Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ…

ಓ ಮೆಣಸೇ…

ಪಿ.ಎ.ರೈಪಿ.ಎ.ರೈ24 Jun 2019 12:00 AM IST
share
ಓ ಮೆಣಸೇ…

ಉಷ್ಟ್ರಾಸನ ಅಭ್ಯಾಸ ಮಾಡುವುದರಿಂದ ಬೆನ್ನು, ಭುಜ ಸದೃಢವಾಗುತ್ತದೆ - ನರೇಂದ್ರ ಮೋದಿ, ಪ್ರಧಾನಿ.
 ಬೆಲೆ ಏರಿಕೆಯ ಭಾರ ಹೊರಲು ಜನರಿಗೆ ಉಷ್ಟ್ರಾಸನವೇ ಗತಿ.

---------------------
ಪ್ರಧಾನಿ ಮೋದಿ ಸುಗ್ರೀವಾಜ್ಞೆ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮುಂದಾದರೆ ಅವರನ್ನು ಯಾರೂ ತಡೆಯಲು ಸಾಧ್ಯವಿಲ್ಲ - ಉದ್ಧವಠಾಕ್ರೆ, ಶಿವಸೇನಾ ವರಿಷ್ಠ.
ಸುಗ್ರೀವಾಜ್ಞೆಯ ಮೂಲಕ ಸಂವಿಧಾನವನ್ನು ಕೆಡವುವ ಸಾಧ್ಯತೆಯ ಬಗ್ಗೆ ಮೋದಿ ಯೋಚಿಸುತ್ತಿದ್ದಾರೆ.

---------------------

ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ನೀಡಿರುವ ರಾಜೀನಾಮೆಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ - ಎಚ್.ಡಿ ದೇವೇಗೌಡ, ಜೆಡಿಎಸ್ ವರಿಷ್ಠ.
  ಅಂದರೆ ಅವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ ಎಂಬ ಪರೋಕ್ಷ ಹೇಳಿಕೆಯೇ?
---------------------
 ಕಾಂಗ್ರೆಸ್‌ಗೆ ಮಹತ್ವದ ಸರ್ಜರಿಯೊಂದು ಆಗಬೇಕಿದೆ - ವೀರಪ್ಪ ಮೊಯ್ಲಿ, ಮಾಜಿ ಸಂಸದ.

ಹೌದು, ತಮ್ಮಂತಹ ಹಿರಿಯರಿಗೆ ಪಕ್ಷದಲ್ಲಿ ವಿಶ್ರಾಂತಿ ನೀಡುವ ಕ್ರಾಂತಿಕಾರಿ ಸರ್ಜರಿ.

---------------------
  
ಭಾರತ ಸನಾತನ ಧರ್ಮದ ಪ್ರತಿಯೊಂದು ವಿದ್ಯೆಯೂ ಪಾಶ್ಚಿಮಾತ್ಯರ ದಾಳಿಯಿಂದ ನಲುಗಿದೆ - ರಾಘವೇಶ್ವರ ಭಾರತಿ ಸ್ವಾಮೀಜಿ, ರಾಮ ಚಂದ್ರಾಪುರ ಮಠ.
ಶೃಂಗಾರವೂ ಒಂದು ವಿದ್ಯೆಯೇ?
---------------------
  
ಪಾಕಿಸ್ತಾನದ ಮೇಲೆ ಟೀಮ್ ಇಂಡಿಯಾದಿಂದಲೂ ಮತ್ತೊಂದು ಸ್ಟ್ರೈಕ್ ನಡೆದಿದೆ. ಫಲಿತಾಂಶ ಮಾತ್ರ ಅದೇ - ಅಮಿತ್ ಶಾ, ಕೇಂದ್ರ ಸಚಿವ
  ಬಿಹಾರದಲ್ಲಿ ಮಕ್ಕಳ ಮಾರಣ ಹೋಮದ ವಿರುದ್ಧ ಒಂದು ಸ್ಟ್ರೈಕ್ ನಡೆಸಬಾರದೇ?
---------------------
  
