Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಇಚ್ಛೆಯಿಂದ ಗುರುತಿನ ಪುರಾವೆಯಾಗಿ...

ಸ್ವಇಚ್ಛೆಯಿಂದ ಗುರುತಿನ ಪುರಾವೆಯಾಗಿ ಆಧಾರ್ ಬಳಕೆಗೆ ಅವಕಾಶ ನೀಡುವ ಮಸೂದೆ ಮಂಡನೆ

ವಾರ್ತಾಭಾರತಿವಾರ್ತಾಭಾರತಿ24 Jun 2019 8:19 PM IST
share
ಸ್ವಇಚ್ಛೆಯಿಂದ ಗುರುತಿನ ಪುರಾವೆಯಾಗಿ ಆಧಾರ್ ಬಳಕೆಗೆ ಅವಕಾಶ ನೀಡುವ ಮಸೂದೆ ಮಂಡನೆ

ಹೊಸದಿಲ್ಲಿ,ಜೂ.24: ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ಮೊಬೈಲ್ ಫೋನ್ ಸಂಪರ್ಕಗಳನ್ನು ಪಡೆದುಕೊಳ್ಳಲು ಸ್ವಇಚ್ಛೆಯಿಂದ ಆಧಾರ್ ಅನ್ನು ಗುರುತಿನ ಪುರಾವೆಯಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಮಸೂದೆಯನ್ನು ಸರಕಾರವು ಸೋಮವಾರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ಮಂಡಿಸಿದೆ.

 ಮಸೂದೆಯು 2016ರ ಆಧಾರ ಕಾಯ್ದೆಯನ್ನು ತಿದ್ದುಪಡಿಗೊಳಿಸಲಿದೆ ಮತ್ತು ಮಾರ್ಚ್‌ನಲ್ಲಿ ಹೊರಡಿಸಿದ್ದ ಅಧ್ಯಾದೇಶದ ಬದಲಾಗಿ ಜಾರಿಗೆ ಬರಲಿದೆ. ನಿಯಮಗಳ ಉಲ್ಲಂಘನೆಗಳಿಗೆ ಕಠಿಣ ದಂಡನೆಗಳನ್ನೂ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಮಸೂದೆಯನ್ನು ವಿರೋಧಿಸಿದ ಆರ್‌ಎಸ್‌ಪಿ ಸದಸ್ಯ ಎನ್.ಕೆ.ಪ್ರೇಮಚಂದ್ರನ್ ಅವರು,ಇದು ಆಧಾರ್ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಗಂಭೀರ ಉಲ್ಲಂಘನೆಯಾಗಿದೆ. ಇದರಿಂದ ಖಾಸಗಿ ಸಂಸ್ಥೆಗಳಿಗೆ ಆಧಾರ ಮಾಹಿತಿಗಳು ದೊರೆಯುತ್ತವೆ ಮತ್ತು ಮೂಲಭೂತ ಹಕ್ಕುಗಳನ್ನು,ವಿಶೇಷವಾಗಿ ಖಾಸಗಿತನದ ಹಕ್ಕನ್ನು ಉಲ್ಲಂಘಿಸಬಹುದು ಎಂದು ಪ್ರತಿಪಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಅವರು,ಆಧಾರ್ ಸಿಂಧುವಾಗಿರುವ ಕಾನೂನು ಆಗಿದ್ದು ರಾಷ್ಟ್ರೀಯ ಹಿತಾಸಕ್ತಿಯನ್ನು ಅದು ಒಳಗೊಂಡಿದೆ ಮತ್ತು ಖಾಸಗಿತನವನ್ನು ಉಲ್ಲಂಘಿಸುವುದಿಲ್ಲ. ಮಸೂದೆಯು ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿದೆ ಮತ್ತು ಭಾರತದ ಜನರು ಆಧಾರ್ ಅನ್ನು ಒಪ್ಪಿಕೊಂಡಿದ್ದಾರೆ ಎಂದರು.

60 ಕೋಟಿಗೂ ಅಧಿಕ ಜನರು ಆಧಾರ್‌ನ ಮೂಲಕ ಮೊಬೈಲ್ ಸಿಮ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಮತ್ತು ಈಗ ಅದು ಕಡ್ಡಾಯವಲ್ಲ ಎಂದೂ ಅವರು ತಿಳಿಸಿದರು.

ಮಗುವು ತನಗೆ 18ನೇ ವರ್ಷ ಪ್ರಾಯವಾದಾಗ ಬಯೊಮೆಟ್ರಿಕ್ ಐಡಿ ಕಾರ್ಯಕ್ರಮದಿಂದ ಹೊರಗೆ ಬರುವ ಆಯ್ಕೆಯನ್ನು ನೀಡಲು ಉದ್ದೇಶಿಸಿರುವ ಮಸೂದೆಯು,ಆಧಾರ್ ಬಳಕೆಯ ನಿಯಮಗಳು ಮತ್ತು ಖಾಸಗಿತನದ ಉಲ್ಲಂಘನೆಗಾಗಿ ಕಠಿಣ ದಂಡನೆಗಳನ್ನು ಪ್ರಸ್ತಾಪಿಸಿದೆ. ಆಧಾರ್‌ನ್ನು ಜನಸ್ನೇಹಿಯಾಗಿಸುವುದು ಮಸೂದೆಯ ಉದ್ದೇಶವಾಗಿದೆ.

ಖಾಸಗಿ ಸಂಸ್ಥೆಗಳಿಂದ ಬಯೊಮೆಟ್ರಿಕ್ ಐಡೆಂಟಿಫೈಯರ್‌ನ ಬಳಕೆಗೆ ಸಂಬಂಧಿಸಿದ ಆಧಾರ ಕಾಯ್ದೆಯ ಕಲಂ 57ನ್ನು ಕೈಬಿಡಲೂ ಮಸೂದೆಯು ಉದ್ದೇಶಿಸಿದೆ.

ಆಧಾರ್ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಂದು ಕೋ.ರೂ.ವರೆಗೆ ದಂಡ ಮತ್ತು ನಿರಂತರ ಅನನುಸರಣೆ ಪ್ರಕರಣದಲ್ಲಿ ಪ್ರತಿದಿನ 10 ಲ.ರೂ.ವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಂಸ್ಥೆಗಳಿಂದ ಆಧಾರ್ ಮಾಹಿತಿಯ ಅನಧಿಕೃತ ಬಳಕೆಗಾಗಿ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ಮತ್ತು 10,000 ರೂ.ವರೆಗೆ ಅಥವಾ ಕಂಪನಿಯಾಗಿದ್ದರೆ ಒಂದು ಲ.ರೂ.ವರೆಗೆ ದಂಡವನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಕೇಂದ್ರ ಮಾಹಿತಿ ಕೋಶಕ್ಕೆ ಕನ್ನ ಹಾಕಿದರೆ ದಂಡನೆಯನ್ನು ಈಗಿನ ಮೂರು ವರ್ಷಗಳ ಜೈಲುಶಿಕ್ಷೆಯಿಂದ 10 ವರ್ಷಗಳಿಗೆ ವಿಸ್ತರಿಸಲು ಮಸೂದೆಯು ಉದ್ದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X