Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಆರೋಪಿ ಗುರ್ಮೀತ್ ಸಿಂಗ್...

ಅತ್ಯಾಚಾರ ಆರೋಪಿ ಗುರ್ಮೀತ್ ಸಿಂಗ್ ಪೆರೋಲ್ ಅರ್ಜಿ ಬೆಂಬಲಿಸುತ್ತಿರುವ ಹರ್ಯಾಣದ ಬಿಜೆಪಿ ಸರಕಾರ

ಈಗಾಗಲೇ ಎಚ್ಚರಿಕೆ ನೀಡಿದೆ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Jun 2019 1:06 PM IST
share
ಅತ್ಯಾಚಾರ ಆರೋಪಿ ಗುರ್ಮೀತ್ ಸಿಂಗ್ ಪೆರೋಲ್ ಅರ್ಜಿ ಬೆಂಬಲಿಸುತ್ತಿರುವ ಹರ್ಯಾಣದ ಬಿಜೆಪಿ ಸರಕಾರ

ಚಂಡೀಗಢ್, ಜೂ.25: ಅತ್ಯಾಚಾರ ಆರೋಪಿ ಸ್ವಘೋಷಿತ ದೇವ ಮಾನವ ಗುರ್ಮೀತ್ ಸಿಂಗ್ ನ ಪೆರೋಲ್ ಅರ್ಜಿಯನ್ನು ಮೇ ತಿಂಗಳಲ್ಲಿ ಹರ್ಯಾಣ ಹೈಕೋರ್ಟ್  ತಿರಸ್ಕರಿಸಿದ್ದರೂ ಆತನ ಸಾಕು ಪುತ್ರಿಯ ವಿವಾಹ ಸಮಾರಂಭದಲ್ಲಿ ಆತನಿಗೆ ಭಾಗವಹಿಸಲು ಅನುವು ಮಾಡಿಕೊಡಲು ಪೆರೋಲ್ ದೊರಕಿಸಿ ಕೊಡಲು ಹರ್ಯಾಣ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

ಆತನನ್ನು ಬಿಡುಗಡೆಗೊಳಿಸಿದಲ್ಲಿ 2017ರ ಕುಖ್ಯಾತ ಘಟನೆಯಂತೆ ಕಾನೂನು ಸುವ್ಯವಸ್ಥೆ ಹದಗೆಡಬಹುದು ಎಂದು ಕೋರ್ಟ್ ಈ ಹಿಂದೆ ಹೇಳಿತ್ತಲ್ಲದೆ, ಆತನನ್ನು ಪೆರೋಲ್ ಮೆಲೆ ಬಿಡುಗಡೆಗೊಳಿಸಿ ನಂತರ ಮರು ಬಂಧನ ಕಷ್ಟವಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು. ಅಪ್ರಾಪ್ತರ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷಗಳ ಕಠಿಣ ಸಜೆಗೆ ಡೇರಾ ಸಚ್ಚಾ ಸೌದಾ ಮುಖ್ಯಸ್ಥನೂ ಆಗಿರುವ ಗುರ್ಮೀತ್ ಗುರಿಯಾಗಿದ್ದಾನೆ.

“ಪ್ರತಿಯೊಬ್ಬ ಅಪರಾಧಿಗೂ ಒಂದು ವರ್ಷದ ನಂತರ ಪೆರೋಲ್ ಗೆ ಮನವಿ ಸಲ್ಲಿಸುವ ಹಕ್ಕಿದೆ. ಆತ ಮಾಡಿದ ಮನವಿಯಂತೆ ಸಿರ್ಸಾ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ” ಎಂದು ಹರ್ಯಾಣ ಬಂಧೀಖಾನೆ ಸಚಿವ ಕೆ ಎಲ್ ಪನ್ವರ್ ಹೇಳಿದ್ದಾರೆ. “ಜಿಲ್ಲಾಡಳಿತದ ವರದಿಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಚುನಾವಣೆಗೂ ಸಂಬಂಧ ಕಲ್ಪಿಸಬೇಡಿ. ಅಂತಹ ಉದ್ದೇಶವಿದ್ದರೆ ಲೋಕಸಭಾ ಚುನಾವಣೆಗೆ ಮುಂಚಿತವಾಗಿಯೇ ಆತನ ಬಿಡುಗಡೆ ಮಾಡುತ್ತಿದ್ದೆವು. ಸರಕಾರಕ್ಕೆ ಅಂತಹ ಉದ್ದೇಶವಿಲ್ಲ'' ಎಂದು ಅವರು ಹೇಳಿದರು.

ಹರ್ಯಾಣದ ಇಬ್ಬರು ಇತರ ಸಚಿವರುಗಳಾದ ಕೃಷ್ಣ ಪವಾರ್ ಹಾಗು ಅನಿಲ್ ವಿಜ್ ಕೂಡ ಗುರ್ಮೀತ್ ನ  ಪೆರೋಲ್ ಮನವಿಯನ್ನು ಸಮರ್ಥಿಸಿದ್ದಾರೆ. ಆತ ಜೈಲಿನಲ್ಲಿ ಉತ್ತಮ ನಡತೆ ತೋರಿರುವುದರಿಂದ ಆತ ಕೂಡ ಇತರ ಕೈದಿಗಳಂತೆ ಪೆರೋಲ್ ಗೆ ಅರ್ಹ ಎಂದು ಅವರು ಹೇಳಿದ್ದಾರೆ.

ಆದರೆ ಆಗಸ್ಟ್ 2017ರಲ್ಲಿ 30 ಜನರ ಬಲಿ ಪಡೆದ ಪಂಚಕುಲಾ ಘಟನೆಯಂತೆ ತನ್ನ ಬೆಂಬಲಿಗ ಪಡೆಯನ್ನು ಬಹಿರಂಗವಾಗಿ ದುರುಪಯೋಗಪಡಿಸಿರುವ ಇತಿಹಾಸವಿರುವ ಗುರ್ಮೀತ್  ಕುರಿತಂತೆ ಹೈಕೋರ್ಟ್ ಅಭಿಪ್ರಾಯವನ್ನು ನಿರ್ಲಕ್ಷ್ಯಿಸಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗಬಹುದೆಂಬ ಭಯವಿದೆ. ಹರ್ಯಾಣದಲ್ಲಿ ಮುಂದಿನ ನಾಲ್ಕು  ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಗುರ್ಮೀತ್ ಗೆ ರಾಜ್ಯಾದ್ಯಂತ ಅಸಂಖ್ಯಾತ ಬೆಂಬಲಿಗರಿದ್ದಾರೆ. ಕಳೆದ ಚುನಾವಣೆಯಲ್ಲಿ ಮನೋಹರ್ ಲಾಲ್  ಖಟ್ಟರ್ ಸರಕಾರ ಅಧಿಕಾರಕ್ಕೆ ಬರಲು ಆತನ ಬೆಂಬಲ ಬಿಜೆಪಿಗೆ ಬಹಳಷ್ಟು ದೊರಕಿತ್ತು ಎಂಬುದು ಉಲ್ಲೇಖಾರ್ಹ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X