ನನ್ನ ತಂದೆ ಯಡಿಯೂರಪ್ಪ ನಮಗೋಸ್ಕರ ಬದುಕುವುದಕ್ಕಿಂತ ಸಮಾಜಕ್ಕಾಗಿ ಬದುಕಬೇಕೆಂದು ಹೇಳಿದ್ದಾರೆ - ಬಿ.ವೈ. ವಿಜಯೇಂದ್ರ. ಬಿಜೆಪಿ ಯುವ ಮೋರ್ಚಾ ಪ್ರ. ಕಾರ್ಯದರ್ಶಿ.
ಸ್ವ ಮಜಾಕ್ಕಾಗಿ ಎಂದು ಹೇಳಿರಬೇಕು, ಇನ್ನೊಮ್ಮೆ ಕೇಳಿಕೊಳ್ಳಿ.

---------------------
  
ಹಿರಣ್ಯಕಶಿಪು ಮತ್ತು ಪ್ರಹ್ಲಾದರ ನಡುವೆ ವಿವಾದ ಉಂಟಾಗಿದ್ದೇ ಶಿಕ್ಷಣ ನೀತಿಗಾಗಿ - ವಿಶ್ವೇಶ ತೀರ್ಥ ಸ್ವಾಮೀಜಿ, ಪೇಜಾವರ ಮಠ.
ಹೌದಂತೆ. ಪ್ರಹ್ಲಾದನದು ಸಂಸ್ಕೃತ ಮೀಡಿಯಂ, ಹಿರಣ್ಯ ಕಶಿಪುವಿನದ್ದು ದ್ರಾವಿಡ ಮೀಡಿಯಂ.
---------------------
  ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ನಿವೃತ್ತಿ ಪ್ರಕಟಿಸಿ ಸಿನೆಮಾ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿ
- ಚಂದ್ರಶೇಖರ ಪಾಟೀಲ, ಸಾಹಿತಿ
   
ಕಣ್ಣೀರಿನ ಚಿತ್ರಗಳು ಸಾಲು ಸಾಲು ಹೊರಬರಬಹುದು.

---------------------
  ನಾನು ಗರ್ಭಿಣಿ ಆಗಿದ್ದಾಗ ಯೋಗ ಮಾಡಿದ್ದರ ಪರಿಣಾಮ ಹೆರಿಗೆಯ ನಂತರ ಮೂರೇ ತಿಂಗಳಲ್ಲಿ ಕೆಲಸಕ್ಕೆ ಮರಳಿದೆ
- ಲಾರಾ ದತ್ತಾ, ಮಾಜಿ ವಿಶ್ವ ಸುಂದರಿ
   
ಯೋಗ ಮಾಡಿದ್ದರಿಂದಲೇ ನಾನು ಗರ್ಭಿಣಿಯಾದೆ ಎಂದು ಹೇಳಲಿಲ್ಲ ಪುಣ್ಯ.

---------------------
  ಉಪ್ಪು ತಿಂದವರೆಲ್ಲ ನೀರು ಕುಡಿದಿದ್ದಾರೆಯೇ ?
- ರೋಷನ್ ಬೇಗ್, ಶಾಸಕ   
ಈಗಷ್ಟೇ ಕುಡಿಯುತ್ತಿದ್ದಾರೆ.

---------------------
  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ ಜನ ‘ನಮ್ಮ ನಿರ್ಧಾರ ಸರಿಯಲ್ಲ’ ಎಂದು ಬೇಸರ ಮಾಡಿಕೊಳ್ಳುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇವೆ
- ಕುಮಾರಸ್ವಾಮಿ, ಮುಖ್ಯಮಂತ್ರಿ
   
‘ನಮ್ಮ ನಿರ್ಧಾರ ಸರಿ ಇಲ್ಲ’ ಎಂದು ಕಾಂಗ್ರೆಸ್‌ನವರು ಹಣೆ ಚಚ್ಚಿಕೊಳ್ಳುವಂತಾಗಿದೆ. 

