Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೂ.23 ರಂದು ರಾಜ್ಯಕ್ಕೆ ಹಣಕಾಸು ಆಯೋಗದ...

ಜೂ.23 ರಂದು ರಾಜ್ಯಕ್ಕೆ ಹಣಕಾಸು ಆಯೋಗದ ಭೇಟಿ

ವಾರ್ತಾಭಾರತಿವಾರ್ತಾಭಾರತಿ20 Jun 2019 10:19 PM IST
share

ಬೆಂಗಳೂರು, ಜೂ.20: ಎನ್.ಕೆ.ಸಿಂಗ್ ನೇತೃತ್ವದ 15ನೇ ಹಣಕಾಸು ಆಯೋಗವು ಜೂ.23 ರಿಂದ 26ರವರೆಗೆ ರಾಜ್ಯಕ್ಕೆ ಭೇಟಿ ನೀಡಲಿದೆ. ಆಯೋಗವು ಭೇಟಿ ನೀಡುತ್ತಿರುವ ಭಾರತದ 22ನೇ ರಾಜ್ಯ ಕರ್ನಾಟಕವಾಗಿದೆ.

ಆಯೋಗವು ತನ್ನ ಭೇಟಿಯ ಅಂಗವಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಪುಟದ ಇತರ ಸಹೋದ್ಯೋಗಿಗಳು ಮತ್ತು ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳ ಜೊತೆ ಸಂವಾದ ನಡೆಸಲಿದೆ. ಅಲ್ಲದೇ, ಆಯೋಗವು ರಾಜ್ಯದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆಯೂ ಸಭೆ ನಡೆಸಲಿದೆ.

ಗ್ರಾಮೀಣ ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಪ್ರತ್ಯೇಕ ಸಭೆಗಳನ್ನು ಆಯೋಗ ನಡೆಸಲಿದೆ. ಹಿರಿಯ ಅರ್ಥಶಾಸ್ತ್ರಜ್ಞರ ಜೊತೆಯೂ ಸಂವಾದ ನಡೆಸಲಿದೆ ಮತ್ತು ನಂದನ್ ನೀಲೇಕಣಿ ಸಹಿತ ಇತರ ಮಾಹಿತಿ ತಂತ್ರಜ್ಞಾನ ತಜ್ಞರ ಜೊತೆಗೂ ಅದು ಪ್ರತ್ಯೇಕ ಸಂವಾದ ಕಾರ್ಯಕ್ರಮ ನಡೆಸಲಿದೆ.

ಡಿ.ಬಿ.ಟಿ., ಪಿ.ಎಫ್.ಎಂ.ಎಸ್ ಮತ್ತು ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸುವ ಸಾಧನೆ ಆಧಾರಿತ, ಪ್ರೋತ್ಸಾಹ ಧನದ ಸಾಧ್ಯತೆಯ ನಿಟ್ಟಿನಲ್ಲಿ ಈ ಸಂವಾದ ಆಯೋಜನೆಯಾಗಿದೆ. ಆಯೋಗವು ರಾಜ್ಯದ ಕೈಗಾರಿಕೋದ್ಯಮದ ಪ್ರತಿನಿಧಿಗಳ ಜೊತೆಗೂ ಸಭೆ ನಡೆಸಲಿದೆ.

ಆಯೋಗವು ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ(ಕೆ.ಎಸ್.ಎನ್.ಡಿ.ಎಂ.ಸಿ.)ಕ್ಕೆ ಭೇಟಿ ನೀಡಲಿದೆ. ಕೆಎಸ್‌ಎನ್‌ಡಿಎಂಸಿಯು ವಿಪತ್ತು ಪ್ರತಿಕ್ರಿಯಾ ನಿಗಾ ಮತ್ತು ನಿರ್ವಹಣೆಗಾಗಿರುವ ಅತ್ಯಾಧುನಿಕ ವ್ಯವಸ್ಥೆಯಾಗಿದ್ದು, ಈ ರೀತಿಯ ವ್ಯವಸ್ಥೆ ಇರುವ ದೇಶದ ಮೊದಲ ಕೇಂದ್ರವಾಗಿದೆ.

ಬೆಂಗಳೂರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದು, ಅದರ ಸಂಚಾರ ನಿರ್ವಹಣೆ. ಈ ಸಮಸ್ಯೆಯನ್ನು ಅರಿತುಕೊಳ್ಳಲು ಮತ್ತು ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಬೆಂಗಳೂರು ನಗರ ಸಾರಿಗೆ ನಿರ್ವಹಣಾ ಕೇಂದ್ರಕ್ಕೆ ಭೇಟಿಯನ್ನೂ ಯೋಜಿಸಲಾಗಿದೆ.

ಹಣಕಾಸು ಆಯೋಗವು ಬೋಷ್ ಎಕ್ಸ್‌ಪಿರಿಯನ್ಸ್ ಕೇಂದ್ರಕ್ಕೂ ಭೇಟಿ ನೀಡಲಿದೆ. ಬೋಷ್ ಸಂಸ್ಥೆ ಬೆಂಗಳೂರಿನ ಅತ್ಯಂತ ಹಳೆಯ ಕಂಪೆನಿಗಳಲ್ಲಿ ಒಂದಾಗಿದೆ. ಇದು ಇತ್ತೀಚೆಗೆ ಅತ್ಯಾಧುನಿಕ ಎಕ್ಸ್‌ಪಿರಿಯನ್ಸ್ ಕೇಂದ್ರವನ್ನು ತೆರೆದಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X