Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಉಡುಪಿ ಹೆಲ್ಪ್’ ಆ್ಯಪ್: 10 ದಿನಗಳಲ್ಲಿ...

‘ಉಡುಪಿ ಹೆಲ್ಪ್’ ಆ್ಯಪ್: 10 ದಿನಗಳಲ್ಲಿ 164 ದೂರುಗಳು

ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ: 720 ಆ್ಯಪ್ ಬಳಕೆದಾರರು

ವಾರ್ತಾಭಾರತಿವಾರ್ತಾಭಾರತಿ22 Jun 2019 9:06 PM IST
share
‘ಉಡುಪಿ ಹೆಲ್ಪ್’ ಆ್ಯಪ್: 10 ದಿನಗಳಲ್ಲಿ 164 ದೂರುಗಳು

ಉಡುಪಿ, ಜೂ.22: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಎದುರಾಗುವ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಸಮಸ್ಯೆಗಳ ಕ್ಷಿಪ್ರ ನಿರ್ವ ಹಣೆಗಾಗಿ ಜಿಲ್ಲಾಡಳಿತ ಜಾರಿಗೆ ತಂದಿರುವ ‘ಉಡುಪಿ ಹೆಲ್ಪ್’ ಆ್ಯಪ್‌ಗೆ ಜನ ರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಆ್ಯಪ್ ಬಿಡುಗಡೆಯಾದ ಹತ್ತೇ ದಿನಗಳಲ್ಲಿ ಈ ಆ್ಯಪ್‌ಗೆ ಒಟ್ಟು 164 ದೂರುಗಳು ಬಂದಿವೆ.

ಉಡುಪಿ ನಗರಸಭೆಯ 35 ವಾರ್ಡ್‌ಗಳ ವ್ಯಾಪ್ತಿಯಿಂದ ಜೂ.22ರವರೆಗೆ ಬಂದ ಎಲ್ಲ 164 ದೂರುಗಳಿಗೂ ತಕ್ಷಣವೇ ಸ್ಪಂದಿಸಿ, ಸಮಸ್ಯೆಯನ್ನು ಆರು ಗಂಟೆಯ ಅವಧಿಯೊಳಗೆ ಸರಿಪಡಿಸಲಾಗಿದೆ. ಹೀಗೆ ಪ್ರತಿದಿನ ಸರಾಸರಿ 10-12 ದೂರುಗಳು ಈ ಆ್ಯಪ್‌ನಲ್ಲಿ ದಾಖಲಾಗುತ್ತಿವೆ. ಈವರೆಗೆ ಅತ್ಯಂತ ಹೆಚ್ಚು ದೂರುಗಳು ತೆಂಕಪೇಟೆ ವಾರ್ಡ್‌ನಿಂದ ಬಂದಿವೆ. ಸದ್ಯ 720 ಮಂದಿ ಈ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಬಳಸುತ್ತಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ವಿಶೇಷ ಆಸಕ್ತಿ ಯಿಂದ ಜಾರಿಗೆ ತಂದಿರುವ ಈ ಆ್ಯಪನ್ನು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಜೂ.11ರಂದು ಸಾರ್ವಜನಿಕ ಬಳಕೆಗೆ ಬಿಡುಗಡೆ ಮಾಡಿದ್ದರು. ಆ್ಯಪ್ ಬಿಡುಗಡೆಯಾದ ಒಂದೇ ವಾರದಲ್ಲಿ ಸುಮಾರು 73 ದೂರುಗಳು ದಾಖಲಾಗಿವೆ.

ಉಡುಪಿ ನಗರಸಭೆಯ 35 ವಾರ್ಡ್‌ಗಳಿಗೆ ಸೀಮಿತವಾಗಿರುವ ಈ ಆ್ಯಪ್ ಮೂಲಕ ನಗರದ ಜನತೆ ತಮ್ಮ ವಾರ್ಡ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ಫೋಟೋ/ವೀಡಿಯೋ ಸಮೇತವಾಗಿ ದಾಖಲು ಮಾಡುತ್ತಿದ್ದಾರೆ. ಈ ದೂರು ಗಳಿಗೆ ಕ್ಷಿಪ್ರವಾಗಿ ಸ್ಪಂದಿಸುತ್ತಿರುವ ನಗರಾಡಳಿತವು, ದೂರಿನ ವಿಲೇವಾರಿಗೆ ನಿಗದಿಪಡಿಸಿರುವ ಗರಿಷ್ಠ 6 ಗಂಟೆಗಳ ಮಿತಿಗಿಂತ ಮುಂಚೆಯೇ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಕೆಲವು ದೂರುಗಳಿಗೆ ಒಂದು ಗಂಟೆಯೊಳಗೆ ಪರಿಹಾರ ಒದಗಿಸಲಾಗಿದೆ.

