Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆ...

ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆ ಮಂಡಿಸಿದ ರವಿಶಂಕರ್ ಪ್ರಸಾದ್

ತಾರತಮ್ಯದ ಮಸೂದೆ ಎಂದ ವಿಪಕ್ಷಗಳು

ವಾರ್ತಾಭಾರತಿವಾರ್ತಾಭಾರತಿ21 Jun 2019 1:45 PM IST
share
ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆ ಮಂಡಿಸಿದ ರವಿಶಂಕರ್ ಪ್ರಸಾದ್

 ಹೊಸದಿಲ್ಲಿ,ಜೂ.21: ಸರಕಾರವು ಶುಕ್ರವಾರ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಗಳ ನಡುವೆಯೇ ಲೋಕಸಭೆಯಲ್ಲಿ ಹೊಸದಾಗಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಿತು. ಮಸೂದೆಯು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದವು.

ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆ 2019 ಮೋದಿ ಸರಕಾರವು ತನ್ನ ಎರಡನೇ ಅಧಿಕಾರಾವಧಿಯಲ್ಲಿ ಸಂಸತ್ತಿನಲ್ಲಿ ಮಂಡಿಸಿರುವ ಮೊದಲ ಶಾಸನವಾಗಿದೆ. ಲಿಂಗ ಸಮಾನತೆ ಮತ್ತು ನ್ಯಾಯಕ್ಕಾಗಿ ಈ ಶಾಸನವು ಅತ್ಯಗತ್ಯವಾಗಿದೆ ಎಂದು ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರು ಒತ್ತಿಹೇಳಿದರು.

ಮತ ವಿಭಜನೆಯ ಬಳಿಕ ಮಸೂದೆಯನ್ನು ಮಂಡಿಸಿದ್ದು,186 ಸದಸ್ಯರು ಅದನ್ನು ಬೆಂಬಲಿಸಿದರೆ 74 ಸದಸ್ಯರು ವಿರೋಧಿಸಿದರು.

ಇದು ಧರ್ಮದ ಪ್ರಶ್ನೆಯಲ್ಲ,ಮಹಿಳೆಯರಿಗೆ ನ್ಯಾಯದ ಪ್ರಶ್ನೆ ಎಂದ ಪ್ರಸಾದ್,ದೇಶದಲ್ಲಿ ತ್ರಿವಳಿ ತಲಾಖ್‌ನ ಹಲವಾರು ಪ್ರಕರಣಗಳು ನಡೆದಿವೆ. ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರವೂ 200ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ ಎನ್ನುವ ಮೂಲಕ ಮಸೂದೆ ಮಂಡನೆಯ ಅಗತ್ಯವನ್ನು ಸಮರ್ಥಿಸಿಕೊಂಡರು.

ಇದು ಮಹಿಳೆಯರ ಘನತೆಯ ಪ್ರಶ್ನೆಯಾಗಿದೆ ಮತ್ತು ಅದರ ರಕ್ಷಣೆಗೆ ನಾವು ಬದ್ಧರಾಗಿದೇವೆ ಎಂದ ಅವರು, ಶಾಸನವನ್ನು ಮಾಡುವುದು ಸಂಸತ್ತಿನ ಕೆಲಸವಾಗಿದೆ ಮತ್ತು ಕಾನೂನನ್ನು ವ್ಯಾಖ್ಯಾನಿಸುವುದು ನ್ಯಾಯಾಲಯಗಳಿಗೆ ಬಿಟ್ಟ ವಿಷಯವಾಗಿದೆ ಎಂದರು.

ಮಸೂದೆಯನ್ನು ಮಂಡಿಸುವಂತೆ ಸ್ಪೀಕರ್ ಓಂ ಬಿರ್ಲಾ ಅವರು ಸೂಚಿಸಿದ ಬೆನ್ನಿಗೇ ಹಲವಾರು ಪ್ರತಿಪಕ್ಷ ಸದಸ್ಯರು ಪ್ರತಿಭಟಿಸಲು ಎದ್ದು ನಿಂತಿದ್ದು,ಅವರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಬಿರ್ಲಾ ಅವಕಾಶ ನೀಡಿದರು.

                              

  ದಿಢೀರ್ ತ್ರಿವಳಿ ತಲಾಖ್ ಪದ್ಧತಿಗೆ ನಾನು ವಿರುದ್ಧವಾಗಿದ್ದೇನೆ. ಆದರೆ ನಾಗರಿಕ ಮತ್ತು ಕ್ರಿಮಿನಲ್ ಕಾನೂನುಗಳನ್ನು ಸಮನ್ವಯಗೊಳಿಸಿರುವ ಈ ಮಸೂದೆಯನ್ನು ಪ್ರತಿಭಟಿಸುತ್ತಿದ್ದೇನೆ. ಈ ಶಾಸನವು ಮುಸ್ಲಿಂ ಸಮುದಾಯವನ್ನು ಬೆಟ್ಟು ಮಾಡಿದೆ,ಆದರೆ ಪತ್ನಿಯರನ್ನು ತೊರೆಯುವದು ಆ ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ. ಪತ್ನಿಯರನ್ನು ತೊರೆಯುವ ಎಲ್ಲ ಪ್ರಕರಣಗಳಲ್ಲಿಯೂ ಅನ್ವಯವಾಗಬಲ್ಲ ಸಾರ್ವತ್ರಿಕ ಕಾನೂನು ಬೇಕು.

* ಶಶಿ ತರೂರ್,ಕಾಂಗ್ರೆಸ್ ಸಂಸದ

ಬಿಜೆಪಿ ಮುಸ್ಲಿಂ ಮಹಿಳೆಯರ ಬಗ್ಗೆ ಹೆಚ್ಚಿನ ಕಾಳಜಿ ತೋರಿಸುತ್ತಿದೆ. ಆದರೆ ಅದು ಕೇರಳದಲ್ಲಿ ಶಬರಿಮಲೆ ದೇವಸ್ಥಾನವನ್ನು ಪ್ರವೇಶಿಸುವ ಹಿಂದೂ ಮಹಿಳೆಯರ ಹಕ್ಕುಗಳನ್ನು ವಿರೋಧಿಸುತ್ತಿದೆ. ತ್ರಿವಳಿ ತಲಾಖ್ ಮಸೂದೆಯು ತಪ್ಪಿತಸ್ಥ ಮುಸ್ಲಿಮರಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಸ್ತಾಪಿಸಿದೆ,ಆದರೆ ಇದೇ ಅಪರಾಧಕ್ಕಾಗಿ ಮುಸ್ಲಿಮೇತರರಿಗೆ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ. ಹೀಗಾಗಿ ಈ ಮಸೂದೆಯು ಸಂವಿಧಾನ ವಿರೋಧಿಯಾಗಿದೆ.

* ಅಸದುದ್ದೀನ್ ಉವೈಸಿ,ಎಐಎಂಐಎಂ ಸಂಸದ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X