Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಷೇಧಿತ ಹತ್ತಿ ಬೀಜ ದಾಸ್ತಾನಿರಿಸಿದ್ದ...

ನಿಷೇಧಿತ ಹತ್ತಿ ಬೀಜ ದಾಸ್ತಾನಿರಿಸಿದ್ದ ಆರೋಪದಲ್ಲಿ ರೈತನ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Jun 2019 9:53 PM IST
share
ನಿಷೇಧಿತ ಹತ್ತಿ ಬೀಜ ದಾಸ್ತಾನಿರಿಸಿದ್ದ ಆರೋಪದಲ್ಲಿ ರೈತನ ಬಂಧನ

ಮುಂಬೈ, ಜೂ.20: ನಿಷೇಧಿತ ಹೈಬ್ರೀಡ್ ತಳಿಯ ಟಾಲರೆಂಟ್ ಬಿಟಿ(ಎಚ್‌ಟಿಬಿಟಿ) ಹತ್ತಿಬೀಜವನ್ನು ಮನೆಯಲ್ಲಿ ದಾಸ್ತಾನಿರಿಸಿದ್ದ ಆರೋಪದಲ್ಲಿ ಮಹಾರಾಷ್ಟ್ರದ ಉಮ್ರಾದ್ ಗ್ರಾಮದ ರೈತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ಪ್ರಪ್ರಥಮ ಬಾರಿಗೆ ದೇಶದಲ್ಲಿ ಈ ರೀತಿಯ ಬಂಧನ ಪ್ರಕರಣ ನಡೆದಿದೆ. 41 ವರ್ಷದ ವಸಂತ್ ಮುಲೆ ಬಂಧಿತ ರೈತ. ಈತನನ್ನು ಬುಧವಾರ ಬುಲ್ದಾನಾ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಜಾಮೀನು ನಿರಾಕರಿಸಿ ಆರು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. 1996ರ ಬೀಜಕಾಯ್ದೆಯ ಉಲ್ಲಂಘನೆ, ಮೋಸ ಹಾಗೂ ವಂಚನೆ ಪ್ರಕರಣಗಳನ್ನು ಮುಲೆ ವಿರುದ್ಧ ದಾಖಲಿಸಲಾಗಿದೆ. ನಿಷೇಧಿತ ಎಚ್‌ಟಿಬಿಟಿಯ 20 ಪ್ಯಾಕೆಟ್ ಬೀಜಗಳು(ತಲಾ 450 ಗ್ರಾಂ ತೂಕ) ಮಲೆಯ ಮನೆಯಲ್ಲಿ ಪತ್ತೆಯಾಗಿದೆ. ಈತ ಈ ಬೀಜಗಳನ್ನು ಇಲ್ಲಿಯ ಇತರ ರೈತರಿಗೆ ಮಾರುತ್ತಿದ್ದ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.

ನಿಷೇಧಿತ ಬೀಜಗಳನ್ನು ಬೆಳೆಸುವವರು ಅಥವಾ ತಮ್ಮ ಬಳಿ ಇರಿಸಿಕೊಂಡಿರುವ ರೈತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಕೃಷಿ ಸಚಿವ ಸುದಭಾವು ಖೋಟ್ ಎಚ್ಚರಿಸಿದ್ದಾರೆ.

ಹೈಬ್ರೀಡ್ ತಳಿಯ ಬೀಜಗಳ ಪರವಾದ ಅಭಿಯಾನಕ್ಕೆ ಕಳೆದ ಎರಡು ವಾರಗಳಿಂದ ಮಹಾರಾಷ್ಟ್ರದಲ್ಲಿ ಚಾಲನೆ ದೊರೆತಿದೆ. ದಿವಂಗತ ಶರದ್ ಜೋಷಿ ಸಂಸ್ಥಾಪಿಸಿರುವ ಶೇತ್ಕರಿ ಸಂಘಟನೆ ಎಂಬ ರೈತ ಸಂಘವು ರಾಜ್ಯದ ವಿವಿಧೆಡೆ ಎಚ್‌ಟಿಬಿಟಿ ಬೀಜ ಬಿತ್ತುವ ಅಭಿಯಾನವನ್ನು ನಡೆಸಿದೆ. ಜೂನ್ 10ರಂದು ಅಕೋಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ರೈತರು ಒಟ್ಟುಸೇರಿ, ಸುಮಾರು 2 ಎಕ್ರೆ ವಿಸ್ತೀರ್ಣದ ಗದ್ದೆಯಲ್ಲಿ ಎಚ್‌ಟಿಬಿಟಿ ಹತ್ತಿಬೀಜವನ್ನು ಬಿತ್ತಿದ್ದಾರೆ.

ಬದನೆ ಹಾಗೂ ಹತ್ತಿಯ ನಿಷೇಧಿತ ಹೈಬ್ರೀಡ್ ಬೀಜದ ಪರ ಒಲವು ವ್ಯಕ್ತಪಡಿಸಿರುವ ರೈತರು, ಈ ಬೀಜಗಳಿಂದ ದೀರ್ಘಾವಧಿಯಲ್ಲಿ ತಮಗೆ ಲಾಭವಾಗುತ್ತದೆ. ತಳಿವರ್ಧಿತ ಬೆಳೆಗಳನ್ನು ಬೆಳೆಸುವ ಖರ್ಚು ಕಡಿಮೆ, ಕ್ರಿಮಿಕೀಟಗಳ ಹಾವಳಿಗೆ ಸುಲಭದಲ್ಲಿ ಬಗ್ಗುವುದಿಲ್ಲ ಹಾಗೂ ಉತ್ತಮ ಇಳುವರಿ ನೀಡುತ್ತವೆ. ಅಲ್ಲದೆ ಕಳೆ ನಿವಾರಣೆಗೆ ಸಿಂಪಡಿಸುವ ಗ್ಲೈಫೊಸೇಟ್‌ನ ಘಾಟನ್ನು ಸಹಿಸುವ ಶಕ್ತಿ ಹೊಂದಿರುತ್ತವೆ ಎಂಬುದು ರೈತರ ಹೇಳಿಕೆಯಾಗಿದೆ. ಇದೀಗ ವಸಂತ ಮುಲೆಯ ಪರ ಹೋರಾಡಲು ಸಂಘಟನೆ ನಿರ್ಧರಿಸಿದೆ. ಇದೀಗ ರೈತರು ಬದಲಾವಣೆ ಬಯಸುತ್ತಿದ್ದಾರೆ.

ಎಚ್‌ಟಿಬಿಟಿ ನಿಷೇಧ ತೆರವಾಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಶೇತ್ಕಾರಿ ಸಂಘಟನೆಯ ರಾಜ್ಯಾಧ್ಯಕ್ಷ ಅನಿಲ್ ಘಣವತ್ ಹೇಳಿದ್ದಾರೆ. ಭಾರತದಲ್ಲಿ ತಳಿ ಮಾರ್ಪಡಿಸಿದ ಬೀಜ ಬೆಳೆಯಲು ಯೋಗ್ಯವೇ ಎಂಬ ಬಗ್ಗೆ ಪರಿಶೀಲಿಸಿ ತೀರ್ಮಾನ ನೀಡುವ ‘ದಿ ಜೆನೆಟಿಕ್ ಇಂಜಿನಿಯರಿಂಗ್ ಅಪ್ರೈಸಲ್ ಕಮಿಟಿ’ ಎಚ್‌ಟಿಬಿಟಿ ಬೆಳೆಯಲು ಇದುವರೆಗೆ ಅಂಗೀಕಾರ ನೀಡಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X