Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್ ಶಾರನ್ನು ಜೈಲಿಗೆ ಕಳುಹಿಸಿದ್ದ...

ಅಮಿತ್ ಶಾರನ್ನು ಜೈಲಿಗೆ ಕಳುಹಿಸಿದ್ದ ಜಸ್ಟಿಸ್ ಖುರೇಷಿ ಪದೋನ್ನತಿಯನ್ನು ತಡೆಯುತ್ತಿರುವ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ22 Jun 2019 2:33 PM IST
share
ಅಮಿತ್ ಶಾರನ್ನು ಜೈಲಿಗೆ ಕಳುಹಿಸಿದ್ದ ಜಸ್ಟಿಸ್ ಖುರೇಷಿ ಪದೋನ್ನತಿಯನ್ನು ತಡೆಯುತ್ತಿರುವ ಕೇಂದ್ರ

ಹೊಸದಿಲ್ಲಿ,ಜೂ.22: ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ 2010ರಲ್ಲಿ ಹಾಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಎರಡು ದಿನಗಳ ಪೊಲೀಸ್ ಕಸ್ಟಡಿಯನ್ನು ವಿಧಿಸಿದ್ದ ಬಾಂಬೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಅಕಿಲ್ ಅಬ್ದುಲ್‌ ಹಮೀದ್ ಕುರೇಶಿ ಅವರನ್ನು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಪದೋನ್ನತಿಗೊಳಿಸಲು ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಮಾಡಿರುವ ಶಿಫಾರಸಿಗೆ ಕೇಂದ್ರವು ತಡೆಯನ್ನೊಡ್ಡಿದ್ದು,ಇದು ನರೇಂದ್ರ ಮೋದಿ ಸರಕಾರವು ತನ್ನ ಎರಡನೇ ಅಧಿಕಾರಾವಧಿಯಲ್ಲಿ ಕೊಲಿಜಿಯಂ ಅನ್ನು ಹೇಗೆ ನಡೆಸಿಕೊಳ್ಳಲಿದೆ ಎನ್ನುವುದರ ಅಶುಭ ಸಂಕೇತವಾಗಿದೆ.

ಗುಜರಾತ್ ಹೈಕೋರ್ಟಿನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ಜಸ್ಟಿಸ್ ಖುರೇಷಿ ಅವರ ಪದೋನ್ನತಿಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್ ಎ ಬೊಬ್ಡೆ ಹಾಗೂ ಎನ್ ವಿ ರಮಣ ಅವರನ್ನೊಳಗೊಂಡ ಕೊಲಿಜಿಯಂ ಮೇ 10ರಂದು  ಶಿಫಾರಸು ಮಾಡಿತ್ತು. ಸದ್ಯ  ವರ್ಗಾವಣೆಗೊಂಡು ಅವರು ಬಾಂಬೆ ಹೈಕೋರ್ಟಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಧ್ಯ ಪ್ರದೇಶದ ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್ ಕೆ ಸೇಠ್ ಜೂನ್ 9ರಂದು ನಿವೃತ್ತರಾಗುತ್ತಿದ್ದುದರಿಂದ  ಅವರ ಸ್ಥಾನಕ್ಕೆ ಜಸ್ಟಿಸ್ ಖುರೇಷಿ ಅವರನ್ನು ತರಲು ಕೊಲೀಜಿಯಂ ಬಯಸಿತ್ತಲ್ಲದೆ ಈ ಹುದ್ದೆಗೆ ಅವರು ಎಲ್ಲಾ ರೀತಿಯಲ್ಲೂ ಅರ್ಹರು ಎಂದೂ ತೀರ್ಮಾನಿಸಿತ್ತು.

 ಕೇಂದ್ರದಲ್ಲಿ ಮೋದಿಯವರ ಹೊಸ ಸರಕಾರ ಸ್ಥಾಪನೆಯಾದ ಬಳಿಕ ಕಾನೂನು ಸಚಿವರಾಗಿ ಅಧಿಕಾರ ವಹಿಸಿಕೊಂಡ ರವಿಶಂಕರ ಪ್ರಸಾದ ಅವರು ತನ್ನ ಸಚಿವಾಲಯವು ‘ಅಂಚೆ ಕಚೇರಿ’ಯಾಗಿರುವುದಿಲ್ಲ ಎಂದು ಒತ್ತಿ ಹೇಳಿದ್ದರು. ಉನ್ನತ ನ್ಯಾಯಾಂಗಕ್ಕೆ ನ್ಯಾಯಾಧೀಶರ ನೇಮಕಗಳಿಗಾಗಿ ಕೊಲಿಜಿಯಂ ಶಿಫಾರಸುಗಳನ್ನು ಸಚಿವಾಲಯವು ಸ್ವೀಕರಿಸಿದ ಬಳಿಕ ಪ್ರಮುಖ ಪಾಲುದಾರನಾಗಿ ಅದು ನಿರ್ವಹಿಸುವ ಪಾತ್ರವನ್ನು ಪ್ರಸ್ತಾಪಿಸಿ ಅವರು ಈ ಹೇಳಿಕೆಯನ್ನು ನೀಡಿದ್ದರು.

