Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಲಸು ಚಾಕಲೇಟ್ ತಯಾರಿ ಯಶಸ್ವಿ:...

ಹಲಸು ಚಾಕಲೇಟ್ ತಯಾರಿ ಯಶಸ್ವಿ: ಸತೀಶ್ಚಂದ್ರ

ಹಲಸಿನ ಮೇಳ: ಪ್ರದರ್ಶನ-ಮಾರಾಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Jun 2019 8:29 PM IST
share
ಹಲಸು ಚಾಕಲೇಟ್ ತಯಾರಿ ಯಶಸ್ವಿ: ಸತೀಶ್ಚಂದ್ರ

ಮಂಗಳೂರು, ಜೂ.22: ಹಲಸು ಹಣ್ಣಿನ ಚಾಕಲೇಟು ತಯಾರಿಕೆಗೆ ಕ್ಯಾಂಪ್ಕೊ ಮುಂದಾಗಿದ್ದು, ಪ್ರಾಯೋಗಿಕವಾಗಿ ತಯಾರಿಸಲಾದ ಚಾಕಲೇಟು ಶೇ.90ರಷ್ಟು ಯಶಸ್ವಿಯಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು.

ಸಾವಯವ ಕೃಷಿಕ ಗ್ರಾಹಕ ಬಳಗ ವತಿಯಿಂದ 4ನೇ ವರ್ಷದ ಹಲಸಿನ ಮೇಳಕ್ಕೆ (ಪ್ರದರ್ಶನ ಮತ್ತು ಮಾರಾಟ) ಶನಿವಾರ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರಾವಳಿಯ ಅನೇಕ ರೈತರು ಹಲಸಿನ ಮರಗಳನ್ನು ಕತ್ತರಿಸಿ ಅಡಕೆ ತೋಟ ಮಾಡಿದರು. ಈಗ ಹಲಸಿಗೆ ಬೇಡಿಕೆ ಬಂದಿದೆ. ಬಡವರಿಗೆ ಸೀಮಿತವಾಗಿದ್ದ ಹಲಸು ಇಂದು ಎಲ್ಲೆಡೆ ಮನ್ನಣೆ ಪಡೆಯುತ್ತಿದೆ. ಸಹಕಾರಿ ಕ್ಷೇತ್ರ ಕೂಡ ಹಲಸಿನ ಬಗ್ಗೆ ಆಸಕ್ತಿ ವಹಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಸಾವಯವ ಬಳಗ ಉಪಾಧ್ಯಕ್ಷ ರಾಜೇಂದ್ರ ಬಳ್ಳಾಲ್, ಪ್ರಧಾನ ಕಾರ್ಯದರ್ಶಿ ಡಾ.ಫಝಲ್, ಬಳಗದ ಅಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಮತ್ತಿತರರಿದ್ದರು.

ಜನಜಂಗುಳಿ: ಹಲಸು ಮೇಳದ ಮೊದಲ ದಿನವೇ ಕಾಲಿಡಲು ಜಾಗವಿಲ್ಲದಷ್ಟು ನಗರವಾಸಿಗಳು ಬಾಳಂಭಟ್ ಸಭಾಂಗಣಕ್ಕೆ ದಾಂಗುಡಿ ಇಟ್ಟಿದ್ದರು. ಮಾಡಿಟ್ಟ ತಿಂಡಿಗಳೆಲ್ಲ ಕ್ಷಣಾರ್ಧದಲ್ಲಿ ಮಾಯವಾಗಿ ಬಿಡುತ್ತಿದ್ದವು. ರವಿವಾರವೂ ರಜಾ ದಿನವಾಗಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿದೆ.

ಹಲಸು ಮೇಳದಲ್ಲಿ ಸ್ಥಳೀಯ ಹಲಸು ಸೇರಿದಂತೆ ವಿಶೇಷ ಆಕರ್ಷಣೆಯಾಗಿ ದೊಡ್ಡಬಳ್ಳಾಪುರದ ತೂಬಗೆರೆ ಹಲಸು, ಕೇಸರಿ ಬಣ್ಣದ ಚಂದ್ರ ಹಲಸು ಹಾಗೂ ರುದ್ರಾಕ್ಷಿ ಹಲಸಿನ ಮಾರಾಟ ಭರದಿಂದ ನಡೆಯುತ್ತಿದೆ. ಇದು ತುಸು ತುಟ್ಟಿಯಾದರೂ ವಿಶೇಷ ರುಚಿ. ಶನಿವಾರ ತೂಬಗೆರೆ ಹಲಸು ತಿನ್ನಲು ಗ್ರಾಹಕರು ಮುಗಿಬಿದ್ದಿದ್ದರು.

ಹಲಸಿನಿಂದ ತಯಾರಿಸಿದ ಗಟ್ಟಿ, ಹಲಸಿನ ಚಟ್ನಿ, ಹಲಸಿನ ಕೇಕ್, ಪಾಯಸ, ಅಪ್ಪ, ಹಲಸಿನದ್ದೇ ಹೋಳಿಗೆ... ಒಂದಲ್ಲ ಎರಡಲ್ಲ, ಹತ್ತಾರು ಬಗೆಯ ಖಾದ್ಯಗಳು. ಅನೇಕ ಸ್ಟಾಲ್‌ಗಳಲ್ಲಿ ಸ್ಥಳದಲ್ಲೇ ಹಲಸಿನ ಖಾದ್ಯಗಳನ್ನು ತಯಾರಿಸಿ ಬಿಸಿಬಿಸಿಯಾಗಿ ಗ್ರಾಹಕರಿಗೆ ನೀಡುವ ವ್ಯವಸ್ಥೆಯೂ ಉಂಟು. ಹಲಸಿನ ಬೀಜದಿಂದ ಮಾಡಿದ ಖಾದ್ಯಗಳೂ ಇವೆ. ಅಲ್ಲದೆ, ದಿನಸಿ ಮತ್ತು ಸಾವಯವ ತರಕಾರಿ ಸಂತೆಯೂ ಇಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X