Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಆರ್‌ಎಸ್ ಬಳಿಕ ಈಗ ಕಳಂಕಿತ...

ಐಆರ್‌ಎಸ್ ಬಳಿಕ ಈಗ ಕಳಂಕಿತ ಐಎಎಸ್,ಐಪಿಎಸ್ ಅಧಿಕಾರಿಗಳ ಕಡ್ಡಾಯ ನಿವೃತ್ತಿಗೆ ಮೋದಿ ಸರಕಾರ ಸಜ್ಜು

ವಾರ್ತಾಭಾರತಿವಾರ್ತಾಭಾರತಿ22 Jun 2019 9:59 PM IST
share
ಐಆರ್‌ಎಸ್ ಬಳಿಕ ಈಗ ಕಳಂಕಿತ ಐಎಎಸ್,ಐಪಿಎಸ್ ಅಧಿಕಾರಿಗಳ ಕಡ್ಡಾಯ ನಿವೃತ್ತಿಗೆ ಮೋದಿ ಸರಕಾರ ಸಜ್ಜು

ಹೊಸದಿಲ್ಲಿ,ಜೂ.22: ‘ಭ್ರಷ್ಟ ’ ಮತ್ತು ‘ನಿಷ್ಪ್ರಯೋಜಕ ’ ಸರಕಾರಿ ಅಧಿಕಾರಿಗಳನ್ನು ತೊಲಗಿಸುವ ತನ್ನ ಪ್ರಯತ್ನದ ಮುಂದುವರಿಕೆಯಾಗಿ ಇಂತಹ ಇನ್ನಷ್ಟು ಅಧಿಕಾರಿಗಳ ವಿರುದ್ಧ ಗದಾಪ್ರಹಾರಕ್ಕೆ ಕೇಂದ್ರದ ನರೇಂದ್ರ ಮೋದಿ ಸರಕಾರವು ನಿರ್ಧರಿಸಿದೆ. ಅದು ‘ಕಳಂಕಿತ’ ಅಧಿಕಾರಿಗಳ ಕುರಿತು ಮಾಸಿಕ ಪರಾಮರ್ಶೆಯನ್ನೂ ನಡೆಸಲಿದೆ.

ಈಗಾಗಲೇ ಪ್ರತಿಷ್ಠಿತ ಐಆರ್‌ಎಸ್ ಸೇವೆಯಿಂದ 27 ಹಿರಿಯ ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿಗೊಳಿಸಿರುವ ಸರಕಾರವು ಕೇಂದ್ರ ನಾಗರಿಕ ಸೇವೆ(ಪಿಂಚಣಿ) ನಿಯಮಾವಳಿಗಳ ಮೂಲಭೂತ ನಿಯಮ 56(ಜೆ) ಮತ್ತು ನಿಯಮ 48ರಡಿ ಅವಧಿಪೂರ್ವ ನಿವೃತ್ತಿಗಾಗಿ ಅಧಿಕಾರಿಗಳ ಹೆಸರುಗಳನ್ನು ಪ್ರತಿ ತಿಂಗಳು ಶಿಫಾರಸು ಮಾಡುವಂತೆ ಎಲ್ಲ ಸಚಿವಾಲಯಗಳು ಮತ್ತು ಸಾರ್ವಜನಿಕ ಕ್ಷೇತ್ರದ ಉದ್ಯಮ(ಪಿಎಸ್‌ಯು)ಗಳಿಗೆ ಸೂಚಿಸಿದೆ. ಮೂಲಭೂತ ನಿಯಮ 56(ಜೆ) ಸಾರ್ವಜನಿಕ ಹಿತಾಸಕ್ತಿಯಲ್ಲಿ ಸರಕಾರಿ ನೌಕರರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲು ಅವಕಾಶವನ್ನು ಕಲ್ಪಿಸಿದೆ.

ಕೆಲವು ಕಳಂಕಿತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ದಂಡಿಸಲು ನಿಯಮವೊಂದನ್ನೂ ಸರಕಾರವು ಬಳಸಿಕೊಳ್ಳಬಹುದು ಮತ್ತು ಈ ಪೈಕಿ ಕೆಲವರು ಈಗಾಗಲೇ ಸರಕಾರದ ನಿಗರಾಣಿಯಲ್ಲಿರಬಹುದು ಎಂದು ವಿಷಯವನ್ನು ಬಲ್ಲ ಮೂಲಗಳು ತಿಳಿಸಿವೆ.

ನಿಷ್ಪ್ರಯೋಜಕ ಅಥವಾ ಭ್ರಷ್ಟ ಅಧಿಕಾರಿಗಳನ್ನು ದಂಡಿಸಲು ನಿಯಮವೊಂದು ಈಗಾಗಲೇ ಇದೆಯಾದರೂ ಅದನ್ನು ಅಪರೂಪವಾಗಿ ಬಳಸಲಾಗಿದೆ. ಆದರೆ ಮೋದಿ ಸರಕಾರವು ಆದಾಯ ತೆರಿಗೆ ಮತ್ತು ಕಸ್ಟಮ್ಸ್ ಇಲಾಖೆಗಳ 27 ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸುವುದರೊಂದಿಗೆ ಈ ನಿಯಮವೀಗ ಹೆಚ್ಚಿನ ಬಲ ಪಡೆದುಕೊಂಡಿದೆ.

ತನ್ನ ಹಿಂದಿನ ಅಧಿಕಾರಾವಧಿಯಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಬಳಸಲು ಮೋದಿ ಸರಕಾರವು ಉದ್ದೇಶಿಸಿತ್ತು. ಈಗ ಹೆಚ್ಚಿನ ಜನಾದೇಶ ದೊರಕಿರುವುದರಿಂದ ಅದು ಈ ನಿಟ್ಟಿನಲ್ಲಿ ಹೆಚ್ಚು ಸಕ್ರಿಯಗೊಂಡಿದೆ.

ತಮಗೆ ಅನುಕೂಲರಲ್ಲದ ಅಧಿಕಾರಿಗಳನ್ನು ಗುರಿಯಾಗಿಸಿಕೊಳ್ಳಲು ನಿಯಮದ ಸಂಭಾವ್ಯ ದುರುಪಯೋಗದ ಬಗ್ಗೆ ಕೆಲವು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದರೆ,ಹೆಚ್ಚಿನ ಸರಕಾರಿ ನೌಕರರು ದೇಶದ ಅಧಿಕಾರಶಾಹಿಯ ಸುಧಾರಣೆಯಲ್ಲಿ ಇದೊಂದು ಸ್ವಾಗತಾರ್ಹ ಕ್ರಮವೆಂದು ಪ್ರಶಂಸಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X