Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.: ಒಂದನೇ ತರಗತಿಯಿಂದಲೇ ಇಂಗ್ಲಿಷ್...

ದ.ಕ.: ಒಂದನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಪ್ರಕ್ರಿಯೆ

ಇಂಗ್ಲಿಷ್ ಮಾಧ್ಯಮಕ್ಕೆ 1583, ಕನ್ನಡ ಮಾಧ್ಯಮಕ್ಕೆ 224 ಮಕ್ಕಳ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ20 Jun 2019 7:04 PM IST
share

ಮಂಗಳೂರು, ಜೂ.20: ಸರಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕನ್ನಡದ ಜೊತೆ ಇಂಗ್ಲಿಷ್ ಮಾಧ್ಯಮ ಆರಂಭಿಸುವ ಪ್ರಕ್ರಿಯೆಗೆ ದ.ಕ.ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಅಂದರೆ, ದ.ಕ. ಜಿಲ್ಲೆಯಲ್ಲಿ ಆಯ್ಕೆ ಮಾಡಿಕೊಂಡಿರುವ 43 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸಂಖ್ಯೆ 1,583 ಮತ್ತು ಕನ್ನಡ ಮಾಧ್ಯಮಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಕೇವಲ 224 ಮಾತ್ರ.

ಆರಂಭದಲ್ಲಿ ಮಕ್ಕಳ ಸೇರ್ಪಡೆಗೆ ಯಾವುದೇ ಮಿತಿ ಇರಲಿಲ್ಲ. ಹಾಗಾಗಿ ದುಬಾರಿ ಶುಲ್ಕ ನೀಡಿ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗೆ ಸೇರಿಸಲಾಗದವರು ಸಮೀಪದ ಸರಕಾರಿ ಶಾಲೆಗೆ ಸೇರಿಸಿದ್ದರು. ಆ ಬಳಿಕ ರಾಜ್ಯ ಸರಕಾರವು ಮಕ್ಕಳ ಸೇರ್ಪಡೆಗೆ ಮಿತಿ ಏರಿತ್ತು. ಅಂದರೆ 30ಕ್ಕಿಂತ ಹೆಚ್ಚು ಮಕ್ಕಳನ್ನು ಸೇರಿಸಬಾರದು ಎಂದು ಸೂಚಿಸಿತ್ತು. ಇದಕ್ಕೆ ಹೆತ್ತವರು ತೀವ್ರ ವಿರೋಧ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಮಿತಿ ದಾಟಿದ ವಿದ್ಯಾರ್ಥಿಗಳಿಗೂ ಪ್ರವೇಶ ನೀಡಲಾಗಿದೆ. ಅಂದರೆ ದ.ಕ.ಜಿಲ್ಲೆಯ 43 ಶಾಲೆಗಳ ಪೈಕಿ 21ಕ್ಕೂ ಅಧಿಕ ಶಾಲೆಗಳಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ.

ಗರಿಷ್ಠ ಸೇರ್ಪಡೆಯ ಶಾಲೆಗಳು

ಬಂಟ್ವಾಳದ ದಡ್ಡಲಕಾಡು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ 106, ದೇರಳಕಟ್ಟೆಯ ಸರಕಾರಿ ಹಿ.ಪ್ರಾ. ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 104, ವಿಟ್ಲದ ಸರಕಾರಿ ಹಿ.ಪ್ರಾ. ಮಾದರಿ ಶಾಲೆಯಲ್ಲಿ 128, ಹಾರಾಡಿಯ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 63, ಬೆಳ್ಳಾರೆರ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ 62 ವಿದ್ಯಾರ್ಥಿಗಳು ಗರಿಷ್ಠ ಸಂಖ್ಯೆಯಲ್ಲಿ ಇಂಗ್ಲಿಷ್ ಮಾಧ್ಯಮಕ್ಕೆ ಪ್ರವೇಶ ಪಡೆದಿದ್ದಾರೆ.

20 ಶಾಲೆಗಳಲ್ಲಿ ಕನ್ನಡಕ್ಕೆ ವಿದ್ಯಾರ್ಥಿಗಳಿಲ್ಲ

ಆಂಗ್ಲ ಮಾಧ್ಯಮ ಆರಂಭಿಸಲು ಅವಕಾಶ ಪಡೆದಿರುವ ದ.ಕ.ಜಿಲ್ಲೆಯ 43 ಶಾಲೆಗಳ ಪೈಕಿ 20 ಶಾಲೆಗಳಲ್ಲಿ ಕನ್ನಡ ಮಾಧ್ಯಮಕ್ಕೆ ಯಾವುದೇ ವಿದ್ಯಾರ್ಥಿಯು ಪ್ರವೇಶ ಪಡೆಯದಿರುವುದು ಗಮನಾರ್ಹ. ಇದು ಕನ್ನಡಪರ ಸಂಘಟನೆಗಳ ಮುಖಂಡರಿಗೆ ಸವಾಲಾಗಿ ಪರಿಗಣಿಸಿದೆ.

2019-20ನೆ ಶೈಕ್ಷಣಿಕ ವರ್ಷದಿಂದ ಆರಂಭಗೊಂಡಿರುವ ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ದ.ಕ. ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿವೆ. ಹೆತ್ತವರು ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಿದ್ದಾರೆ. ವಿದ್ಯಾರ್ಥಿಗಳ ಸೇರ್ಪಡೆಗೆ ಸರಕಾರ ಮಿತಿ ಹೇರುವ ಮೊದಲೇ ಅನೇಕ ಶಾಲೆಗಳಲ್ಲಿ 30ಕ್ಕಿಂತ ಅಧಿಕ ವಿದ್ಯಾರ್ಥಿಗಳಿಗೆ ಪ್ರವೇಶ ಸಿಕ್ಕಿತ್ತು.

ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷ್‌ಗೆ ಮಾತ್ರ ಆದ್ಯತೆ ಎಂಬ ಕಲ್ಪನೆ ಬೇಡ. ಅಲ್ಲೂ ಪ್ರಥಮ ಭಾಷೆ ಕನ್ನಡವೇ ಇರುತ್ತದೆ. ಮತ್ತು ಅದು ಕಡ್ಡಾಯವೂ ಆಗಿರುತ್ತದೆ. ಅಲ್ಲದೆ ಕನ್ನಡ ಭಿತ್ತಿಪತ್ರ, ಕಮ್ಮಟ, ಭಾಷಣ ಸ್ಪರ್ಧೆ, ಸಾಹಿತ್ಯ ಸಮ್ಮೇಳನ, ನಾಟಕ ಹಾಡು, ಜನಪದ ಮುಂತಾದ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಅಲ್ಲಿ ಕನ್ನಡಕ್ಕೆ ಪೂರಕ ಕಾರ್ಯಕ್ರಮಕ್ಕೆ ಒತ್ತು ನೀಡಲಾಗುತ್ತದೆ.

- ವೈ.ಶಿವರಾಮಯ್ಯ ಡಿಡಿಪಿಐ, ದ.ಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X