Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಬಿಐ ಸಹಾಯಕ ಗವರ್ನರ್ ವಿರಲ್ ಆಚಾರ್ಯ...

ಆರ್‌ಬಿಐ ಸಹಾಯಕ ಗವರ್ನರ್ ವಿರಲ್ ಆಚಾರ್ಯ ಅಧಿಕಾರದ ಅವಧಿ ಮುಗಿಯುವ 6 ತಿಂಗಳ ಮೊದಲೇ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ24 Jun 2019 10:18 AM IST
share
ಆರ್‌ಬಿಐ ಸಹಾಯಕ ಗವರ್ನರ್ ವಿರಲ್ ಆಚಾರ್ಯ ಅಧಿಕಾರದ ಅವಧಿ ಮುಗಿಯುವ 6 ತಿಂಗಳ ಮೊದಲೇ ರಾಜೀನಾಮೆ

ಹೊಸದಿಲ್ಲಿ, ಜೂ.24: ಸೇವಾವಧಿ ಕೊನೆಗೊಳ್ಳುವ ಮೊದಲೇ ಆರ್‌ಬಿಐ ಡೆಪ್ಯುಟಿ ಗವರ್ನರ್ ವಿರಲ್ ಆಚಾರ್ಯ ತಮ್ಮ ಹುದ್ದೆ ತೊರೆದಿದ್ದಾರೆ.

ಅನಿವಾರ್ಯ ವೈಯಕ್ತಿಕ ಕಾರಣಗಳಿಂದಾಗಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ರಿಸರ್ವ್ ಬ್ಯಾಂಕಿಗೆ ಬರೆದಿರುವ ಪತ್ರದಲ್ಲಿ ಆಚಾರ್ಯ ತಿಳಿಸಿದ್ದಾರೆ. ಅವರ ಸೇವಾವಧಿ ಮುಂದಿನ ಫೆಬ್ರವರಿಗೆ ಅಂತ್ಯವಾಗಲಿತ್ತು. ಅವರ ಪತ್ರದ ಬಗ್ಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂಬುದನ್ನು ಸಕ್ಷಮ ಪ್ರಾಧಿಕಾರ ಪರಿಗಣಿಸುತ್ತಿದೆ ಎಂದು ಆರ್‌ಬಿಐ ಸೋಮವಾರ ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.

 ಆರ್‌ಬಿಐ ಕಾರ್ಯನಿರ್ವಹಣೆಯ ಬಗ್ಗೆ ವಿರಲ್ ಆಚಾರ್ಯ ಈ ಹಿಂದೆ ಕೆಲವು ಬಾರಿ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.

    ಆರ್‌ಬಿಐ ಗವರ್ನರ್ ಆಗಿದ್ದ ಉರ್ಜಿತ್ ಪಟೇಲ್ 2018ರ ಡಿಸೆಂಬರ್‌ನಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಸರಕಾರದೊಂದಿಗೆ ಭಿನ್ನಾಭಿಪ್ರಾಯ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇದಕ್ಕೂ ಮುನ್ನ ವಿರಲ್ ಆಚಾರ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಆರ್‌ಬಿಐಯ ಸ್ವಾಯತ್ತತೆಗೆ ಎದುರಾಗಲಿರುವ ಸಂಭಾವ್ಯ ಅಪಾಯದ ಬಗ್ಗೆ ಎಚ್ಚರಿಸಿದ್ದರು. ರಿಸರ್ವ್ ಬ್ಯಾಂಕ್‌ನ ಸ್ವಾತಂತ್ರವನ್ನು ಗೌರವಿಸದ ಸರಕಾರಗಳು ಪ್ರಧಾನ ನಿಯಂತ್ರಕ ಸಂಸ್ಥೆಯನ್ನು ಕಡೆಗಣಿಸಿದ ಬಗ್ಗೆ ಒಂದಲ್ಲ ಒಂದು ದಿನ ಪಶ್ಚಾತ್ತಾಪ ಪಡಲಿವೆ ಎಂದು ಆಚಾರ್ಯ ಹೇಳಿದ್ದು, ಈ ಉಪನ್ಯಾಸ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಆರ್‌ಬಿಐ ಗವರ್ನರ್, ಹಿರಿಯ ನಿರ್ವಾಹಕ ಹುದ್ದೆಗಳಿಗೆ ತಂತ್ರಜ್ಞರ ಬದಲು ಸರಕಾರಿ ಅಥವಾ ಸರಕಾರಕ್ಕೆ ಸಂಯೋಜಿತವಾದ ಅಧಿಕಾರಿಗಳನ್ನು ನೇಮಿಸುವುದು ಕೂಡಾ ಸಂಸ್ಥೆಯ ಸ್ವಾಯತ್ತೆಯನ್ನು ದುರ್ಬಲಗೊಳಿಸುವ ಕ್ರಮವಾಗಿದೆ ಎಂದವರು ಹೇಳಿದ್ದರು.

