Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಚೆ ಇಲಾಖೆಯಿಂದ 4.5 ಲಕ್ಷ ವಿದ್ಯಾರ್ಥಿ...

ಅಂಚೆ ಇಲಾಖೆಯಿಂದ 4.5 ಲಕ್ಷ ವಿದ್ಯಾರ್ಥಿ ಖಾತೆ: ಡಾ. ಚಾರ್ಲ್ಸ್ ಲೋಬೋ

ವಾರ್ತಾಭಾರತಿವಾರ್ತಾಭಾರತಿ20 Jun 2019 11:06 PM IST
share

ಮಂಗಳೂರು, ಜೂ.20: ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲು ಅಂಚೆ ಕಚೇರಿಗಳಲ್ಲಿ ಉಳಿತಾಯ ಖಾತೆ ತೆರೆಯುವಂತೆ ಸರ್ಕಾರ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಆರಂಭವಾಗಿದೆ. ಜೂನ್ ಅಂತ್ಯದ ವೇಳೆಗೆ 4.5 ಲಕ್ಷ ವಿದ್ಯಾರ್ಥಿಗಳ ಖಾತೆಗಳನ್ನು ತೆರೆಯಲಾ ಗುವುದು ಎಂದು ಅಂಚೆ ಇಲಾಖೆಯ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನಲ್ ಡಾ.ಚಾರ್ಲ್ಸ್ ಲೋಬೊ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಸ್ತುತ ಅಂಚೆ ಖಾತೆಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇಂಡಿಯಾ ಪೋಸ್ಟ್ ಮೇಮೆಂಟ್ ಬ್ಯಾಂಕ್ ಆರಂಭವಾದ ಬಳಿಕ ರಾಜ್ಯದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಉಳಿತಾಯ ಖಾತೆಗಳನ್ನು ತೆರೆದಿದ್ದಾರೆ. ಇದೀಗ ವಿದ್ಯಾರ್ಥಿಗಳ ಅಂಚೆ ಖಾತೆಗಳನ್ನು ತೆರೆಯುತ್ತಿರುವುದು ಇಲಾಖೆಯ ಲಾಭದ ದೃಷ್ಟಿಕೋನದಿಂದ ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಲಿದೆ ಎಂದವರು ಹೇಳಿದರು.

ಈ ಹಿಂದೆ ಅಂಚೆ ಕಚೇರಿಯಿಂದ ನೀಡಲಾಗುತ್ತಿದ್ದ ಎಟಿಎಂ ಕಾರ್ಡ್‌ಗಳನ್ನು ಕೇವಲ ಅಂಚೆ ಎಟಿಎಂಗಳಲ್ಲಿ ಮಾತ್ರ ಬಳಕೆ ಮಾಡಬಹುದಿತ್ತು. ಇದೀಗ ಯಾವ ಬ್ಯಾಂಕ್ ಎಟಿಎಂ ಕೇಂದ್ರಗಳಿಂದಲೂ ಹಣ ಪಡೆಯಬಹುದು ಎಂದ ಡಾ.ಚಾರ್ಲ್ಸ್, ಆರ್‌ಬಿಐ ಸೂಚನೆಯಂತೆ ಈಗ ಎಟಿಎಂ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲಾಗಿದ್ದು, ಹೊಸ ಚಿಪ್‌ಬೇಸ್‌ಡ್ ಕಾರ್ಡ್ ನೀಡಲು ಕ್ರಮ ವಹಿಸಲಾಗಿದೆ. ಹೊಸ ಕಾರ್ಡ್‌ಗಳ ತಯಾರಿ ಕೆಯೂ ಆರಂಭವಾಗಿದೆ. ಶೀಘ್ರದಲ್ಲೇ ಅವುಗಳನ್ನು ಗ್ರಾಹಕರಿಗೆ ವಿತರಿಸಲಾಗುವುದು. ರಾಜ್ಯದಲ್ಲಿ ಪ್ರಸ್ತುತ 3 ಲಕ್ಷ ಎಟಿಎಂ ಕಾರ್ಡ್‌ಗಳನ್ನು ಹೊಂದಿದ ಗ್ರಾಹಕರಿದ್ದಾರೆ ಎಂದರು.

ಪೋಸ್ಟೇಜ್ ಡೆಪಾಸಿಟ್: ಗ್ರಾಹಕರು ಅಂಚೆ ಕಚೇರಿಯಲ್ಲಿ 200 ರು.ಗಳ ಪೋಸ್ಟೇಜ್ ಡೆಪಾಸಿಟ್ ಖಾತೆಯನ್ನು ತೆರೆದು ಅಂಚೆ ಚೀಟಿ, ಲಕೋಟೆ, ಮಿನಿಯೇಚರ್ ಹಾಳೆ ಇತ್ಯಾದಿಗಳನ್ನು ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಖಾತೆ ತೆರೆಯುವಾಗ ಗ್ರಾಹಕರು ಯಾವ ವಸ್ತು ಬೇಕು ಎನ್ನುವುದನ್ನು ನಮೂದಿಸಿದರೆ ಅದನ್ನು ಅವರ ವಿಳಾಸಕ್ಕೆ ಕಳುಹಿಸಲಾಗುತ್ತದೆ. ಅದರ ಮೊತ್ತವನ್ನು ಖಾತೆಯಲ್ಲಿರುವ 200 ರು.ನಿಂದ ಕಡಿತಗೊಳಿಸಲಾಗುತ್ತದೆ. ಇನ್ನೂ ಬೇಕಿದ್ದರೆ ಮತ್ತೆ ಖಾತೆಗೆ ಮೊತ್ತವನ್ನು ಡೆಪಾಸಿಟ್ ಮಾಡಬಹುದು ಎಂದು ಅವರು ಹೇಳಿದರು.

ಅಂಚೆ ಚೀಟಿ ಸಂಗ್ರಹ ವಿಶ್ವಾದ್ಯಂತ ಮಿಲಿಯನ್ ಡಾಲರ್ ವ್ಯವಹಾರವಾಗಿ ರೂಪುಗೊಂಡಿದೆ. ಆದರೆ ಭಾರತದಲ್ಲಿ ಅಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿಲ್ಲ. ಅಂಚೆಚೀಟಿಗಳು ಎಲ್ಲ ದೇಶಗಳ ಸಾಂಸ್ಕೃತಿಕ ರಾಯಭಾರಿಯಂತೆ ಕೆಲಸ ಮಾಡುತ್ತವೆ. ಭಾರತದ ಸ್ಟಾಂಪ್‌ಗಳನ್ನು ನೋಡಿ ವಿದೇಶಿಗರು ಕೂಡ ಇಲ್ಲಿನ ಸಂಸ್ಕೃತಿಯನ್ನು ತಿಳಿದುಕೊಳ್ಳುತ್ತಾರೆ ಎಂದರು.

ಅಂಚೆ ಇಲಾಖೆಯ ದಕ್ಷಿಣ ವಲಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್, ಮಂಗಳೂರು ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X