Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಆರ್‌ಕೆ ಕೃತಿಗಳಲ್ಲಿ ನಾವು ಎಂಬ ಆಯಾಮ:...

ಸಿಆರ್‌ಕೆ ಕೃತಿಗಳಲ್ಲಿ ನಾವು ಎಂಬ ಆಯಾಮ: ನಾಡೋಜ ಎಂ.ಎಚ್.ಕೃಷ್ಣಯ್ಯ

ವಾರ್ತಾಭಾರತಿವಾರ್ತಾಭಾರತಿ23 Jun 2019 7:18 PM IST
share
ಸಿಆರ್‌ಕೆ ಕೃತಿಗಳಲ್ಲಿ ನಾವು ಎಂಬ ಆಯಾಮ: ನಾಡೋಜ ಎಂ.ಎಚ್.ಕೃಷ್ಣಯ್ಯ

ಬೆಂಗಳೂರು, ಜೂ.23: ಸಿ.ಆರ್.ಕೃಷ್ಣರಾವ್ ಕೃತಿಗಳನ್ನು ಓದುತ್ತಾ ಹೋದರೆ ನಾವು ಎಂಬ ದೃಷ್ಠಿಕೋನ ಚಿಗುರೊಡೆಯುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ನಾಡೋಜ ಪುರಸ್ಕೃತ ಎಂ.ಎಚ್. ಕೃಷ್ಣಯ್ಯ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಗಾಂಧಿ ಭವನದಲ್ಲಿ ಎಂ.ಎಸ್.ಕೃಷ್ಣನ್ ಸ್ಮರಣ ಸಂಸ್ಥೆ ಮತ್ತು ನವ ಕರ್ನಾಟಕ ಪ್ರಕಾಶನ ಆಯೋಜಿಸಿದ್ದ ಸಿ.ಆರ್.ಕೃಷ್ಣರಾವ್‌ಗೆ ಅಭಿನಂದನೆ ಹಾಗೂ ಬದುಕಿನ ತಿರುವುಗಳ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಆರ್‌ಕೆ ಕೃತಿಗಳಲ್ಲಿ ನಾವು ಎಂಬ ಸಮಗ್ರ ದೃಷ್ಠಿಕೋನವನ್ನು ಕೃತಿಯುದ್ದಕ್ಕೂ ಕಟ್ಟಿಕೊಟ್ಟಿರುವುದನ್ನು ಕಾಣಬಹುದಾಗಿದೆ ಎಂದರು.

ಸಿಆರ್‌ಕೆ ಬದುಕಿನ ತಿರುವುಗಳು ಹಲವು ಸಂಪೂರ್ಣ ಅಪರಿಚಿತ ರೂಪಿಕೆಗಳನ್ನು ಪರಿಚಯಿಸುತ್ತದೆ. ಬದುಕಿನ ತಿರುವುಗಳು ಗ್ರಂಥವು ತಿರುವೇ ಹೊರತು ಸುಳಿಯಲ್ಲ. ಸುಳಿ ಒಳಕ್ಕೆ ಸೆಳೆಯುತ್ತದೆ. ಆದರೆ ತಿರುವು ಬರಬೇಕಾದರೆ ಸುಳಿಯನ್ನು ದಾಟಿ ಬರಬೇಕು ಎಂದು ಹೇಳಿದರು.