  ಆರ್‌ಬಿಐ ವಶದಲ್ಲಿ ಇರಿಸಿದ್ದ ಮೀಸಲು ಹಣವನ್ನು ಬಿಡುಗಡೆಗೊಳಿಸಬೇಕೆಂದು ಸರಕಾರ ಆರ್‌ಬಿಐ ಮೇಲೆ ನಿರಂತರ ಒತ್ತಡ ಹೇರಿತ್ತು. ಆದರೆ ಚುನಾವಣಾ ವರ್ಷದಲ್ಲಿ ಹೀಗೆ ಮಾಡುವುದು ಸರಿಯಲ್ಲ ಎಂದು ಆಚಾರ್ಯ ಸ್ಪಷ್ಟವಾಗಿ ತಿಳಿಸಿದ್ದರು.

ಆರ್ಥಿಕ ಕಾರ್ಯನೀತಿಯ ಬಗ್ಗೆ ಬಿಗಿ ನಿಲುವು ಹೊಂದಿದ್ದ ಆಚಾರ್ಯರ ನಿರ್ಗಮನದಿಂದಾಗಿ ಆರ್ಥಿಕ ನೀತಿ ಸಮಿತಿಯಲ್ಲಿ ಮೆದು ನಿಲುವಿನ ಅಧಿಕಾರಿಗಳ ಪ್ರಭಾವ ಹೆಚ್ಚಲಿದೆ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2019ರ ಜುಲೈ 23ರ ಬಳಿಕ ತನಗೆ ಆರ್‌ಬಿಐ ಡೆಪ್ಯುಟಿ ಗವರ್ನರ್ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಾಗದು ಎಂದು ವಿರಲ್ ಆಚಾರ್ಯ ಕೆಲ ವಾರಗಳ ಹಿಂದೆಯೇ ಸರಕಾರಕ್ಕೆ ಪತ್ರ ಬರೆದಿದ್ದರು ಎಂದು ಆರ್‌ಬಿಐ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅವರು ಈ ಹಿಂದೆ ಕೆಲಸ ಮಾಡುತ್ತಿದ್ದ ನ್ಯೂಯಾರ್ಕ್ ವಿವಿಯ ಸ್ಟರ್ನ್ ಸ್ಕೂಲ್ ಆಫ್ ಬಿಸಿನೆಸ್ ಇಕನಾಮಿಕ್ಸ್‌ನಲ್ಲಿ ಆಗಸ್ಟ್‌ನಿಂದ ಪ್ರೊಫೆಸರ್ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಬಿಸಿನೆಸ್ ಸ್ಟಾಂಡರ್ಡ್ ದಿನಪತ್ರಿಕೆ ವರದಿ ಮಾಡಿದೆ.