---------------------
  ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸದರು ಕಡ್ಡಾಯವಾಗಿ ಹಿಂದಿ ಕಲಿಯಬೇಕು
- ಅಮಿತ್ ಶಾ, ಕೇಂದ್ರ ಸಚಿವ
  ನೀವೇಕೆ ಕನ್ನಡ ಕಲಿಯಬಾರದು?
---------------------
  ಮೈತ್ರಿ ಸರಕಾರ ನುಗ್ಗೆ ಮರದ ರೀತಿ ಟೊಳ್ಳಾಗಿದೆ
- ಆರ್.ಅಶೋಕ್, ಶಾಸಕ
 ಸದಾ ನುಗ್ಗೇ ಮರದ ಬಗ್ಗೆ ಚಿಂತೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

---------------------
  ಅಭಿವೃದ್ಧಿಗೆ ವೇಗ ನೀಡುವುದೇ ಒಂದು ದೇಶ ಒಂದೇ ಚುನಾವಣೆ ಹಿಂದಿನ ಉದ್ದೇಶ
- ರಾಮನಾಥ ಕೋವಿಂದ್, ರಾಷ್ಟ್ರಪತಿ
   ಅತಿ ವೇಗ ಅಪಘಾತಕ್ಕೆ ಕಾರಣ.

--------------------- 
ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆಯಲ್ಲಿ ನಾನು ಮೂಗು ತೂರಿಸಲಾರೆ - ರಾಹುಲ್‌ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
ಹಸ್ತ ತೂರಿಸಿದರೆ ಆಯಿತಪ್ಪ.

---------------------
  
ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರಿಗೆ ಆ ಸ್ಥಾನದ ಅರ್ಥವೇ ಗೊತ್ತಿಲ್ಲ - ಎಚ್, ವಿಶ್ವನಾಥ್, ಶಾಸಕ
   
ಒಟ್ಟಿನಲ್ಲಿ ಸಿದ್ದರಾಮಯ್ಯರನ್ನು ಬಯ್ಯುವುದಕ್ಕಾಗಿಯೇ ಶಾಸಕರಾದಂತಿದೆ. -

--------------------
   
ರಾಹುಲ್‌ಗಾಂಧಿ ಯೋಗ ಮಾಡದ ಕಾರಣ ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರ ಪಕ್ಷ ಸೋಲು ಕಂಡಿತು - ಬಾಬಾ ರಾಮ್‌ದೇವ್, ಯೋಗ ಗುರು.
   
ಪಕ್ಷ ಸೋಲುಕಂಡರೂ ಅವರ ಆರೋಗ್ಯ ತುಂಬಾ ಚೆನ್ನಾಗಿದೆ.

---------------------
  
ಮಧ್ಯಂತರ ಚುನಾವಣೆ ನಡೆದರೆ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲುತ್ತದೆ - ಕೆ.ಎಸ್. ಈಶ್ವರಪ್ಪ, ಶಾಸಕ
  ಮಧ್ಯಂತರ ಚುನಾವಣೆಗೆ ಅವಕಾಶ ಕೊಡುವುದಿಲ್ಲ ಎಂಬ ಯಡಿಯೂರಪ್ಪರ ಹೇಳಿಕೆಗೆ ಈ ರೀತಿಯ ಪ್ರತಿಕ್ರಿಯೆಯೇ?
---------------------
  ನಾನು ಮುಖ್ಯಮಂತ್ರಿ ಆದ ಮೇಲೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದೇನೆ
- ಕುಮಾರಸ್ವಾಮಿ ಮುಖ್ಯಮಂತ್ರಿ
  ತಮ್ಮ ಕುಟುಂಬದ ಎಲ್ಲರ ವಿಶ್ವಾಸವನ್ನು ತೆಗೆದುಕೊಂಡರೆ ಸಾಕೇ?
---------------------  
ಯೋಗದಿಂದ ಸಾಮರಸ್ಯವೂ ಸಾಧ್ಯ -ವಿಶ್ವೇಶ ತೀರ್ಥ ಸ್ವಾಮೀಜಿ, ಪೇಜಾವರ ಮಠ ಸದ್ಯಕ್ಕೆ ಯೋಗದ ಹೆಸರಲ್ಲಿ ಸಾಮರಸ್ಯವನ್ನು ಕೆಡಿಸುವ ಪ್ರಯತ್ನವಷ್ಟೇ ನಡೆಯುತ್ತಿದೆ 

share
ಪಿ.ಎ.ರೈ
ಪಿ.ಎ.ರೈ
Next Story
X