Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಜಲಧಾರೆ ಯೋಜನೆ’ಯಡಿ ಕುಡಿಯುವ ನೀರು...

‘ಜಲಧಾರೆ ಯೋಜನೆ’ಯಡಿ ಕುಡಿಯುವ ನೀರು ಪೂರೈಕೆಗೆ 1 ಸಾವಿರ ಕೋಟಿ ರೂ.: ಸಿಎಂ ಕುಮಾರಸ್ವಾಮಿ

ಗುರುಮಿಟ್ಕಲ್ ತಾಲೂಕಿನ ಚಂಡ್ರಕಿಯಲ್ಲಿ ಸಿಎಂ ಜನತಾ ದರ್ಶನ, ಗ್ರಾಮ ವಾಸ್ತವ್ಯ

ವಾರ್ತಾಭಾರತಿವಾರ್ತಾಭಾರತಿ21 Jun 2019 7:03 PM IST
share
‘ಜಲಧಾರೆ ಯೋಜನೆ’ಯಡಿ ಕುಡಿಯುವ ನೀರು ಪೂರೈಕೆಗೆ 1 ಸಾವಿರ ಕೋಟಿ ರೂ.: ಸಿಎಂ ಕುಮಾರಸ್ವಾಮಿ

ಯಾದಗಿರಿ, ಜೂ. 21: ‘ಜಲಧಾರೆ ಯೋಜನೆ’ಯಡಿ ನದಿಯ ಮೂಲದ ನೀರನ್ನು ಜಿಲ್ಲೆಯ ನಾಲ್ಕೂ ಕ್ಷೇತ್ರಗಳ ಪ್ರತಿಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು 1 ಸಾವಿರ ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಶುಕ್ರವಾರ ಜಿಲ್ಲಾಡಳಿತದ ಆಶ್ರಯದಲ್ಲಿ ಗುರುಮಿಟ್ಕಲ್ ತಾಲೂಕಿನ ಚಂಡ್ರಕಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಿಎಂ ಜನತಾ ದರ್ಶನ, ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುರುಮಿಟ್ಕಲ್ ಕ್ಷೇತ್ರದಲ್ಲಿ 31.97 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸುಮಾರು 20 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ ಎಂದರು.

ಈ ಹಿಂದೆ 2006ರಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಫಲಪ್ರದವಾಗಿದೆ. ಈ ಬಾರಿ ಪ್ರತಿ ತಿಂಗಳು ಒಂದು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡ್ರಕಿ ಗ್ರಾಮದಿಂದ ಈ ಕಾರ್ಯಕ್ರಮ ಆರಂಭವಾಗಿದೆ. ಗ್ರಾಮಸ್ಥರ ಬೇಡಿಕೆಯಂತೆ ಪಶುಚಿಕಿತ್ಸಾಲಯ ಮಂಜೂರು ಮಾಡಲಾಗಿದೆ. ಪಶುವೈದ್ಯಾಧಿಕಾರಿಗಳನ್ನೂ ನೇಮಕ ಮಾಡಲಾಗಿದೆ. ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಜಿಲ್ಲೆಯಲ್ಲಿ 300 ಹಾಸಿಗೆಗಳ ಜಿಲ್ಲಾಸ್ಪತ್ರೆ ಮಂಜೂರಾತಿಗೆ ಇಂದು ಆದೇಶ ಮಾಡಲಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ಸುಸಜ್ಜಿತ ತೀವ್ರ ನಿಗಾ ಘಟಕದ ಗುಣಮಟ್ಟ ಸುಧಾರಣೆ, ಆಸ್ಪತ್ರೆ ತಲುಪಲು ಅಗತ್ಯವಿರುವ ಸಂಪರ್ಕ ರಸ್ತೆ ನಿರ್ಮಿಸಲಾಗುವುದು. ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಲಾಗುವುದು. ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಸಾಧ್ಯವಿರುವ ಕಾರ್ಯಗಳಿಗೆ ಆದೇಶ ನೀಡಲಾಗುವುದು. ಶಹಾಪುರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ. ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಪೂರೈಕೆ ಯೋಜನೆಗೂ ಕ್ರಮ ವಹಿಸಲಾಗುವುದು ಎಂದರು.

