Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪತಿಯ ಆತ್ಮಹತ್ಯೆಯಿಂದ ಕಂಗೆಡದ ರಕ್ಷಾ...

ಪತಿಯ ಆತ್ಮಹತ್ಯೆಯಿಂದ ಕಂಗೆಡದ ರಕ್ಷಾ ಖಡ್ಸೆ ಎರಡನೇ ಬಾರಿ ಸಂಸದೆ

‘ಯುವ ಇಂಡಿಯಾ’ದ ಸಂಸದರು

ವಾರ್ತಾಭಾರತಿವಾರ್ತಾಭಾರತಿ24 Jun 2019 8:36 PM IST
share
ಪತಿಯ ಆತ್ಮಹತ್ಯೆಯಿಂದ ಕಂಗೆಡದ ರಕ್ಷಾ ಖಡ್ಸೆ ಎರಡನೇ ಬಾರಿ ಸಂಸದೆ

ವಿವಾಹವಾಗಿ ಕೆಲ ವರ್ಷಗಳಲ್ಲೇ ಪತಿಯನ್ನು ಕಳೆದುಕೊಂಡರೂ ಕುಗ್ಗದೆ ತನ್ನ ಮಾವನ ನೆರವಿನಿಂದ ರಾಜಕೀಯ ಕ್ಷೇತ್ರಕ್ಕಿಳಿದು, ಜನರ ವಿಶ್ವಾಸ ಗಳಿಸಿ 2ನೆ ಬಾರಿಗೆ ಸಂಸತ್ ಪ್ರವೇಶಿಸಿದವರು ರಕ್ಷಾ ಖಡ್ಸೆ. ಇವರು ಬಿಜೆಪಿಯ ಪ್ರಭಾವಿ ನಾಯಕ ಏಕನಾಥ್ ಖಡ್ಸೆಯವರ ಸೊಸೆ.

2013ರಲ್ಲಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದರು ಏಕನಾಥ್ ಖಡ್ಸೆ. ಜಲಗಾಂವ್ ಜಿಲ್ಲಾ ಪರಿಷತ್ ನ ಸದಸ್ಯರಾಗಿದ್ದ ಏಕನಾಥ್ ಖಡ್ಸೆಯವರ ಪುತ್ರ ನಿಖಿಲ್ ಖಡ್ಸೆ 2013ರಲ್ಲಿ 16 ಮತಗಳ ಅಂತರದಲ್ಲಿ ಕಾಂಗ್ರೆಸ್ ನ ಮನೀಶ್ ಜೈನ್ ವಿರುದ್ಧ ಸೋಲನುಭವಿಸಿದರು. ಸೋಲಿನ ಆಘಾತದಿಂದ ತತ್ತರಿಸಿದ ನಿಖಿಲ್ 2013ರ ಮೇ 2ರಂದು ತನ್ನ ರಿವಾಲ್ವರ್ ನಿಂದ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡರು.

ಅಂದು ರಕ್ಷಾ ಖಡ್ಸೆಯವರಿಗೆ 26 ವರ್ಷ ವಯಸ್ಸಾಗಿತ್ತು. ಈ ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಸಹಿತ ಇಬ್ಬರು ಮಕ್ಕಳಿದ್ದರು. ಸಣ್ಣ ವಯಸ್ಸಿನಲ್ಲೇ ಪತಿಯನ್ನು ಕಳೆದುಕೊಂಡು, ಸಮಾಜದಲ್ಲಿ ವಿಧವೆಯಾಗಿ ಬದುಕಬೇಕಾದ ಅನಿವಾರ್ಯತೆ ಎದುರಾದಾಗ ಕುಗ್ಗದ ರಕ್ಷಾ ಖಡ್ಸೆ ಸಕ್ರಿಯ ರಾಜಕಾರಣಕ್ಕಿಳಿದರು. ಅದಕ್ಕೂ ಮೊದಲು ಅವರು 2010ರಿಂದ 2012ರವರೆಗೆ ಕೊಥಾಲಿ ಗ್ರಾಪಂನ ಸರಪಂಚರಾಗಿ, 2012ರಿಂದ 2014ರವರೆಗೆ ಜಲಗಾಂವ್ ಜಿಲ್ಲಾ ಪರಿಷತ್ ಸದಸ್ಯೆಯಾಗಿ ಕಾರ್ಯ ನಿರ್ವಹಿಸಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಇವರು ಕಾಂಗ್ರೆಸ್ ನ ಮನೀಶ್ ಜೈನ್ ರನ್ನು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಸಂಸದೆಯಾದರು. 2019ರ ಲೋಕಸಭಾ ಚುನಾವಣೆಯಲ್ಲಿ ರೇವರ್ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ನ ಡಾ.ಉಲ್ಲಾಸ್ ಪಾಟಿಲ್ ರನ್ನು 3 ಲಕ್ಷ ಮತಗಳ ಅಂತರದಲ್ಲಿ ಮಣಿಸಿ ಮತ್ತೊಮ್ಮೆ ಸಂಸತ್ ಪ್ರವೇಶಿಸಿದ್ದಾರೆ.

1987ರಲ್ಲಿ ಜನಿಸಿದ ಇವರು ಬಿಎಸ್ಸಿ (ಕಂಪ್ಯೂಟರ್ ಸೈನ್ಸ್ ) ಪದವೀಧರರು. ಇವರ ತಂದೆ ರೈತನಾಗಿದ್ದು, ಶಿಕ್ಷಣದ ಸಂದರ್ಭ ಸರಕಾರಿ ಹಾಸ್ಟೆಲ್ ಗಳಲ್ಲಿ ಉಳಿದುಕೊಂಡಿದ್ದರು. ಬಡ ಕುಟುಂಬವೊಂದರ ಹೆಣ್ಣುಮಗಳು ಪ್ರಸಿದ್ಧ ರಾಜಕಾರಣಿಯ ಮನೆಯ ಸೊಸೆಯಾದರು. ಆದರೆ ಮದುವೆಯಾದ ಕೆಲ ವರ್ಷಗಳಲ್ಲೇ ಪತಿಯನ್ನು ಕಳೆದುಕೊಂಡರೂ, ಧೃತಿಗೆಡದೆ ರಾಜಕೀಯಕ್ಕೆ ಧುಮುಕಿ ಇಂದು ಸಂಸತ್ ಪ್ರವೇಶಿಸಿದ್ದಾರೆ. ತನ್ನ ಪತಿಯನ್ನು ಮಣಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯನ್ನೂ ಮಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X