ಉರ್ಜಿತ್ ಪಟೇಲ್‌ರಂತೆಯೇ ಆಚಾರ್ಯ ಕೂಡಾ ಅವಧಿಗೆ ಮುನ್ನವೇ ಪದತ್ಯಾಗ ಮಾಡುವ ಸಾಧ್ಯತೆಯಿದೆ ಎಂಬ ವರದಿಯನ್ನು ಕೇಂದ್ರ ಸರಕಾರ ನಿರಾಕರಿಸಿತ್ತು. ಈ ಮಧ್ಯೆ, ಆಚಾರ್ಯ ರಾಜೀನಾಮೆ ಬಗ್ಗೆ ವಿಪಕ್ಷಗಳು ಕೇಂದ್ರ ಸರಕಾರದ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿವೆ. ಸರಕಾರ ಬದಲಾಗಿದೆ, ಆದರೆ ಆರ್ಥಿಕ ಎಳೆದಾಟದ ವಿಷಯ ಬದಲಾಗಿಲ್ಲ. ಬಿಜೆಪಿ ಆಡಳಿತಕ್ಕೆ ಸತ್ಯದ ಕೈಗನ್ನಡಿ ತೋರಿಸಲು ಪ್ರಯತ್ನಿಸಿ ರಾಜೀನಾಮೆ ನೀಡಿದ ತಜ್ಞರ ಸುದೀರ್ಘ ಪಟ್ಟಿಗೆ ವಿರಲ್ ಆಚಾರ್ಯರ ಹೆಸರೂ ಸೇರಿಕೊಂಡಿದೆ. 4 ಆರ್ಥಿಕ ಸಲಹೆಗಾರರು, 2 ಆರ್‌ಬಿಐ ಗವರ್ನರ್‌ಗಳು, ನೀತಿ ಆಯೋಗದ ಒಬ್ಬ ಉಪಾಧ್ಯಕ್ಷರು ಅವಧಿಗೂ ಮುನ್ನವೇ ಹೊರನಡೆದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ. ಉರ್ಜಿತ್ ಪಟೇಲ್‌ಗೆ ಆರ್‌ಬಿಐ ಗವರ್ನರ್ ಹುದ್ದೆಗೆ ಭಡ್ತಿ ನೀಡಿದ ಬಳಿಕ 2016ರ ಡಿಸೆಂಬರ್‌ನಲ್ಲಿ ಆರ್‌ಬಿಐಗೆ ನೇಮಕಗೊಂಡ ನಾಲ್ವರು ಡೆಪ್ಯುಟಿ ಗವರ್ನರ್‌ಗಳಲ್ಲಿ ಆಚಾರ್ಯ ಒಬ್ಬರಾಗಿದ್ದಾರೆ.

ಆರ್ಥಿಕ ಸಂಕಷ್ಟದ ಎಚ್ಚರಿಕೆ ನೀಡಿದ್ದ ಆಚಾರ್ಯ

ದೇಶದ ಆರ್ಥಿಕ ಪ್ರಗತಿ ಮತ್ತು ಸ್ಥಿರತೆಯಲ್ಲಿ ಕೇಂದ್ರ ಬ್ಯಾಂಕ್‌ಗಳ ಪ್ರಾಧಾನ್ಯತೆಯ ಬಗ್ಗೆ ಆಚಾರ್ಯರಿಗೆ ಅರಿವಿತ್ತು ಹಾಗೂ ರಿಸರ್ವ್ ಬ್ಯಾಂಕ್‌ಗೆ ಸ್ವಾತಂತ್ರ ಹಾಗೂ ಸ್ವಾಯತ್ತೆ ಅಗತ್ಯ ಎಂದು ಬಲವಾಗಿ ಪ್ರತಿಪಾದಿಸುತ್ತಿದ್ದರು. ಆರ್‌ಬಿಐನ ಅಧಿಕಾರವನ್ನು ದುರ್ಬಲಗೊಳಿಸುವ ಯಾವುದೇ ಸರಕಾರ ಆರ್ಥಿಕ ಮಾರುಕಟ್ಟೆಯ ಕುಸಿತ ಹಾಗೂ ಆರ್ಥಿಕ ಸಂಕಷ್ಟ ಎದುರಿಸಬೇಕಾದೀತು ಎಂದವರು ಎಚ್ಚರಿಸಿದ್ದರು.

ಕಳೆದ ಎರಡೂವರೆ ವರ್ಷಗಳಿಂದ ಆರ್‌ಬಿಐ ಗೊಂದಲದ ಹಾದಿಯಲ್ಲಿ ಸಾಗಿ ಬಂದಿದೆ. ಆರ್‌ಬಿಐಯ ನೀತಿ ನಿರೂಪಣೆಯಲ್ಲಿ ಬದಲಾವಣೆಯಾಗಿದ್ದು ದರ ನಿರ್ಣಯಿಸುವ ಜವಾಬ್ದಾರಿ ಆರು ಸದಸ್ಯರ ಸಮಿತಿಯದ್ದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X