ಈ ಆ್ಯಪ್‌ನಲ್ಲಿ ದೂರುದಾರರು ಸಮಸ್ಯೆಗಳ ಫೋಟೋ ಹಾಕುವುದರಿಂದ ನಗರಾಡಳಿತಕ್ಕೆ ಸಮಸ್ಯೆಯ ಸ್ವರೂಪ ತಕ್ಷಣವೇ ತಿಳಿಯುತ್ತದೆ. ಆದುದರಿಂದ ಅದಕ್ಕೆ ಬೇಕಾದ ಸಿಬ್ಬಂದಿ, ಸಲಕರಣೆಗಳು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸ್ಥಳಕ್ಕೆ ಭೇಟಿ ನೀಡಲಾಗುತ್ತದೆ. ಇದರಿಂದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುತ್ತಿದೆ. ಸಮಸ್ಯೆ ಪರಿಹಾರವಾದ ನಂತರ ಅದರ ಫೋಟೋ ತೆಗೆದು, ದೂರುದಾರನಿಗೆ ಕಳುಹಿಸಲಾಗುತ್ತಿದೆ.

ಧಾರಾಕಾರ ಮಳೆಯ ಸಮಸ್ಯೆ, ವಿದ್ಯುತ್ ಕಡಿತ, ಮರ ಬಿದ್ದ ಪ್ರಕರಣಗಳು, ವಿದ್ಯುತ್ ಕಂಬ ಬಿದ್ದಿರುವುದು, ಪ್ರವಾಹ, ಚರಂಡಿ, ಚರಂಡಿ ತುಂಬಿ ಅಡಚಣೆ, ಸಿಡಿಲಿನಿಂದ ಹಾನಿ, ಕಟ್ಟಡ ಕುಸಿತ, ಭೂಕುಸಿತ ಮತ್ತಿತರ ಪ್ರಾಕೃತಿಕ ಸಮಸ್ಯೆಗಳ ಬಗ್ಗೆ ಈ ಆ್ಯಪ್ನಲ್ಲಿ ದೂರು ನೀಡಬಹುದಾಗಿದೆ.

ಉಡುಪಿ ನಗರಸಭೆ ಮಾತ್ರವಲ್ಲದೆ ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಮತ್ತಿತರ ಇಲಾಖೆಗಳು ಆ ಆ್ಯಪ್‌ನಲ್ಲಿನ ಬರುವ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿವೆ. ಸಾರ್ವಜನಿಕರು ಪ್ಲೆಸ್ಟೋರ್ ನಿಂದ ಈ ಆ್ಯಪ್‌ನ್ನು ಡೌನ್‌ಲೋಡ್ ಮಾಡಿ ಕೊಳ್ಳಬಹುದಾಗಿದೆ ಎಂದು ಆ್ಯಪ್‌ನ ಮೇಲುಸ್ತುವಾರಿಯಾಗಿರುವ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ ತಿಳಿಸಿದ್ದಾರೆ.

‘ಉಡುಪಿ ಹೆಲ್ಪ್ ಆ್ಯಪ್‌ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಇನ್ನಷ್ಟು ಪ್ರತಿಕ್ರಿಯೆ ದೊರೆಯುವ ನಿಟ್ಟಿನಲ್ಲಿ ಕಾರ್ಯ ಮಾಡಲಾಗುತ್ತಿದೆ. ಸದ್ಯ ಉಡುಪಿ ನಗರಸಭೆಯ 35ವಾರ್ಡ್‌ಗಳಿಗೆ ಸೀಮಿತವಾಗಿರುವ ಈ ಆ್ಯಪ್‌ನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’
-ಸಂತೋಷ್ ಕುಮಾರ್, ಯೋಜನಾ ನಿರ್ದೇಶಕ, ನಗರಾಭಿವೃದ್ಧಿ ಕೋಶ, ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X