Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದಿನ ವಾರದಿಂದ ವೆಬ್ ಮೂಲಕ ನೋಂದಣಿಗೆ...

ಮುಂದಿನ ವಾರದಿಂದ ವೆಬ್ ಮೂಲಕ ನೋಂದಣಿಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಸಿಕಾಂತ್ ಸೆಂಥಿಲ್

'ಪ್ರಾಪರ್ಟಿ ಕಾರ್ಡ್ ಬಗ್ಗೆ ಗೊಂದಲ, ಆತುರ ಬೇಡ'

ವಾರ್ತಾಭಾರತಿವಾರ್ತಾಭಾರತಿ20 Jun 2019 11:05 PM IST
share
ಮುಂದಿನ ವಾರದಿಂದ ವೆಬ್ ಮೂಲಕ ನೋಂದಣಿಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಸಿಕಾಂತ್ ಸೆಂಥಿಲ್

ಮಂಗಳೂರು, ಜೂ.20: ನಗರ ಆಸ್ತಿ ಮಾಲಕತ್ವದ ಹಕ್ಕು ದಾಖಲೆಗಳ ಯೋಜನೆ (ಯುಪಿಓಆರ್) ಪ್ರಾಪರ್ಟಿ ಕಾರ್ಡ್ ಬಗ್ಗೆ ಜನರು ಅನಗತ್ಯ ಗೊಂದಲ ಅಥವಾ ಆತುರ ಪಡುವ ಅಗತ್ಯವಿಲ್ಲ. ಆಸ್ತಿಯ ಮಾರಾಟಕ್ಕೆ ನೋಂದಣಿ ಮಾಡುವ ಸಂದರ್ಭದಲ್ಲಿ ಮಾತ್ರವೇ ಸದ್ಯ ಕಡ್ಡಾಯ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪ್ರತಿದಿನ 80ರಿಂದ 100ರಷ್ಟು ಸದ್ಯ ಪ್ರಾಪರ್ಟಿ ಕಾರ್ಡ್‌ಗಳನ್ನು ನೀಡಲಾಗುತ್ತಿದೆ. ಪ್ರಾಪರ್ಟಿ ಕಾರ್ಡ್ ಕೋರಿ ಅರ್ಜಿ ಸಲ್ಲಿಸುವವರ ಪೈಕಿ ಎಲ್ಲಾ ದಾಖಲೆಗಳು ಸರಿ ಇದ್ದಲ್ಲಿ ಈಗಾಗಲೇ ಅಳತೆಯಾಗಿರುವ ಆಸ್ತಿಗಳಿಗೆ ಕರಡು ಪ್ರಾಪರ್ಟಿ ಕಾರ್ಡನ್ನು 48 ಗಂಟೆಯೊಳಗೆ ನೀಡಲಾಗುತ್ತದೆ. ಅಳತೆ ಆಗದೆ ಇರುವ ಕಡತಗಳಲ್ಲಿ 10 ದಿನಗಳಲ್ಲಿ ಅಳತೆ ನಡೆಸಿ ಕಾರ್ಡ್ ವಿತರಿಸುವ ಕಾರ್ಯ ನಡೆಯುತ್ತಿದೆ. ತಮ್ಮ ಆಸ್ತಿಯ ಮಾರಾಟಕ್ಕೆ ನೋಂದಣಿ ಮಾಡುವ ಸಂದರ್ಭದಲ್ಲಿ ಹೊರತು ಪಡಿಸಿ ಪ್ರಾಪರ್ಟಿ ಕಾರ್ಡ್‌ಗಾಗಿ ಕೇಂದ್ರದಲ್ಲಿ ಸರತಿ ನಿಲ್ಲುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ನೀವು ಮಾಡಿಲ್ಲದಿದ್ದರೂ ನಾವೇ ಮಾಡಿಸುತ್ತೇವೆ !

ಮಂಗಳೂರು ಯುಪಿಓಆರ್ ಯೋಜನೆಗೆ ಒಳಪಡುವ 32 ಗ್ರಾಮಗಳಲ್ಲಿ ಜೂನ್ 10ರಿಂದ ನೋಂದಣಿ ಉದ್ದೇಶಕ್ಕೆ ಪ್ರಾಪರ್ಟಿ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಒಟ್ಟು 153466 ಆಸ್ತಿಗಳಲ್ಲಿ 88031 ಆಸ್ತಿಗಳ ದಾಖಲೆ ಸಂಗ್ರಹಿಸಲಾಗಿದೆ. 41579 ಆಸ್ತಿಗಳ ಕರಡು ಪಿ.ಆರ್. ಕಾರ್ಡ್ ಅನುಮೋದಿಸಲಾಗಿದ್ದು, 28584 ಕರಡು ಕಾರ್ಡ್‌ಗಳನ್ನು ವಿತರಿಸಲಾಗಿದೆ. 28274 ಅಂತಿಮ ಪಿಆರ್ ಕಾರ್ಡ್ ಅನುಮೋದಿಸಲಾಗಿದ್ದು, 22206 ಅಂತಿಮ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಒಂದು ವಾರದೊಳಗೆ ನೋಂದಣಿಯಾದ ಆಸ್ತಿಗಳಲ್ಲಿ ದಾಖಲೆ ಸಂಗ್ರಹಿಸಲಾದ ಆಸ್ತಿಗಳಿಗೆ ಸಂಬಂಧಿಸಿ ಪಿಆರ್ ಕಾರ್ಡ್ ಒದಗಿಸಲು ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಮುಂದಿನ ವಾರದೊಳಗೆ ವೆಬ್ ವ್ಯವಸ್ಥೆಯ ಮೂಲಕ ಖುದ್ದು ಆಸ್ತಿ ಮಾಲಕರೇ ತಮ್ಮ ಆಸ್ತಿಯನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗು ವುದು. ಹಾಗಾಗಿ ಯಾರೂ ಪ್ರಾಪರ್ಟಿ ಕಾರ್ಡ್‌ಗಾಗಿ ಆತುರ ಪಡುವ ಅಗತ್ಯವಿಲ್ಲ. ಯಾರಾದರೂ ಪ್ರಾಪರ್ಟಿ ಕಾರ್ಡ್ ಮಾಡಿಸಿಲ್ಲದಿದ್ದರೆ ನಾವೇ ಮಾಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಜಿಲಾ್ಲಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X