Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೋಕ್ಸಿಯನ್ನು ಆ್ಯಂಟಿಗುವಾದಿಂದ ಕರೆತರಲು...

ಚೋಕ್ಸಿಯನ್ನು ಆ್ಯಂಟಿಗುವಾದಿಂದ ಕರೆತರಲು ಏರ್ ಆ್ಯಂಬುಲನ್ಸ್ ಒದಗಿಸಲು ಸಿದ್ಧ:ಈ.ಡಿ.

ವಾರ್ತಾಭಾರತಿವಾರ್ತಾಭಾರತಿ22 Jun 2019 10:12 PM IST
share
ಚೋಕ್ಸಿಯನ್ನು ಆ್ಯಂಟಿಗುವಾದಿಂದ ಕರೆತರಲು ಏರ್ ಆ್ಯಂಬುಲನ್ಸ್ ಒದಗಿಸಲು ಸಿದ್ಧ:ಈ.ಡಿ.

ಹೊಸದಿಲ್ಲಿ,ಜೂ.22: ದೇಶಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಆ್ಯಂಟಿಗುವಾದಿಂದ ಭಾರತಕ್ಕೆ ಕರೆತರಲು ಏರ್ ಆ್ಯಂಬುಲೆನ್ಸ್ ಮತ್ತು ವೈದ್ಯರ ತಂಡವೊಂದನ್ನು ಒದಗಿಸಲು ತಾನು ಸಿದ್ಧವಿರುವುದಾಗಿ ಜಾರಿ ನಿರ್ದೇಶನಾಲಯ (ಈ.ಡಿ.)ವು ಬಾಂಬೆ ಉಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ನಿರಂತರ ಆರೋಗ್ಯ ಸಮಸ್ಯೆಗಳಿಂದಾಗಿ ತನಗೆ ಭಾರತಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡು ಚೋಕ್ಸಿ ಜೂ.17ರಂದು ನ್ಯಾಯಾಲಯದಲ್ಲಿ ಸಲ್ಲಿಸಿರುವ ಅಫಿಡವಿಟ್ ‘ಕುಂಟುನೆಪ’ವಾಗಿದೆ ಎಂದು ಈ.ಡಿ.ತಾನು ಸಲ್ಲಿಸಿರುವ ಪ್ರತಿ ಅಫಿಡವಿಟ್‌ನಲ್ಲಿ ಬಣ್ಣಿಸಿದೆ.

ಚೋಕ್ಸಿ ನೀಡಿರುವ ವೈದ್ಯಕೀಯ ಕಾರಣಗಳು ಕಾನೂನು ಕಲಾಪವನ್ನು ವಿಳಂಬಿಸುವ ಪ್ರಯತ್ನದಲ್ಲಿ ನ್ಯಾಯಾಲಯವನ್ನು ದಾರಿ ತಪ್ಪಿಸಲು ಕುಂಟುನೆಪಗಳಾಗಿವೆ. ಆತನನ್ನು ವೈದ್ಯಕೀಯ ನಿಗಾದಡಿ ಭಾರತಕ್ಕೆ ಕರೆತರಲು ಏರ್ ಆ್ಯಂಬುಲೆನ್ಸ್ ಮತ್ತು ವೈದ್ಯಕೀಯ ತಂಡವನ್ನು ಒದಗಿಸಲು ತಾನು ಸಿದ್ಧವಿರುವುದಾಗಿ ಅದು ತಿಳಿಸಿದೆ.

13,000 ಕೋ.ರೂ.ಗಳ ಪಿಎನ್‌ಬಿ ಹಗರಣದ ತನಿಖೆಗೆ ಚೋಕ್ಸಿ ಎಂದೂ ಸಹಕರಿಸಿಲಿಲ್ಲ ಎಂದೂ ಅದು ನ್ಯಾಯಾಲಯಕ್ಕೆ ತಿಳಿಸಿದೆ.