ಇದು ದಿನಚರಿಯಲ್ಲ, ಆತ್ಮಕಥೆಯಲ್ಲ, ಕಾದಂಬರಿಯಲ್ಲ. ಇದೊಂದು ಅನುಭವ ಕಥನ. ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವಾಗ ಆದ ಅನುಭವಗಳನ್ನು ಈ ಕೃತಿಯ ಮೂಲಕ ಹಂಚಿಕೊಂಡಿದ್ದಾರೆ. ಅವರು ಬೆಂಗಳೂರಿಗೆ ಬಂದ ನಂತರ ಅನೇಕ ಕೃತಿಗಳನ್ನು ಹೊರತಂದರು. ವಿಜ್ಞಾನ, ತಂತ್ರಜ್ಞಾನ ನಿಘಂಟು ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಸಂಪಾದಿಸಿದ ಕೃತಿಗಳನ್ನು ಹೊರತಂದು ಸಾಹಿತ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ಪತ್ರಕರ್ತರಾಗಿ, ಕಮ್ಯುನಿಸ್ಟ್ ಕಾರ್ಯಕರ್ತರಾಗಿ, ನವ ಕರ್ನಾಟಕ ಪ್ರಕಾಶನದ ಹಿರಿಯ ಸಂಪಾದಕರಾಗಿ ಹೀಗೆ ಅನೇಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಹಿರಿಯ ಪತ್ರಕರ್ತೆ ಡಾ.ವಿಜಯಾ ಮಾತನಾಡಿ, ಸಿ.ಆರ್.ಕೆ ಸರಳ ಜೀವಿ. ಯಾವುದೇ ವಿಷಯವಾದರೂ ಸಮರ್ಥವಾಗಿ ಬರೆಯುವಂತವರು. ಯಾವುದೇ ಸಮಯದಲ್ಲೂ ಧೃತಿಗೆಡದೆ ಅನೇಕ ಯುವ ಜನಾಂಗಕ್ಕೆ ಮಾರ್ಗದರ್ಶಕರಾದವರು. ಯಾವುದೇ ಪತ್ರಿಕೆಗಳಿಗೆ ಜಾಹೀರಾತು ಮುಖ್ಯ. ಆದರೆ, ಸಿಆರ್‌ಕೆ ಮೇನಕಾ ಪತ್ರಿಕೆಯ ಸಂಪಾದಕರಾಗಿದ್ದಾಗ ಯಾವುದೇ ಜಾಹೀರಾತುಗಳಿಲ್ಲದ ಸಂದರ್ಭದಲ್ಲೂ ಆರ್ಥಿಕ ಸಂಕಷ್ಟವನ್ನು ಸರಿದೂಗಿಸಿಕೊಂಡು ಸಾಗಿದ್ದಾರೆ ಎಂದು ಹೇಳಿದರು.

ಕನ್ನಡ ಸಿನಿಮಾ ರಂಗದಲ್ಲೂ ಅವರು ತನ್ನನ್ನು ತೊಡಗಿಸಿಕೊಂಡಿದ್ದಾರೆ. ಮೊದಲು ತಮಿಳುನಾಡಿನ ಸೆನ್ಸಾರ್ ಬೋರ್ಡ್‌ನಲ್ಲಿ ಇದ್ದರು. ಈಗ ಇದು ಕರ್ನಾಟಕದಲ್ಲೂ ಜಾರಿಯಾಗಲು ಸಿಆರ್‌ಕೆ ಪಾತ್ರ ಮುಖ್ಯವಾದುದು. 70 ದಶಕದಲ್ಲಿ ಅನೇಕ ಚಳವಳಿಗಳು ಹುಟ್ಟಿಕೊಂಡವು. ಇಂತಹ ಚಳವಳಿಗೆ ಧುಮುಕಿದ ಅನೇಕ ಯುವ ಜನರಿಗೆ ವಿಚಾರಗಳ ಬಗ್ಗೆ ಹಸಿವು ನೀಗಿಸಿದ್ದಾರೆ ಎಂದು ಹೇಳಿದರು.

ಜಿ.ರಾಮಕೃಷ್ಣ ಮಾತನಾಡಿ, ಸಮಾಜದಲ್ಲಿ ಸಾರ್ವಜನಿಕ ಸಂಪತ್ತು ಎಗ್ಗಿಲ್ಲದೆ ಲೂಟಿಯಾಗುತ್ತಿದೆ. ಆದರೆ ಇದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಜೊತೆಗೆ ಪತ್ರಿಕೆಗಳು ಸಹ ವಿಮರ್ಶಾತ್ಮಕ ಪ್ರತಿಕ್ರಿಯೆಗಳನ್ನು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಿಆರ್‌ಕೆ ಅವರ ತೀರ್ಮಾನಗಳು, ಸೈದ್ಧಾಂತಿಕ ವಿಚಾರಗಳು ಅನೇಕ ಸ್ನೇಹಿತರ ಒಡನಾಟ ಸೃಷ್ಟಿಸಿದೆ. ಇವರು ಸ್ವಲ್ಪ ಸಂಕೋಚ ಮನೋಭಾವದವರಾದರೂ ಬರವಣಿಗೆಯಲ್ಲಿ ಯಾವುದೇ ಸಂಕೋಚ ಇಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಟಿ.ಆರ್.ಅನಂತರಾಮು, ಸಿದ್ದನಗೌಡ ಪಾಟೀಲ, ವಸುಂಧರಾ ಭೂಪತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X