Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಣಿ: ಯುವ ಸ್ಫೂರ್ತಿ ಕಾರ್ಯಾಗಾರ

ಮಾಣಿ: ಯುವ ಸ್ಫೂರ್ತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ22 Jun 2019 6:49 PM IST
share
ಮಾಣಿ: ಯುವ ಸ್ಫೂರ್ತಿ ಕಾರ್ಯಾಗಾರ

ಬಂಟ್ವಾಳ, ಜೂ. 22: ಯುವವಾಹಿನಿ ಮಾಣಿ ಘಟಕದ ಆಶ್ರಯದಲ್ಲಿ ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಕುರಿತಾಗಿ "ಯುವ ಸ್ಫೂರ್ತಿ-2018-19" ಕಾರ್ಯಾಗಾರವು ಇತ್ತೀಚೆಗೆ  ಗಡಿಯಾರ ಶಾಲೆಯಲ್ಲಿ ನಡೆಯಿತು.

ಮಾಣಿ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ಸಲಹೆಗಾರ ರವಿಚಂದ್ರ, ಶಾಲಾ ಮುಖ್ಯ ಶಿಕ್ಷಕಿ ಸುಚೇತ, ಕಾರ್ಯಕ್ರಮ ಸಂಚಾಲಕ ಜಯಪ್ರಕಾಶ್ ಕೆದಿಲ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ತುಕಾರಾಂ ಪೂಜಾರಿ, ಪದ್ಮನಾಭ ಮರೊಳಿ ಹಾಗೂ ಮಂಗಳೂರು ಘಟಕದ ಮಾಜಿ ಅಧ್ಯಕ್ಷ ಮೋಹನ ಪೆಜಕಳ ಉಪಸ್ಥಿತರಿದ್ದರು. 

ಭಾಷಣ ಕಲೆಯ ಕುರಿತಾಗಿ ವಿಷಯ ಮಂಡಿಸಿದ ತರಬೇತುದಾರ ಅಭಿಜಿತ್ ಕರ್ಕೇರ ಮಾತನಾಡಿ, ಭಾಷಣ ಕಲೆಯನ್ನು ಕರಗತ ಮಾಡಿಕೊಳ್ಳುವವರು ಜಗತ್ತಿನ ಆಗುಹೋಗುಗಳ ಕುರಿತಾದ ಸಾಮಾನ್ಯ ಜ್ಞಾನ ಬೆಳೆಸಿಕೊಂಡಿರಬೇಕು. ನೋಡುಗರನ್ನು ಸೆಳೆಯುವ ಮುಖಭಾವ, ಸ್ಪಷ್ಟ ಉಚ್ಛಾರವೂ ಅತೀ ಅಗತ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಾನಸಿಕ ಆಪ್ತ ಸಮಾಲೋಚಕರಾದ ಲೋಹಿತ್ ಮಾನಸಿಕ ಆರೋಗ್ಯದ ಕುರಿತಾಗಿ ಮಾಹಿತಿ ನೀಡುತ್ತಾ, ಮನುಷ್ಯನು ಹೊರಜಗತ್ತಿಗೆ ಎಷ್ಟು ಸಂತೋಷವಾಗಿ ಕಾಣುತ್ತಾನೊ ಅಂತೆಯೇ ಮಾನಸಿಕವಾಗಿಯೂ ಸದೃಢ ಆಗಿರಬೇಕಾಗುತ್ತದೆ. ಮೂಡನಂಬಿಕೆಗಳನ್ನು ಹೆಚ್ಚು ನಂಬಿ ಮೋಸ ಹೋಗುವ ಬದಲು ತನ್ನಲ್ಲಿರುವ ಮಾನಸಿಕ ಸಮಸ್ಯೆಯನ್ನು ಪರಿಹರಿಸುವುದರ ಕಡೆಗೆ ಗಮನಹರಿಸಬೇಕು ಎಂದರು.

ವ್ಯಕ್ತಿತ್ವ ವಿಕಸನದ ಕುರಿತಾಗಿ ತರಬೇತಿ ನೀಡಿದ ಸುಧಾಕರ್ ಕಾರ್ಕಳ, ವ್ಯಕ್ತಿ ತನ್ನ ಮನಸ್ಸಿನ ಒಳಗಿನ ತತ್ವಗಳನ್ನು ಬದಲಾವಣೆ ಮಾಡಿಕೊಂಡರೆ ಜೀವನದಲ್ಲಿ ಯಶಸ್ಸು ಖಂಡಿತ ಎಂದು ಹೇಳಿದರು.ಮನುಷ್ಯ ತನ್ನ ಜೀವನದಲ್ಲಿ ನಕಾರತ್ಮಕ ಭಾವನೆಗಳನ್ನು ಹೆಚ್ಚಾಗಿ ಆಳವಡಿಕೊಳ್ಳದೆ ಸಕಾರತ್ಮಕ ಭಾವನೆಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಬಂಟ್ವಾಳ, ಉದ್ಯಮಿ ನಿತಿನ್ ಅರ್ಬಿ, ಬಂಟ್ವಾಳ ಘಟಕ ಉಪಾಧ್ಯಕ್ಷ ಸತೀಶ್ ಬಾಯಿಲ, ಎಸ್‍ಡಿಎಂಸಿ ಅಧ್ಯಕ್ಷ ಜನಾಬ್ ಪಿ ಇಬ್ರಾಹಿಂ, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಬಾಬನಕಟ್ಟೆ, ಉಪಾಧ್ಯಕ್ಷ ರಮೇಶ್ ಮುಜಲ ಮತ್ತು ಸಲಹೆಗಾರರಾದ ದಯಾನಂದ ಪೂಜಾರಿ ಕೊಡಜೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಸದಸ್ಯರು ಮತ್ತು ಶಾಲಾ ಮಕ್ಕಳು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು. ಕಾರ್ಯದರ್ಶಿ ಸುಜಿತ್ ಅಂಚನ್ ಸ್ವಾಗತಿಸಿದರು, ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ ವಂದಿಸಿದರು. ರಾಜೇಶ್ ಬಲ್ಯ ಮತ್ತು ದಿನಕರ್ ಬರಿಮಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X