Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಯಲಾದ ಗಡ್ಡದ ರಹಸ್ಯ: ಉದ್ಯಮಿಯ ಮನೆ ಮೇಲೆ...

ಬಯಲಾದ ಗಡ್ಡದ ರಹಸ್ಯ: ಉದ್ಯಮಿಯ ಮನೆ ಮೇಲೆ ದಾಳಿ ನಡೆಸಿದ ‘ಸಿಬಿಐ ಅಧಿಕಾರಿ’ಯ ಬಂಧನ!

ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ24 Jun 2019 2:32 PM IST
share
ಬಯಲಾದ ಗಡ್ಡದ ರಹಸ್ಯ: ಉದ್ಯಮಿಯ ಮನೆ ಮೇಲೆ ದಾಳಿ ನಡೆಸಿದ ‘ಸಿಬಿಐ ಅಧಿಕಾರಿ’ಯ ಬಂಧನ!

ಮುಝಫ್ಫರನಗರ್, ಜೂ.24: ಅಕ್ಷಯ್ ಕುಮಾರ್ ಅಭಿನಯದ ಬಾಲಿವುಡ್ ಸಿನೆಮಾ ‘ಸ್ಪೆಷಲ್ 26’ ಇದರ ನಿಜ ಜೀವನದ ಅವತರಣಿಕೆಯೆಂಬಂತೆ ಸಿಬಿಐ ಅಧಿಕಾರಿ ತಾನೆಂದು ಹೇಳಿಕೊಂಡ ವಂಚಕನೊಬ್ಬ ಪೊಲೀಸರನ್ನೇ ಯಾಮಾರಿಸಲು ಯತ್ನಿಸಿ ಕೊನೆಗೆ ಸಿಕ್ಕಿ ಬಿದ್ದಿದ್ದಾನೆ.

ತಾನೊಬ್ಬ ಸಿಬಿಐ ಅಧಿಕಾರಿ ಎಂದು ಪೊಲೀಸರನ್ನು ನಂಬಿಸಿದ ಆತ ಠಾಣೆಗೆ ತೆರಳಿ, ಮುಝಫ್ಫರನಗರದ ಉದ್ಯಮಿಯೊಬ್ಬರ ನಿವಾಸಕ್ಕೆ ದಾಳಿ ನಡೆಸಲು ಇಬ್ಬರು ಕಾನ್‍ ಸ್ಟೇಬಲ್ ಗಳನ್ನು ತನ್ನ ಜತೆ ಕಳುಹಿಸುವಂತೆ ಹೇಳಿದ್ದ.

ಈತ ದಾಳಿ ಸಂದರ್ಭ ಸಿಖ್ ವ್ಯಕ್ತಿಯಂತೆ ನಕಲಿ ಗಡ್ಡ ಇಟ್ಟಿದ್ದರೂ ಆತ ದಾಳಿ ನಡೆಸಿದ ಮನೆಯಲ್ಲಿದ್ದ ಉದ್ಯಮಿ ಆಕಾಶ್ ಆತನನ್ನು ಗುರುತಿಸಿಯೇ ಬಿಟ್ಟಿದ್ದ. ಆತ ಬೇರೆ ಯಾರೂ ಆಗಿರಲಿಲ್ಲ, ಬದಲಾಗಿ ಆಕಾಶ್ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದವನಾಗಿದ್ದ.

ನಂತರ ಪೊಲೀಸರು ಈ ನಕಲಿ ಸಿಬಿಐ ಅಧಿಕಾರಿಯನ್ನು ಬಂಧಿಸಿ ಆತನಲ್ಲಿದ್ದ ನಕಲಿ ದಾಖಲೆಗಳು, ಗುರುತು ಪತ್ರಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ನ್ಯೂಮಂಡಿ ಪೊಲೀಸ್ ಠಾಣೆಗೆ ಶನಿವಾರ ರಾತ್ರಿ 8 ಗಂಟೆಗೆ ಆಗಮಿಸಿ ತನ್ನ ನಕಲಿ ಸಿಬಿಐ ಗುರುತು ಪತ್ರದ ಜತೆ ಉದ್ಯಮಿ ಆಕಾಶ್ ಗೋಯೆಲ್ ಮನೆಗೆ ದಾಳಿ ನಡೆಸಲು ಅನುಮತಿಯಿರುವ ಸರ್ಚ್ ವಾರಂಟ್ ತೋರಿಸಿದ್ದ. ಆದರೆ  ಉತ್ತರಾಖಂಡದಲ್ಲಿ ಅಕ್ಕಿ ಮಿಲ್ ಹೊಂದಿರುವ ಉದ್ಯಮಿಯ ಮನೆಗೆ ದಾಳಿ ಸಂದರ್ಭ ಆತನ ಶಂಕಾಸ್ಪದ ವರ್ತನೆಯನ್ನು ಗಮನಿಸಿ  ನೆರೆಹೊರೆಯವರಿಗೆ ಆತನ ಮೇಲೆ ಸಂಶಯ ಮೂಡಿತ್ತು.

ಕೂಡಲೇ ಅಲ್ಲಿದ್ದವರೊಬ್ಬರಿಗೆ ಆತನ ದನಿಯ ಗುರುತು ಸಿಕ್ಕಿ ಆತನನ್ನು ಹಿಡಿದೆಳೆದಾಗ ಆತನ ಗಡ್ಡ ಆ ವ್ಯಕ್ತಿ ಕೈಗೆ ಬಂದು ಆತ ಸಿಕ್ಕಿ ಬಿದ್ದಿದ್ದ. ಆರೋಪಿಯನ್ನು ಮುಝಫ್ಫರನಗರ್ ನಿವಾಸಿ ತ್ರಿವಿಂದರ್ ಕುಮಾರ್ ಎಂದು ಗುರುತಿಸಲಾಗಿದೆ ಆತ ಉದ್ಯಮಿಯ ಜೊತೆ ಕೆಲ ಸಮಯ ಹಿಂದೆ ಕೆಲಸ ಮಾಡುತ್ತಿದ್ದ.

ಬಂಧಿತನ ವಿರುದ್ಧ ವಂಚನೆಗಾಗಿ ಸೆಕ್ಷನ್ 420 ಸಹಿತ ಐಪಿಸಿ ವಿವಿಧ ಸೆಕ್ಷನ್ನುಗಳನ್ವಯ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X