ಕೊಲಿಜಿಯಮ್‌ನ ಮೊದಲ ಆಯ್ಕೆಗಳನ್ನು ತನ್ನ ಸಚಿವಾಲಯವು ಕಣ್ಣುಮುಚ್ಚಿಕೊಂಡು ಒಪ್ಪಿಕೊಳ್ಳುವುದಿಲ್ಲ ಮತ್ತು ಪ್ರತಿಯೊಂದೂ ಶಿಫಾರಸ್ಸನ್ನು ತೂಗಿ ನೋಡಲಿದೆ ಎಂಬ ಅರ್ಥವನ್ನು ಪ್ರಸಾದ್ ಅವರ ಹೇಳಿಕೆಗೆ ವ್ಯಾಖ್ಯಾನಿಸಬಹುದಾದರೆ, ಸಚಿವಾಲಯವು ತಾನು ಇಷ್ಟಪಡದ ಶಿಫಾರಸುಗಳನ್ನು ಕಸದ ಬುಟ್ಟಿಗೆ ಎಸೆಯಬಹುದು ಎಂಬ ಇಂಗಿತವೂ ಅದರಲ್ಲಿ ಅಡಗಿದ್ದಿರಬಹುದು. ಕುರೇಶಿಯವರ ಪದೋನ್ನತಿ ಶಿಫಾರಸಿನ ಕುರಿತು ಕೇಂದ್ರದ ನಿಷ್ಕ್ರಿಯತೆ ಇದನ್ನೇ ಸೂಚಿಸುತ್ತಿದೆ.

ಗುಜರಾತ್ ಉಚ್ಚ ನ್ಯಾಯಾಲಯದಿಂದ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ಕುರೇಶಿ ಅವರ ಪದೋನ್ನತಿಗೆ ಕೊಲಿಜಿಯಂ ಮೇ 10ರಂದು ಶಿಫಾರಸು ಮಾಡಿತ್ತು. ಕುರೇಶಿ ಅವರು ಹಾಲಿ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಎಸ್.ಕೆ.ಸೇಠ್ ಅವರು ಜೂ.9ರಂದು ನಿವೃತ್ತರಾಗಲಿದ್ದರಿಂದ ಅವರ ಸ್ಥಾನಕ್ಕೆ ಕುರೇಶಿಯವರನ್ನು ಪದೋನ್ನತಿಗೊಳಿಸಲು ಕೊಲಿಜಿಯಂ ಆಸಕ್ತಿ ಹೊಂದಿತ್ತು. ಸೇಠ್ ಅವರ ಉತ್ತರಾಧಿಕಾರಿಯಾಗಿ ನೇಮಕಗೊಳ್ಳಲು ಕುರೇಶಿ ಎಲ್ಲ ರೀತಿಯಿಂದಲೂ ಸೂಕ್ತರಾಗಿದ್ದಾರೆ ಎನ್ನುವುದು ಕೊಲಿಜಿಯಮ್‌ನ ಅಭಿಪ್ರಾಯವಾಗಿತ್ತು.

ಕುರೇಶಿಯವರ ಜೊತೆಗೆ ಇತರ ಮೂವರು ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರ ಪದೋನ್ನತಿಗೂ ಕೊಲಿಜಿಯಂ ಶಿಫಾರಸು ಮಾಡಿದ್ದು,ಅವುಗಳಿಗೆ ಕೇಂದ್ರ ಸರಕಾರವು ಹಸಿರು ನಿಶಾನೆ ತೋರಿಸಿದೆ. ಆದರೆ ಕುರೇಶಿಯವರ ಪದೋನ್ನತಿ ಶಿಫಾರಸು ಕಡತ ಮಾತ್ರ ಧೂಳು ತಿನ್ನುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X