Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೂಮಿ ನೀಡದಿದ್ದರೆ ರಾಜ್ಯಕ್ಕೆ...

ಭೂಮಿ ನೀಡದಿದ್ದರೆ ರಾಜ್ಯಕ್ಕೆ ಹೂಡಿಕೆದಾರರು ಬರುವುದಿಲ್ಲ: ಸಿಎಂ ಕುಮಾರಸ್ವಾಮಿ

ಎಫ್.ಕೆ.ಸಿ.ಸಿ.ಐ ವತಿಯಿಂದ ವಾಣಿಜ್ಯ ಸ್ಪಂದನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Jun 2019 10:27 PM IST
share
ಭೂಮಿ ನೀಡದಿದ್ದರೆ ರಾಜ್ಯಕ್ಕೆ ಹೂಡಿಕೆದಾರರು ಬರುವುದಿಲ್ಲ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.24: ಜಿಂದಾಲ್ ಕಂಪನಿಗೆ ಒಪ್ಪಂದದ ಪ್ರಕಾರ ಭೂಮಿ ನೀಡಲಾಗುತ್ತಿದೆ. ಇದೀಗ ಭೂಮಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಹೂಡಿಕೆದಾರರು ಬರುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಸೋಮವಾರ ನಗರದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಮಹಾಸಂಸ್ಥೆ ಏರ್ಪಡಿಸಿದ್ದ ವಾಣಿಜ್ಯ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ ಹಿಂದಿನ ಒಪ್ಪಂದದಂತೆ ಭೂಮಿ ಕೊಡದಿದ್ದರೆ ರಾಜ್ಯದಲ್ಲಿ ಬಂಡವಾಳ ಹೂಡುವವರಿಗೆ ಯಾವ ಸಂದೇಶ ನೀಡಿದಂತಾಗುತ್ತದೆ. ಹಿಂದಿನ ಸರಕಾರ ಲೀಸ್ ಕಂ ಸೇಲ್ ಒಪ್ಪಂದ ಮಾಡಿಕೊಂಡಿದ್ದು, ಅದರಂತೆ ಭೂಮಿ ನೀಡಲಾಗುತ್ತಿದೆ ಎಂದು ಹೇಳಿದರು.

ಹಿಂದಿನ ಸರಕಾರದ ಅವಧಿಯಲ್ಲಿ ಜಿಂದಾಲ್ ಜತೆ ಒಪ್ಪಂದ ಮಾಡಿಕೊಂಡಿದ್ದ ಸಂದರ್ಭದಲ್ಲಿ ಭೂಮಿ ಬೆಲೆ ಕಡಿಮೆಯಿತ್ತು. ಅವತ್ತು ಭೋಗ್ಯ ಹಾಗೂ ಮಾರಾಟಕ್ಕೆ ಒಪ್ಪಂದ ಮಾಡಿಕೊಂಡಿದ್ದೆವು. ಇದೀಗ ಅದರ ಭೋಗ್ಯದ ಅವಧಿ ಮುಗಿದಿದ್ದರಿಂದ ಮಾರಾಟ ಮಾಡಲೇಬೇಕಿದೆ. ಮಾಜಿ ಸಿಎಂ ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಮಾಡಿಕೊಂಡಿದ್ದ ಒಪ್ಪಂದ ಇದಾಗಿದೆ. ಇದೀಗ ಅವರೇ ಉತ್ತರಿಸಬೇಕು ಎಂದು ತಿಳಿಸಿದರು.

ನಾನು ಕಿಕ್‌ಬ್ಯಾಕ್ ಪಡೆದಿದ್ದೇನೆ ಎಂಬ ಅಸಂಬದ್ಧ ಹೇಳಿಕೆ ನೀಡುವುದು ಸರಿಯಲ್ಲ. ಜಿಂದಾಲ್‌ಗೆ ಭೂಮಿ ನೀಡುವ ಸಂಬಂಧ ಉಪ ಸಮಿತಿ ಮಾಡಲು ತಿಳಿಸಿದ್ದು, ಅದರಲ್ಲಿ ಎಚ್.ಕೆ.ಪಾಟೀಲ್ ಮತ್ತು ಯಡಿಯೂರಪ್ಪ ಅವರನ್ನು ಸೇರಿಸಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೇಂದ್ರದ ಜೊತೆ ಉತ್ತಮ ಸಂಬಂಧ: ಕೇಂದ್ರ ಸರಕಾರದ ಜೊತೆ ಸಂಘರ್ಷಕ್ಕೆ ಹೋಗಿಲ್ಲ. ಒಮ್ಮೆ ಹೊಸದಿಲ್ಲಿಗೆ ಹೋದರೆ, 5-6 ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತಿದ್ದೇನೆ. ಇತ್ತೀಚಿಗೆ ನೀತಿ ಆಯೋಗ ಸಭೆಯಲ್ಲಿ ಭಾಗಿಯಾದಾಗ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯ ಸರಕಾರಗಳು ತಮ್ಮ ಗ್ರಾಮ ಪಂಚಾಯತ್ ಗಳಲ್ಲಿ ಜಿಡಿಪಿ ಬೆಳವಣಿಗೆಗೆ ಶ್ರಮಿಸಬೇಕು ಎಂದರೇ ಹೊರತು ತಮ್ಮ ಪಾತ್ರದ ಬಗ್ಗೆ ಸ್ಪಷ್ಟಪಡಿಸಲಿಲ್ಲ ಎಂದು ಆರೋಪಿಸಿದರು.

