Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿಂದಾಲ್ ಗೆ ಭೂಮಿ ಹಸ್ತಾಂತರ ವಿರೋಧಿಸಿ...

ಜಿಂದಾಲ್ ಗೆ ಭೂಮಿ ಹಸ್ತಾಂತರ ವಿರೋಧಿಸಿ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ

ವಾರ್ತಾಭಾರತಿವಾರ್ತಾಭಾರತಿ24 Jun 2019 7:39 PM IST
share
ಜಿಂದಾಲ್ ಗೆ ಭೂಮಿ ಹಸ್ತಾಂತರ ವಿರೋಧಿಸಿ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ

ಬೆಂಗಳೂರು, ಜೂ.24: ಜಿಂದಾಲ್ ಕಂಪನಿಗೆ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಭೂಮಿ ಹಸ್ತಾಂತರಿಸಬಾರದು ಹಾಗೂ ಈ ಕಂಪನಿಗೆ ನೀಡಿರುವ ಕ್ರೀಡಾ ಸಂಸ್ಥೆ ಕಂಠೀರವ ಕ್ರೀಡಾಂಗಣದ ಉಸ್ತುವಾರಿ ಜವಾಬ್ದಾರಿ ಪರವಾನಿಗೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ವಿಧಾನಸೌಧ ಮುತ್ತಿಗೆ ಯತ್ನ ನಡೆಸಿದರು.

ಸೋಮುವಾರ ನಗರದ ಪುರಭವನದಿಂದ ಮೈಸೂರು ಬ್ಯಾಂಕ್ ವೃತ್ತ ಮಾರ್ಗದ ಮೂಲಕ, ಜಯ ಕರ್ನಾಟಕ ಸದಸ್ಯರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ, ವಿಧಾನಸೌಧದ ಕಡೆ ಹೊರಡಲು ಯತ್ನಿಸಿದರು. ಈ ವೇಳೆ, ಪೊಲೀಸರು ತಡೆದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಾಯುಕ್ತರ ವರದಿಯಲ್ಲೂ ಜಿಂದಾಲ್ ಕಂಪನಿ ಹೆಸರು ಉಲ್ಲೇಖವಾಗಿದೆ. ಜೊತೆಗೆ, ಸರಕಾರಿ ಸ್ವಾಮ್ಯದ ಮೈಸೂರು ಮಿನರಲ್ ಕಂಪೆನಿಗೆ ಜಿಂದಾಲ್ ಹಣ ಬಾಕಿ ಉಳಿಸಿಕೊಂಡಿದೆ. ಇಂತಹ ಕಂಪನಿಗೆ 3,666 ಎಕರೆ ಭೂಮಿಯನ್ನು ಯಾವುದೇ ಕಾರಣಕ್ಕೂ ನೀಡಬಾರದು ಎಂದು ಹೇಳಿದರು.

ಈ ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಜಿಂದಾಲ್ ಕಂಪನಿಗೆ ಕೆಲವು ವರ್ಷಗಳ ಅವಧಿಗೆ ಭೂಮಿಯನ್ನು ಕೊಡಲಾಗಿತ್ತು. ಆಗಲೂ ಸಹ ಯಡಿಯೂರಪ್ಪ ಅವರು ಕಿಕ್‌ಬ್ಯಾಕ್ ಪಡೆದು ಜಿಂದಾಲ್ ಗೆ ಭೂಮಿ ನೀಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿತ್ತು. ತದನಂತರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದರು. ಹೀಗಿರುವಾಗ, ಸದ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ, ಸಮ್ಮಿಶ್ರ ಸರಕಾರದ ತೀರ್ಮಾನ ಬಗ್ಗೆ ಮೌನವೇಕೆ ಎಂದು ಪ್ರಶ್ನಿಸಿದರು.

3,666 ಎಕರೆ ಭೂಮಿಯನ್ನು ಅತ್ಯಂತ ಕಡಿಮೆ ಬೆಲೆಗೆ ನೀಡಲು ಮುಂದಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಜಿಂದಾಲ್ ವಂಚಕ ಕಂಪನಿ ಎಂದು ಗೊತ್ತಿದ್ದರೂ ಭೂಮಿ ಪರಭಾರೆ ಮಾಡಲು ಮುಂದಾಗಿರುವದನ್ನು ನೋಡಿದರೆ, ಸಮ್ಮಿಶ್ರ ಸರಕಾರವೂ ಕಿಕ್‌ಬ್ಯಾಕ್ ಪಡೆದಿರುವ ಬಗ್ಗೆ ನಮಗೆ ಅನುಮಾನವಿದೆ ಎಂದು ಆರೋಪಿಸಿದರು.

ಜಿಂದಾಲ್ ಕಂಪೆನಿಗೆ ನೀಡಿರುವ ಕ್ರೀಡಾ ಸಂಸ್ಥೆ ಕಂಠೀರವ ಕ್ರೀಡಾಂಗಣದ ಉಸ್ತುವಾರಿ ಜವಾಬ್ದಾರಿಯ ಪರವಾನಿಗೆಯ ಅವಧಿ ಈಗಾಗಲೇ ಮುಗಿದಿದ್ದು, ಮತ್ತೆ ಪರವಾನಿಗೆಯನ್ನು ನೀಡುವಂತೆ ಸರಕಾರಕ್ಕೆ ಜಿಂದಾಲ್ ಸಂಸ್ಥೆ ಮನವಿ ಸಲ್ಲಿಸಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಈ ಕ್ರೀಡಾಂಗಣದ ಹೊಣೆಯ ಪರವಾನಿಗೆಯನ್ನು ಅವರಿಗೆ ನೀಡಬಾರದು ಎಂದು ಒತ್ತಾಯಿಸಿದರು.

ಅರೆಬೆತ್ತಲೆ; ರಸ್ತೆ ಮೇಲೆ ಉರುಳಾಟ
ಮೈಸೂರು ಬ್ಯಾಂಕ್ ವೃತ್ತದಲ್ಲಿಯೇ ಕುಳಿತ ಜಯ ಕರ್ನಾಟಕ ಸಂಘಟನೆಯ ಸದಸ್ಯರು, ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರು ಮತ್ತು ಪೋಲಿಸರ ನಡುವೆ ವಾಗ್ವಾದ ನಡೆಯಿತು. ಸಂಚಾರ ದಟ್ಟಣೆಯೂ ಅಧಿಕವಾಗಿತ್ತು. ಕೆಲ ಸದಸ್ಯರು ರಸ್ತೆಯಲ್ಲಿ ಉರುಳುತ್ತಾ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X