Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಕೋರ್ಟ್ ಬಲ,ಹೈಕೋಟ್ ನ್ಯಾಯಾಧೀಶರ...

ಸುಪ್ರೀಂ ಕೋರ್ಟ್ ಬಲ,ಹೈಕೋಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು ಹೆಚ್ಚಿಸಲು ಪ್ರಧಾನಿಗೆ ಸಿಜೆಐ ಮನವಿ

ವಾರ್ತಾಭಾರತಿವಾರ್ತಾಭಾರತಿ22 Jun 2019 8:06 PM IST
share
ಸುಪ್ರೀಂ ಕೋರ್ಟ್ ಬಲ,ಹೈಕೋಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು ಹೆಚ್ಚಿಸಲು ಪ್ರಧಾನಿಗೆ ಸಿಜೆಐ ಮನವಿ

 ಹೊಸದಿಲ್ಲಿ,ಜೂ.22: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂರು ಪತ್ರಗಳನ್ನು ಬರೆದಿರುವ ಭಾರತದ ಮುಖ್ಯ ನ್ಯಾಯಾಧೀಶ(ಸಿಜೆಐ) ರಂಜನ ಗೊಗೊಯಿ ಅವರು,ಸರ್ವೋಚ್ಚ ನ್ಯಾಯಾಲಯದ ಬಲವನ್ನು ಹೆಚ್ಚಿಸುವಂತೆ ಹಾಗೂ ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62ರಿಂದ 65ಕ್ಕೆ ಏರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

 ಈ ಕ್ರಮಗಳಿಂದ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳಲ್ಲಿ 43 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಚಾರಣೆಗೆ ಬಾಕಿಯಿರುವ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

 ವರ್ಷಗಳಿಂದಲೂ ಬಾಕಿಯಿರುವ ಪ್ರಕರಣಗಳ ವಿಚಾರಣೆ ನಡೆಸಲು ಸರ್ವೋಚ್ಚ ಮತ್ತು ಉಚ್ಚ ನ್ಯಾಯಾಲಯಗಳ ನಿವೃತ್ತ ನ್ಯಾಯಾಧೀಶರಿಗೆ ಅವಕಾಶವನ್ನು ಕಲ್ಪಿಸುವ ಪದ್ಧತಿಯನ್ನು ಪುನರುಜ್ಜೀವನಗೊಳಿಸುವಂತೆ ನ್ಯಾ.ಗೊಗೊಯಿ ತನ್ನ ಮೂರನೇ ಪತ್ರದಲ್ಲಿ ಪ್ರಧಾನಿಯನ್ನು ಕೋರಿದ್ದಾರೆ. ಸಂವಿಧಾನದ 128 ಮತ್ತು 224ಎ ವಿಧಿಗಳಡಿ ಈ ಪದ್ಧತಿಗೆ ಅವಕಾಶವಿದೆ.

ಸರ್ವೋಚ್ಚ ನ್ಯಾಯಾಲಯವು 2008ರಿಂದೀಚಿಗೆ ಕಳೆದ ಮೇ ತಿಂಗಳಿನಲ್ಲಷ್ಟೇ 31 ನ್ಯಾಯಾಧೀಶರ ತನ್ನ ಪೂರ್ಣ ಬಲವನ್ನು ಪಡೆದುಕೊಂಡಿತ್ತು. 2008ರಲ್ಲಿ ಸಂಸತ್ತು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಸಂಖ್ಯೆಯನ್ನು 26ರಿಂದ 31ಕ್ಕೆ ಹೆಚ್ಚಿಸಿತ್ತು.

 ಸರ್ವೋಚ್ಚ ನ್ಯಾಯಾಲಯದಲ್ಲಿ ಈಗಾಗಲೇ 58,669 ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಈ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ತಿಳಿಸಿರುವ ನ್ಯಾ.ಗೊಗೊಯಿ,26 ಪ್ರಕರಣಗಳು 25 ವರ್ಷಗಳಿಂದ,100 ಪ್ರಕರಣಗಳು 20 ವರ್ಷಗಳಿಂದ,593 ಪ್ರಕರಣಗಳು 15 ವರ್ಷಗಳಿಂದ ಮತ್ತು 4,997 ಪ್ರಕರಣಗಳು 10 ವರ್ಷಗಳಿಂದ ಬಾಕಿಯಿವೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಹಿಂದಿನ ಸಲ ಬಲ ಹೆಚ್ಚಿಸಿದಾಗಿನಿಂದ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ 41,078ರಿಂದ 58,669ಕ್ಕೆ ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಧೀಶರ ಕೊರತೆಯಿಂದಾಗಿ ಪ್ರಮುಖ ವಿಷಯಗಳ ವಿಚಾರಣೆಗೆ ಐವರು ನ್ಯಾಯಾಧೀಶರ ಪೀಠಗಳನ್ನು ರಚಿಸಲು ತನಗೆ ಸಾಧ್ಯವಾಗುತ್ತಿಲ್ಲ ಎನ್ನುವುದನ್ನೂ ಅವರು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62ರಿಂದ 65ಕ್ಕೇರಿಸುವಂತೆ ನ್ಯಾ.ಗೊಗೊಯಿ ತನ್ನ ಎರಡನೇ ಪತ್ರದಲ್ಲಿ ಮೋದಿಯವರನ್ನು ಕೋರಿದ್ದಾರೆ. 24 ಉಚ್ಚ ನ್ಯಾಯಾಲಯಗಳಲ್ಲಿ 43 ಲಕ್ಷಕ್ಕೂ ಅಧಿಕ ಪ್ರಕರಣಗಳು ಬಾಕಿಯಿದ್ದು, ಈ ಕ್ರಮದಿಂದ ಅವುಗಳ ವಿಲೇವಾರಿಗೆ ನೆರವಾಗಲಿದೆ ಎಂದಿರುವ ಅವರು,ಉಚ್ಚ ನ್ಯಾಯಾಲಯಗಳಲ್ಲಿ ಶೇ.37ರಷ್ಟು ನ್ಯಾಯಾಧೀಶರ ಹುದ್ದೆಗಳು ಖಾಲಿಯಾಗಿರುವುದನ್ನು ಬೆಟ್ಟು ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X