ಇಂಗ್ಲಿಷ್ ಕಲಿಕೆಗೆ ಒತ್ತು: ಇವತ್ತಿನ ದಿನಗಳಲ್ಲಿ ಇಂಗ್ಲಿಷ್ ಇಲ್ಲವೆಂದರೆ ಬದುಕೇ ಇಲ್ಲ. ಕನ್ನಡ ಮಾಧ್ಯಮ ವಿದ್ಯಾರ್ಥಿಗೆ ಬಹಳ ಚೆನ್ನಾಗಿ ವಿಷಯ ಗೊತ್ತಿರುತ್ತದೆ. ಆದರೆ, ಅದನ್ನು ಪ್ರಸ್ತತಪಡಿಸಲು ತೊಂದರೆ ಆಗುತ್ತಿದೆ. ಇದನ್ನು ಸರಿಪಡಿಸಲು ರಾಜ್ಯದಲ್ಲಿ ಪ್ರಾಥಮಿಕವಾಗಿ 1 ಸಾವಿರ ಇಂಗ್ಲಿಷ್ ಶಾಲೆಗಳನ್ನು ಆರಂಭಿಸಲಾಗಿದೆ. ಕನ್ನಡ ಉಳಿವಿನ ಜೊತೆ ಇಂಗ್ಲಿಷ್‌ಗೆ ಒತ್ತು ನೀಡಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಮಾತನಾಡಿ, ಜಿಂದಾಲ್‌ಗೆ ಭೂಮಿ ನೀಡುವ ಸಂಬಂಧ ಸೃಷ್ಟಿಯಾದ ಸಮಸ್ಯೆಯನ್ನು ಮೈತ್ರಿ ಸರಕಾರವೇ ಬಗೆಹರಿಸಲಿ. ಮುಖ್ಯಮಂತ್ರಿ 3 ತಿಂಗಳಿಗೊಮ್ಮೆಯಾದರೂ, ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ಸದಸ್ಯರನ್ನು ಕರೆದು ಚರ್ಚಿಸಬೇಕು. ಬಂಡವಾಳ ಹೂಡಿಕೆದಾರರು, ಸಣ್ಣ ಕೈಗಾರಿಕೆದಾರರಿಗೆ ಉತ್ತೇಜನ ನೀಡಬೇಕು ಎಂದು ನುಡಿದರು.

ನಾನು ಹಿಂದಿನ ಸರಕಾರದ ಅವಧಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದೆ. ಈಗ ಅದನ್ನು ಮುಂದುವರಿಸಿದ್ದೇನೆ. ಆಗ ವಿರೋಧ ಮಾಡದವರು ಇಂದು ವಿರೋಧ ಮಾಡುತ್ತಿದ್ದಾರೆ. ಯಾದಗಿರಿಯ ಶಾಲೆಯಲ್ಲಿ ಶೌಚಾಲಯ ನಿರ್ಮಿಸಿರುವುದನ್ನೇ ದೊಡ್ಡ ತಪ್ಪೆಂದು ಬಿಂಬಿಸಿದ್ದಾರೆ. ಗ್ರಾಮ ವಾಸ್ತವ್ಯ ಮುಗಿದ ನಂತರ ಅಲ್ಲಿನ ಶಾಲಾ ಮಕ್ಕಳಿಗೆ ಶೌಚಾಲಯ ಉಪಯೋಗವಾಗಿದೆ. ಟೀಕಿಸುವ ವಿರೋಧ ಪಕ್ಷದ ನಾಯಕರು ಗ್ರಾಮ ವಾಸ್ತವ್ಯ ಮಾಡಲಿ.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ರಾಜ್ಯದಲ್ಲಿ ಸತತವಾಗಿ ಬರಗಾಲ ಆವರಿಸಿಕೊಂಡಿದೆ. ರೈತರು ಬೆಳೆಯುತ್ತಿರುವ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದು, ಮಾಡಿದ ಸಾಲ ತೀರಿಸಲಾಗದ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರ ಹೊರೆ ಕಡಿಮೆ ಮಾಡಲು ಸಾಲ ಮನ್ನಾ ಮಾಡಲಾಗಿದೆ. ಅಭಿವೃದ್ಧಿಗೆ ಹಿನ್ನಡೆಯಾಗದಂತೆ 2 ಬಜೆಟ್‌ನಲ್ಲಿ 25 ಸಾವಿರ ಕೋಟಿ ರೂ. ಸಾಲಮನ್ನಾಕ್ಕಾಗಿ ಬಿಡುಗಡೆ ಮಾಡಿದ್ದು, ಆರ್ಥಿಕ ಶಿಸ್ತು ಕಾಪಾಡಿಕೊಳ್ಳಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X