 ಚೋಕ್ಸಿ ತನ್ನ 6,129 ಕೋ.ರೂ.ಮೌಲ್ಯದ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಹೇಳಿದ್ದಾನೆ. ತನಿಖೆಯ ಸಂದರ್ಭ 2,100 ಕೋ.ರೂ.ಮೌಲ್ಯದ ಆಸ್ತಿಗಳನ್ನು ಮಾತ್ರ ಈ.ಡಿ.ವಶಪಡಿಸಿಕೊಂಡಿದೆ. ಅಲ್ಲದೆ ಚೋಕ್ಸಿ ಭಾರತದಿಂದ ಪರಾರಿಯಾಗುವ ಮುನ್ನ ತನ್ನೆಲ್ಲ ಆಸ್ತಿಗಳನ್ನು ಮಾರಾಟ ಮಾಡಲು ಪ್ರಯತ್ನಿಸಿದ್ದ ಎಂದೂ ಪ್ರತಿ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

 ಚೋಕ್ಸಿ ವಿರುದ್ಧ ಜಾಮೀನುರಹಿತ ವಾರಂಟ್‌ನ್ನು ಹೊರಡಿಸಲಾಗಿದೆ. ಇಂಟರ್‌ಪೋಲ್ ಕೂಡ ಆತನ ವಿರುದ್ಧ ನೋಟಿಸ್ ಹೊರಡಿಸಿದೆ. ಆತ ಭಾರತಕ್ಕೆ ಮರಳಲು ನಿರಾಕರಿಸಿದ್ದಾನೆ. ಹೀಗಾಗಿ ಆತ ದೇಶಭ್ರಷ್ಟ, ತಲೆಮರೆಸಿ ಕೊಂಡಿರುವ ಆರೋಪಿಯಾಗಿದ್ದಾನೆ ಎಂದು ಹೇಳಿರುವ ಈ.ಡಿ.,ತನಿಖೆಗೆ ಹಾಜರಾಗಲು ಆತನಿಗೆ ಹಲವಾರು ಅವಕಾಶಗಳನ್ನು ನೀಡಲಾಗಿತ್ತು,ಆದರೆ ಆತ ವಿಚಾರಣೆಯನ್ನು ತಪ್ಪಿಸಿಕೊಂಡಿದ್ದಾನೆ ಎಂದು ತಿಳಿಸಿದೆ.

ತಾನು ಆ್ಯಂಟಿಗುವಾದಲ್ಲಿ ವಾಸವಾಗಿದ್ದೇನೆ ಮತ್ತು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ತನಿಖಾ ಸಂಸ್ಥೆಗಳು ಆ್ಯಂಟಿಗುವಾದಲ್ಲಿ ತನ್ನ ವಿಚಾರಣೆ ನಡೆಸಲು ನಿರ್ದೇಶ ನೀಡಬೇಕು ಎಂದು ತನ್ನ ಅಫಿಡವಿಟ್‌ನಲ್ಲಿ ಕೋರಿರುವ ಚೋಕ್ಸಿ,ತಾನು ಪ್ರಯಾಣಕ್ಕೆ ವೈದ್ಯಕೀಯವಾಗಿ ಅರ್ಹನಾದ ತಕ್ಷಣ ಭಾರತಕ್ಕೆ ಮರಳುತ್ತೇನೆ ಎಂದು ತಿಳಿಸಿದ್ದಾನೆ. ಕಾನೂನು ಎದುರಿಸಲು ತನಗೆ ಹಿಂಜರಿಕೆಯಿಲ್ಲ ಹಾಗೂ ತನಿಖಾ ಸಂಸ್ಥೆಗಳ ಸಮನ್ಸ್‌ಗೆ ತಾನು ಉತ್ತರಿಸಿದ್ದೇನೆ ಎಂದೂ ಆತ ಹೇಳಿಕೊಂಡಿದ್ದಾನೆ. ಚೋಕ್ಸಿಗೆ 2015,ಜ.18ರಂದು ಆ್ಯಂಟಿಗುವಾ ಮತ್ತು ಬರ್ಬುಡಾ ಪೌರತ್ವ ಲಭಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X