ಅಧ್ಯಕ್ಷ ಶಾಂತಾರಾಮ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮನಾ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X