Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಪ್ರಾದೇಶಿಕ ಪಕ್ಷಗಳನ್ನು...

ಬಿಜೆಪಿ ಪ್ರಾದೇಶಿಕ ಪಕ್ಷಗಳನ್ನು ನುಂಗುತ್ತಿದ್ದರೆ, ಕಾಂಗ್ರೆಸ್ ಇದ್ದೂ ಸತ್ತಂತಿದೆ: ದಿನೇಶ್ ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ23 Jun 2019 8:53 PM IST
share
ಬಿಜೆಪಿ ಪ್ರಾದೇಶಿಕ ಪಕ್ಷಗಳನ್ನು ನುಂಗುತ್ತಿದ್ದರೆ, ಕಾಂಗ್ರೆಸ್ ಇದ್ದೂ ಸತ್ತಂತಿದೆ: ದಿನೇಶ್ ಅಮೀನ್ ಮಟ್ಟು

ಮೈಸೂರು, ಜೂ.23: ರಾಷ್ಟ್ರೀಯ ಪಕ್ಷ ಬಿಜೆಪಿ ಪ್ರಾದೇಶಿಕ ಪಕ್ಷಗಳನ್ನು ನುಂಗುತ್ತಿದ್ದರೆ, ಕಾಂಗ್ರೆಸ್ ಪಕ್ಷ ಇದ್ದೂ ಸತ್ತಂತಿದೆ ಎಂದು ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯ ಪಟ್ಟರು.

ದೇಸಿರಂಗ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ರವಿವಾರ ಕಲಾಮಂದಿರದ ಮನೆಯಂಗಳದಲ್ಲಿ ಆಯೋಜಿಸಿದ್ದ ಪ್ರೊ.ಕೆ.ರಾಮದಾಸ್ ನೆನಪಿನಲ್ಲಿ ಸಂವಾದ, ಪುಸ್ತಕ ಬಿಡುಗಡೆ, ಲೇಖನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮಲ್ಲಿರುವ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ನುಂಗುತ್ತಿವೆ. ಕಾಂಗ್ರೆಸ್ ತನ್ನ ವೈಫಲ್ಯದಿಂದ ಚುನಾವಣೆಯಲ್ಲಿ ಸೋಲುತ್ತಿದ್ದು, ಬಿಜೆಪಿ ಪ್ರಾದೇಶಿಕ ಪಕ್ಷಗಳನ್ನು ನುಂಗುತ್ತಿದೆ. ಪ್ರಾದೇಶಿಕ ಪಕ್ಷಗಳು ತನ್ನ ಸ್ಥಾನವನ್ನು ಹಿಡಿದಿಟ್ಟುಕೊಳ್ಳಲು ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇತ್ತೀಚೆಗೆ ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್, ಕಾಂಗ್ರೆಸ್ ಪಕ್ಷ ಸಾಯಬೇಕು ಎಂದು ಹೇಳಿದ್ದರು. ಅವರು ಹೇಳಿದ್ದು ನಿಜ ಅನಿಸುತ್ತಿದೆ. ಸದ್ಯದ ಕಾಂಗ್ರೆಸ್ ಪಕ್ಷ ಇದ್ದೂ ಸತ್ತಂತಿದೆ. ಬಿಜೆಪಿ ಅಧಿಕಾರ ಹಿಡಿಯುವುದಕ್ಕೆ ಅದು ತನ್ನ ಸಿದ್ಧಾಂತ ಮುಂದಿಟ್ಟು, ಕಾರ್ಯತಂತ್ರ ರೂಪಿಸಿ ಸಫಲವಾಗುತ್ತಿದೆ. ಸಿದ್ಧಾಂತವಿರುವ ಪಕ್ಷವನ್ನು ಎದುರಿಸಲು ಮತ್ತೊಂದು ಸಿದ್ಧಾಂತವಿರುವ ಪಕ್ಷದಿಂದಲೇ ಸಾಧ್ಯ. ಕಮ್ಯುನಿಸ್ಟರಲ್ಲಿ ಆ ಸಿದ್ಧಾಂತವಿದ್ದರೂ ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳ ಸ್ಥಿತಿ ನೋಡಿದರೆ ಇತರೆ ಪಕ್ಷಗಳಿಂದ ಅದು ಸಾಧ್ಯವಿಲ್ಲ ಅನಿಸುತ್ತದೆ ಎಂದು ಹೇಳಿದರು.

ಇದೇ ರೀತಿಯ ವಾತಾವರಣ ಮುಂದುವರೆದರೆ ಬಿಜೆಪಿಗೆ ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯವನ್ನು ಬಿಟ್ಟುಕೊಡಬೇಕಾಗುತ್ತದೆ. ರಾಜ್ಯದ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಸೋತಾಗ ಯಾರು ಹೆಚ್ಚು ಖುಷಿಪಟ್ಟರು ಎಂಬುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಬಿಟ್ಟು ಕೊಟ್ಟ ಜಾಗವನ್ನು ಪ್ರಾದೇಶಿಕ ಪಕ್ಷಗಳಿಗೆ ತುಂಬಲು ಸಾಧ್ಯವಾಗುತ್ತಿಲ್ಲ. ಸ್ವಾರ್ಥ ರಾಜಕಾರಣದಿಂದ ಕರ್ನಾಟಕದಲ್ಲಿ ಮೈತ್ರಿ ಅಭ್ಯರ್ಥಿಗಳು ಸೋತರೇ ವಿನಃ, ಬಿಜೆಪಿಯಿಂದಲ್ಲ ಎಂದು ದಿನೇಶ್ ಅಮೀನ್ ಮಟ್ಟು ಹೇಳಿದರು.

ಈಗಿನ ವಿದ್ಯಾರ್ಥಿಗಳಿಗೆ ಇತಿಹಾಸದ ಅರಿವಿಲ್ಲ. ವಾಟ್ಸ್ ಅಪ್‍ನಲ್ಲಿ ಕಂಡದ್ದೇ ಇತಿಹಾಸವೆನ್ನುತ್ತಿದ್ದಾರೆ. 18 ರಿಂದ 34 ವರ್ಷದೊಳಗಿನ ಯುವಜನರು ಸುಳ್ಳು ಸುದ್ದಿಗಳಿಗೆ ಮಾರು ಹೋಗಿ ವಿಸ್ಮತಿಗೆ ಒಳಗಾಗಿದ್ದಾರೆ. ಅವರನ್ನು ಬದಲಿಸುವುದು ಕಷ್ಟವಾಗಿದೆ. ಹೀಗಾಗಿ ನಾನು ಕಳೆದ ಎರಡು ತಿಂಗಳಿನಿಂದ ಸುಮ್ಮನಾಗಿದ್ದೇನೆ. ಬಿಜೆಪಿಯವರ ಭಯದಿಂದಲ್ಲ, ನಮ್ಮವರನ್ನಾದರೂ ಬದಲಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ರೈತ ನಾಯಕಿ ಸುನಂದ ಜಯರಾಂ ಪುಸ್ತಕ ಬಿಡುಗಡೆ ಮಾಡಿದರು. ಸಮಾಜವಾದಿ ಚಿಂತಕ ಪ.ಮಲ್ಲೇಶ್ ಅಧ್ಯಕ್ಷತೆ ವಹಿಸಿದ್ದರು. ರಂಗನಟ ಮಂಡ್ಯ ರಮೇಶ್, ದೇಸಿರಂಗ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಜನಮನ ಕೃಷ್ಣ, ದಿನಮಣಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X