Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪಶ್ಚಿಮ ಬಾಂಗ್ಲಾದೇಶ’ ಸೃಷ್ಟಿಸಲು ಮಮತಾ...

‘ಪಶ್ಚಿಮ ಬಾಂಗ್ಲಾದೇಶ’ ಸೃಷ್ಟಿಸಲು ಮಮತಾ ಸರಕಾರದ ಯತ್ನ: ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ25 Jun 2019 8:07 PM IST
share
‘ಪಶ್ಚಿಮ ಬಾಂಗ್ಲಾದೇಶ’ ಸೃಷ್ಟಿಸಲು ಮಮತಾ ಸರಕಾರದ ಯತ್ನ: ಬಿಜೆಪಿ

ಹೊಸದಿಲ್ಲಿ,ಜೂ.25: ಪಶ್ಚಿಮ ಬಂಗಾಳದಲ್ಲಿ ನೆಲೆಸಲು ಬಾಂಗ್ಲಾದೇಶಿ ವಲಸಿಗರಿಗೆ ಅವಕಾಶ ನೀಡುವ ಮೂಲಕ ಮಮತಾ ಬ್ಯಾನರ್ಜಿ ಸರಕಾರವು ‘ಪಶ್ಚಿಮ ಬಾಂಗ್ಲಾದೇಶ ’ವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಮಂಗಳವಾರ ಆರೋಪಿಸಿದೆ.

ಆದರೆ,ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ಪೌರತ್ವ ತಿದ್ದುಪಡಿ ಮಸೂದೆ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡಿವೆ ಎಂದು ತೃಣಮೂಲ ಪಕ್ಷವು ಹೇಳಿದೆ.

 ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ನಿರ್ಣಯದ ಮೇಲೆ ಮಾತನಾಡಿದ ಪ.ಬಂಗಾಳದ ಬಿಜೆಪಿ ಸದಸ್ಯ ದಿಲೀಪ ಘೋಷ್ ಅವರು,ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ ಹಾಗೂ ಪ್ರಜಾಪ್ರಭುತ್ವವು ಬಿಕ್ಕಟ್ಟಿನಲ್ಲಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಿಯಾಗಲು ಕಾತರಿಸುತ್ತಿದ್ದಾರೆ. ಅವರು ಬಂಗಾಳ ಮತ್ತು ಬಾಂಗ್ಲಾದೇಶವನ್ನು ಒಂದುಗೂಡಿಸಲು ಹಾಗೂ ಪಶ್ಚಿಮ ಬಾಂಗ್ಲಾದೇಶವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಭಾರತದಿಂದ ಬಂಗಾಳವನ್ನು ಪ್ರತ್ಯೇಕಿಸಲು ಸಂಚು ನಡೆಯುತ್ತಿದೆ ಎಂದು ಹೇಳಿದರು.

ನ್ಯಾಯ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಬೋಧಿಸಿದ್ದು ಶ್ರೀರಾಮ ಮತ್ತು ಅವು ರಾಜ್ಯದಲ್ಲಿ ಅಗತ್ಯವಾಗಿವೆ. ಹೀಗಾಗಿ ಬಿಜೆಪಿಯ ‘ಜೈ ಶ್ರೀರಾಮ ’ಘೋಷಣೆಯಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಮೊದಲ ಬಾರಿಗೆ ಸಂಸದರಾಗಿರುವ ಘೋಷ್ ಹೇಳಿದರು.

‘ಜೈ ಬಾಂಗ್ಲಾ’ ಬಾಂಗ್ಲಾದೇಶದಿಂದ ಆಮದಾಗಿರುವ ಘೋಷಣೆಯಾಗಿದ್ದರೆ,‘ಜೈ ಶ್ರೀರಾಮ’ ನಮ್ಮದೇ ಘೋಷಣೆಯಾಗಿದೆ ಎಂದರು.

ಸಾರ್ವತ್ರಿಕ ಚುನಾವಣೆಗಳಲ್ಲಿ ಹಿಂಸಾಚಾರಗಳು ನಡೆದಿದ್ದ ಏಕೈಕ ರಾಜ್ಯ ಪಶ್ಚಿಮ ಬಂಗಾಳವಾಗಿದೆ. ರಾಜ್ಯದಲ್ಲಿ ಇರಬೇಕೆಂದರೆ ಬಂಗಾಳಿಯನ್ನು ಕಲಿಯಬೇಕು ಎಂದು ತೃಣಮೂಲ ಹೇಳುತ್ತಿದೆ. ಇದು ನಾವೀಗ ನೋಡುತ್ತಿರುವ ‘ಸೋನಾರ್ ಬಾಂಗ್ಲಾ’ ಎಂದರು.

ಸದನದಲ್ಲಿ ಮಾತನಾಡಿದ ತೃಣಮೂಲ ಸದಸ್ಯೆ ಮಹುವಾ ಮೊಯಿತ್ರಾ ಅವರು,ಬಿಜೆಪಿಯು 2014ರಿಂದಲೂ ದೇಶದಲ್ಲಿ ಭೀತಿಯನ್ನು ಹರಡುತ್ತಿದೆ ಮತ್ತು ಅಯೋಧ್ಯೆಯ ವಿವಾದಿತ ತಾಣವನ್ನು ರಾಜಕೀಯಗೊಳಿಸುತ್ತಿದೆ. ಅದು ಧರ್ಮವನ್ನು ಪೌರತ್ವದೊಂದಿಗೆ ಬೆರೆಸುತ್ತಿದೆ. ಎನ್‌ಆರ್‌ಸಿ ಮತ್ತು ಪೌರತ್ವ ತಿದ್ದುಪಡಿ ಮಸೂದೆ ಮೂಲಕ ಏಕೈಕ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ತಮ್ಮ ಸಿದ್ಧಾಂತಗಳನ್ನು ಬೋಧಿಸಲು ಪಠ್ಯಪುಸ್ತಕಗಳನ್ನೂ ಬದಲಿಸಲಾಗುತ್ತಿದೆ ಎಂದರು.

ಬಿಜೆಪಿಯಡಿ ದೇಶದಲ್ಲಿ ಚುನಾವಣಾ ವ್ಯವಸ್ಥೆಯು ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಮತ್ತು ಅಪಾಯಕಾರಿ ಫ್ಯಾಸಿಸ್ಟ್‌ವಾದವು ತಲೆಯೆತ್ತುತ್ತಿದೆ ಎಂದೂ ಅವರು ಆಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X