ಸಾಲಮನ್ನಾ ಯೋಜನೆಯಡಿ 302 ಕೋಟಿ ರೂ.ಗಳನ್ನು ಸಹಕಾರ ಬ್ಯಾಂಕುಗಳಿಗೆ ಬಿಡುಗಡೆ ಮಾಡಿದೆ. 75ಸಾವಿರ ರೈತರಿಗೆ ಈಗಾಗಲೇ ಸೌಲಭ್ಯ ದೊರೆತಿದೆ. ಉಳಿದ ರೈತರ ಸಾಲದ ಖಾತೆಗೆ ಜಮೆಯಾಗಬೇಕಿದ್ದ ಹಣವನ್ನು, ಸಹಕಾರ ಬ್ಯಾಂಕುಗಳಿಂದ ಅಪೆಕ್ಸ್ ಬ್ಯಾಂಕ್‌ಗಳಿಗೆ ಬಾಕಿ ಇರುವ ಕಾರಣಕ್ಕೆ ಆ ರಂಗದವರು ತಡೆಹಿಡಿದಿದ್ದಾರೆ. ಇದರಿಂದಾಗಿ ಸಾಲಮನ್ನಾ ಲೆಕ್ಕ ಚುಕ್ತಾ ಕಾರ್ಯ ವಿಳಂಬವಾಗಿದೆ. ಇದಕ್ಕೆ ಸರಕಾರ ಕಾರಣವಲ್ಲ. ಹೊಸ ಸಾಲ ನೀಡಲು 100 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದರು.

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ: ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಿಂದ ಹರ್ಷಗೊಂಡಿರುವ ಅವರ ಅಭಿಮಾನಿಗಳು, ಪಟಾಕಿ ಸಿಡಿಸಿ ಹಣ ವ್ಯಯ ಮಾಡುವ ಬದಲು, ಆ ಹಣದಲ್ಲಿ ಚಂಡ್ರಕಿ ಗ್ರಾಮದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗುಗಳನ್ನು ವಿತರಿಸಿದರು. ಸ್ವತಃ ಸಿಎಂ ಮುಖಾಂತರ ಸಾಂಕೇತಿಕವಾಗಿ ಕೆಲವು ಗ್ರಾಮದ ವಿದ್ಯಾರ್ಥಿಗಳಿಗೆ ಬ್ಯಾಗುಗಳನ್ನು ವಿತರಿಸಿದ್ದು ವಿಶೇಷವಾಗಿತ್ತು.

ಜನತಾ ದರ್ಶನಕ್ಕೆ ವರುಣ ಸಿಂಚನ: ಚಂಡ್ರಕಿ ಗ್ರಾಮದಲ್ಲಿ ಸಿಎಂ ಜನತಾ ದರ್ಶನದ ವೇಳೆ ವರಣನ ಸಿಂಚನವಾಯಿತು. ಸಂಜೆ 4.15ರಿಂದ ಪ್ರಾರಂಭವಾದ ಮಳೆಯ ನಡುವೆಯೂ ಸಿಎಂ ಜನತಾದರ್ಶನ ನಿರಾತಂಕವಾಗಿ ನಡೆಯಿತು. ಮಳೆ ಬಂದರೂ ಕಾರ್ಯಕ್ರಮಕ್ಕೆ ಅಡಚಣೆಯಾಗಬಾರದೆಂಬ ಮುನ್ನೆಚ್ಚರಿಕೆಯೊಂದಿಗೆ ಜಿಲ್ಲಾಡಳಿತ ನಿರ್ಮಿಸಿದ್ದ ಸಭಾಂಗಣದಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X