Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಪಂಚಾಯತ್ ಅಧ್ಯಕ್ಷೆಯ ಪತಿಯನ್ನು...

ದಲಿತ ಪಂಚಾಯತ್ ಅಧ್ಯಕ್ಷೆಯ ಪತಿಯನ್ನು ಥಳಿಸಿ ಹತ್ಯೆಗೈದ ಗುಂಪು

ವಾರ್ತಾಭಾರತಿವಾರ್ತಾಭಾರತಿ20 Jun 2019 7:48 PM IST
share
ದಲಿತ ಪಂಚಾಯತ್ ಅಧ್ಯಕ್ಷೆಯ ಪತಿಯನ್ನು ಥಳಿಸಿ ಹತ್ಯೆಗೈದ ಗುಂಪು

ಗಾಂಧಿನಗರ,ಜೂ.20: ಬೋಟಾದ್ ಜಿಲ್ಲೆಯ ಜಾಲಿಯಾ ಗ್ರಾಮದ ಪಂಚಾಯತ್ ಅಧ್ಯಕ್ಷೆಯ ಪತಿಯನ್ನು  ಗುಂಪೊಂದು ಥಳಿಸಿ ಹತ್ಯೆಗೈದಿದೆ.

ದಲಿತ ಸಮುದಾಯಕ್ಕೆ ಸೇರಿದ ಗೀತಾ ಸೋಲಂಕಿ ಅವರ ಪತಿ ಮನ್ಜಿಭಾಯಿ ಸೋಲಂಕಿ (51) ಕೊಲೆಯಾಗಿರುವ ವ್ಯಕ್ತಿ. ರಣಪುರ-ಬರ್ವಾಲಾ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅವರನ್ನು ಆರು ಜನರ ಗುಂಪು ಹತ್ಯೆ ಮಾಡಿದೆ.

 ಗಂಭೀರವಾಗಿ ಗಾಯಗೊಂಡಿದ್ದ ಸೋಲಂಕಿಯನ್ನು ಸಂಬಂಧಿಕರು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರಾದರೂ ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರು. ಕಾರೊಂದು ತನ್ನ ಬೈಕಿಗೆ ಢಿಕ್ಕಿ ಹೊಡೆದಿತ್ತು ಮತ್ತು ಅದರಲ್ಲಿದ್ದ ದುಷ್ಕರ್ಮಿಗಳು ತನ್ನನ್ನು ಕಬ್ಬಿಣದ ಸರಳುಗಳು ಮತ್ತು ಪೈಪ್‌ಗಳಿಂದ ಥಳಿಸಿದ್ದರು ಎಂದು ಸಾಯುವ ಮುನ್ನ ಸೋಲಂಕಿ ಹೇಳಿದ್ದನ್ನು ಸಂಬಂಧಿಗಳು ಧ್ವನಿಮುದ್ರಿಸಿಕೊಂಡಿದ್ದಾರೆ.

ಪತ್ನಿ ಗೀತಾ ಗ್ರಾಮ ಪಂಚಾಯತ್‌ನ ಸರಪಂಚ ಆಗಿದ್ದರೆ,ಸೋಲಂಕಿ ಕೂಡ ಸದಸ್ಯರಾಗಿದ್ದು ಅನೌಪಚಾರಿಕವಾಗಿ ಉಪ ಸರಪಂಚ ಹುದ್ದೆಯನ್ನು ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

"ನಾವು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಸೋಲಂಕಿ ತನ್ನ ಸಂಬಂಧಿಕರಿಗೆ ನೀಡಿರುವ ‘ಮರಣ ಹೇಳಿಕೆ ’ಯನ್ನು ನಾವು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ" ಎಂದು ಡಿವೈಎಸ್‌ಪಿ ರಾಜದೀಪ ಸಿಂಗ್ ನಕುಂ ತಿಳಿಸಿದರು.

ಸೋಲಂಕಿ ದಂಪತಿ ಕಾಠಿ ದರ್ಬಾರ್ ಸಮುದಾಯದ ಕೆಲವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರು ಮತ್ತು ಅವರಿಂದ ತಮಗೆ ಜೀವ ಬೆದರಿಕೆಯಿದೆ ಎಂದು ಭಾವಿಸಿದ್ದರು. ಹೀಗಾಗಿ ಅವರು ಪೊಲೀಸ್ ರಕ್ಷಣೆಗಾಗಿ ಪದೇಪದೇ ಕೋರಿಕೊಂಡಿದ್ದರು. ಆದರೆ ಅವರಿಗೆ ರಕ್ಷಣೆ ದೊರಕಿರಲಿಲ್ಲ ಎಂದು ಹೇಳಿರುವ ಸೋಲಂಕಿ ಕುಟುಂಬವು,ಈ ಹಿಂದೆಯೂ ಮನ್ಜಿಭಾಯಿ ಸೋಲಂಕಿ ಮೇಲೆ ನಾಲ್ಕು ಬಾರಿ ದಾಳಿಗಳು ನಡೆದಿದ್ದವು ಎಂದು ಆರೋಪಿಸಿದೆ.

ಸೋಲಂಕಿ ಪೊಲೀಸ್ ರಕ್ಷಣೆಯನ್ನು ಕೋರಿ ಜೂ.6ರಂದು ತನ್ನ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಪದ್ಧತಿಯಂತೆ ಸಂಬಂಧಿತ ಪೊಲೀಸ್ ಠಾಣೆಯು ಬೆದರಿಕೆಯ ಬಗ್ಗೆ ಪರಿಶೀಲನೆಯನ್ನು ಕೈಗತ್ತಿಕೊಂಡಿತ್ತು ಎಂದು ಬೋಟಾದ್ ಎಸ್‌ಪಿ ಹರ್ಷದ್ ಮೆಹ್ತಾ ತಿಳಿಸಿದರು.

ಕಳೆದ 20 ವರ್ಷಗಳಿಂದ ನಮ್ಮ ಕುಟುಂಬದವರೇ ಗ್ರಾಮದ ಸರಪಂಚರಾಗಿ ಆಯ್ಕೆಯಾಗುತ್ತಿದ್ದಾರೆ. 2010ರಿಂದಲೂ ನನ್ನ ತಂದೆ ಮತ್ತು ದರ್ಬಾರಿಗಳ ನಡುವೆ ಮನಸ್ತಾಪವಿತ್ತು. ದಲಿತರು ಸರಪಂಚರಾಗಿ ಆಯ್ಕೆಯಾಗುವುದುನ್ನು ದರ್ಬಾರಿಗಳು ಸಹಿಸುತ್ತಿಲ್ಲ ಎಂದು ಸೋಲಂಕಿ ಪುತ್ರ ತುಷಾರ ಸುದ್ದಿಗಾರರಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X