Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಡ್ಸೆಯನ್ನು ಹೊಗಳಿದ ಟ್ವೀಟ್‌ ಶೇರ್...

ಗೋಡ್ಸೆಯನ್ನು ಹೊಗಳಿದ ಟ್ವೀಟ್‌ ಶೇರ್ ಮಾಡಿದ ಟೆಲಿಫೋನ್ ನಿಗಮ!

ವಾರ್ತಾಭಾರತಿವಾರ್ತಾಭಾರತಿ20 Jun 2019 8:01 PM IST
share
ಗೋಡ್ಸೆಯನ್ನು ಹೊಗಳಿದ ಟ್ವೀಟ್‌ ಶೇರ್ ಮಾಡಿದ ಟೆಲಿಫೋನ್ ನಿಗಮ!

ಹೊಸದಿಲ್ಲಿ,ಜೂ.20: ಸರಕಾರಿ ಸ್ವಾಮ್ಯದ ಮಹಾನಗರ ಟೆಲಿಫೋನ್ ನಿಗಮ(ಎಂಟಿಎನ್‌ಎಲ್)ದ ಟ್ವಿಟರ್ ಹ್ಯಾಂಡಲ್ ಗುರುವಾರ ಮಹಾತ್ಮಾ ಗಾಂಧಿಯವರ ಹಂತಕ ನಾಥುರಾಮ ಗೋಡ್ಸೆಯನ್ನು ಹೊಗಳಿರುವ ಟ್ವೀಟ್ ವೊಂದನ್ನು ಶೇರ್ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಟ್ವೀಟ್‌ನ್ನು ಅಳಿಸಲಾಗಿದೆ.

‘‘ ಈ ದಿನಗಳಲ್ಲಿ ಹಿಂದುಗಳು ಗೋಡ್ಸೆಯನ್ನು ಬೆಂಬಲಿಸಲು ಹೆದರುತ್ತಿದ್ದಾರೆ,ಆದರೆ ಮುಸ್ಲಿಮರು ತಮ್ಮ ಮಕ್ಕಳಿಗೆ ತೈಮೂರ್ ಹೆಸರಿಟ್ಟು ಹೆಮ್ಮೆ ಪಡುತ್ತಿದ್ದಾರೆ. ದೇಶಪ್ರೇಮವು ನಿಮ್ಮ ರಕ್ತದಲ್ಲಿ ಹರಿಯಬೇಕು ’’ಎಂದು ನೀತಾ ಅಂಬಾನಿ ಫ್ಯಾನ್ ಹೆಸರಿನ ಖಾತೆಯು ಟ್ವೀಟಿಸಿದೆ.

ಇದನ್ನು ಶೇರ್ ಮಾಡಿಕೊಂಡ ಎಂಟಿಎನ್‌ಎಲ್ ‘ಈ ಸತ್ಯವನ್ನು ಅರಗಿಸಿಕೊಳ್ಳುವುದು ಕಷ್ಟ ’ಎಂದು ಹೇಳಿದೆ.

ಸಾರ್ವತ್ರಿಕ ಚುನಾವಣೆಗಳ ಸಂದರ್ಭ ಗೋಡ್ಸೆ ವ್ಯಾಪಕ ಚರ್ಚೆಗಳಿಗೆ ವಸ್ತುವಾಗಿದ್ದ. ಗೋಡ್ಸೆ ಭಾರತದ ಮೊದಲ ಭಯೋತ್ಪಾದಕನಾಗಿದ್ದ ಎಂದು ನಟ-ರಾಜಕಾರಣಿ ಕಮಲ್ ಹಾಸನ್ ಬಣ್ಣಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆಗಳು ವ್ಯಕ್ತವಾಗಿದ್ದರೂ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಅವರು,ಪ್ರತಿ ಧರ್ಮದಲ್ಲಿಯೂ ಉಗ್ರವಾದಿಗಳಿದ್ದಾರೆ ಮತ್ತು ತನ್ನ ಹೇಳಿಕೆಯು ಐತಿಹಾಸಿಕ ಸತ್ಯವಾಗಿದೆ ಎಂದಿದ್ದರು.ಕಮಲ್ ಹೇಳಿಕೆಗೆ ಪ್ರತಿಕ್ರಿಯಿಸುತ್ತ ‘ಗೋಡ್ಸೆ ದೇಶಪ್ರೇಮಿಯಾಗಿದ್ದ ’ಎಂದು ಬಣ್ಣಿಸಿದ್ದಕ್ಕಾಗಿ ಈಗ ಬಿಜೆಪಿ ಸಂಸದೆಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ತನ್ನದೇ ಪಕ್ಷದ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ನಾಯಕರ ಟೀಕೆಗಳಿಗೆ ಗುರಿಯಾಗಿದ್ದರು.

ಟ್ವೀಟ್‌ನಲ್ಲಿ ಪ್ರಸ್ತಾಪಿಸಲಾದ ತೈಮೂರ್ ಬಾಲಿವುಡ್ ದಂಪತಿ ಸೈಫ್ ಅಲಿ ಖಾನ್-ಕರೀನಾ ಕಪೂರ್ ಪುತ್ರನ ಹೆಸರಾಗಿದೆ. 

ಎಂಟಿಎನ್‌ಎಲ್‌ನ ಟ್ವೀಟ್ ಟ್ವಿಟರ್ ಬಳಕೆದಾರರಿಂದ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದೆ. ‘ಎಂಟಿಎನ್‌ಎಲ್ ಟ್ವಿಟರ್‌ನಲ್ಲಿ ನಿಮ್ಮನ್ನು ಫಾಲೋ ಮಾಡುತ್ತಿದೆ ಮತ್ತು ಅದು ಗೋಡ್ಸೆಯ ಬೆಂಬಲಿಗನೂ ಆಗಿದೆ. ಹೀಗಾಗಿ ನೀವೀಗ ಎಂಟಿಎನ್‌ಎಲ್‌ನ್ನು ಫಾಲೋ ಮಾಡಬೇಕು’ ಎಂದು ಓರ್ವ ಟ್ವೀಟಿಗ ಮೋದಿಯವರನ್ನು ಕಿಚಾಯಿಸಿದ್ದರೆ,ತನ್ನ ಹೆಸರನ್ನು ‘ಅಫಿಷಿಯಲ್ ನಾಥುರಾಮ ಗೋಡ್ಸೆ ’ಎಂದು ಬದಲಿಸಿಕೊಳ್ಳುವಂತೆ ಇನ್ನೋರ್ವ ಟ್ವೀಟಿಗ ಎಂಟಿಎನ್‌ಎಲ್‌ಗೆ ಸೂಚಿಸಿದ್ದಾನೆ.

ದೇಶವನ್ನು ನಂತರ ವಿಭಜಿಸಿ. ಮೊದಲು ಮೂರು ದಿನಗಳಿಂದ ಸ್ಥಗಿತಗೊಂಡಿರುವ ದೂರವಾಣಿ ಸಂಪರ್ಕಗಳನ್ನು ಸರಿಪಡಿಸಿ ಎಂದು ಇನ್ನೋರ್ವ ಟ್ವೀಟಿಗ ಕುಟುಕಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X