Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಅರ್ಧಕ್ಕೂ ಹೆಚ್ಚು ಸಂಪತ್ತು...

ದೇಶದ ಅರ್ಧಕ್ಕೂ ಹೆಚ್ಚು ಸಂಪತ್ತು ಶೇ.1ರಷ್ಟಿರುವ ಅತ್ಯಂತ ಶ್ರೀಮಂತರ ಕೈಯಲ್ಲಿ!

ವಾರ್ತಾಭಾರತಿವಾರ್ತಾಭಾರತಿ25 Jun 2019 9:57 PM IST
share
ದೇಶದ ಅರ್ಧಕ್ಕೂ ಹೆಚ್ಚು ಸಂಪತ್ತು ಶೇ.1ರಷ್ಟಿರುವ ಅತ್ಯಂತ ಶ್ರೀಮಂತರ ಕೈಯಲ್ಲಿ!

ಹೊಸದಿಲ್ಲಿ, ಜೂ.25: ದೇಶದ ಅರ್ಧಕ್ಕೂ ಹೆಚ್ಚು ಸಂಪತ್ತು ಶೇ.1 ಅತ್ಯಂತ ಶ್ರೀಮಂತರ ಕೈಯಲ್ಲಿದೆ. ಶೇ. 1 ಭಾರತೀಯರು ದೇಶದ ಒಟ್ಟು ಸಂಪತ್ತಿನ ಶೇ.58.4 ಹೊಂದಿದ್ದಾರೆ ಮತ್ತು ಸಂಪತ್ತಿನ ಈ ಅಸಮಾನತೆಯು 2000 ಮತ್ತು 2017ರ ಮಧ್ಯೆ ಆರು ಪಟ್ಟು ಹೆಚ್ಚಾಗಿದೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಪ್ರೆಸ್‌ನ ನೂತನ ವರದಿ ತಿಳಿಸಿದೆ.

ಈ ವರದಿಯನ್ನು ಮಾಜಿ ಪ್ರಧಾನಿ ಡಾ.ಮನ್‌ಮೋಹನ್ ಸಿಂಗ್ ಅವರು ಬಿಡುಗಡೆ ಮಾಡಿದ್ದಾರೆ ಹೆಚ್ಚುತ್ತಿರುವ ಅಸಮಾನತೆ ಹೆಸರಿನ ವರದಿಯನ್ನು ಸಾಮಾಜಿಕ ಅಭಿವೃದ್ಧಿ ಮಂಡಳಿ (ಸಿಎಸ್‌ಡಿ) ಸಂಶೋಧನಾ ಸಂಸ್ಥೆ ತಯಾರಿಸಿದೆ. ಶೇ.10 ಅತ್ಯಂತ ಶ್ರೀಮಂತ ಭಾರತೀಯರು ದೇಶದ ಒಟ್ಟು ಸಂಪತ್ತಿನ ಶೇ.80.7ನ್ನು ಹೊಂದಿದ್ದಾರೆ. ರಾಷ್ಟ್ರ ಸಂಪತ್ತಿನಲ್ಲಿ ಶೇ.1 ಅತ್ಯಂತ ಶ್ರೀಮಂತರ ಪಾಲು 2015ರಲ್ಲಿ ಶೇ.22 ಇತ್ತು. ಈ ಪ್ರಮಾಣ 1980ರ ದಶಕದಲ್ಲಿ ಶೇ.6 ಆಗಿತ್ತು ಎಂದು ವರದಿ ತಿಳಿಸಿದೆ. ಸಿಎಸ್‌ಡಿ ಉಪನ್ಯಾಸಕ ಟಿ.ಹಕ್ ಮತ್ತು ಹೈದರಾಬಾದ್ ವಿಶ್ವವಿದ್ಯಾನಿಲಯದ ನಿವೃತ್ತ ಉಪನ್ಯಾಸಕ ಡಿ.ನರಸಿಂಹ ರೆಡ್ಡಿ ಸಂಪಾದಿಸಿರುವ ವರದಿಯು ಖ್ಯಾತ ಅರ್ಥಶಾಸ್ತ್ರಜ್ಞರು ಮತ್ತು ಸಾಮಾಜಿಕ ಪರಿಣತರು ಬರೆದಿರುವ 22 ಅಧ್ಯಾಯಗಳನ್ನು ಹೊಂದಿದೆ. ಇದರಲ್ಲಿ ಪ್ರಾದೇಶಿದಿಂದ ವಲಯವಾರುವರೆಗಿನ ಅಸಮಾನತೆಯ ವಿವಿಧ ಆಯಾಮಗಳನ್ನು ಉಲ್ಲೇಖಿಸಲಾಗಿದೆ.

 ಹೆಚ್ಚುತ್ತಿರುವ ಅಸಮಾನತೆಯು ಮುಖ್ಯವಾದ ಕ್ಷೇತ್ರೀಯ ಆಯಾಮವನ್ನು ಹೊಂದಿದೆ. ಬಿಹಾರ, ಚತ್ತೀಸ್‌ಗಡ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳಲ್ಲಿ ಕೃಷಿಯೇತರ ಕ್ಷೇತ್ರಗಳಲ್ಲಿ ದುಡಿಯುವ ಕಾರ್ಮಿಕರ ಆದಾಯ ಕೃಷಿ ಕ್ಷೇತ್ರದ ಆದಾಯಕ್ಕಿಂತ ಆರರಿಂದ ಹನ್ನೊಂದು ಪಟ್ಟು ಹೆಚ್ಚಾಗಿದೆ. ಅಖಿಲ ಭಾರತ ಮಟ್ಟದಲ್ಲೂ ಕೃಷಿವಲಯಕ್ಕಿಂತ ಮತ್ತು ಕೃಷಿಯೇತರ ವಲಯದ ಆದಾಯ ಬಹುತೇಕ ಐದು ಪಟ್ಟಿದೆ ಎಂದು ವರದಿ ತಿಳಿಸುತ್ತದೆ.

 ಸಾಮಾಜಿಕ ಅಭಿವೃದ್ಧಿ ಸೂಚಿಯನ್ನೂ ಈ ವರದಿಯು ಹೊಂದಿದೆ. ವರದಿಯ ಪ್ರಕಾರ, ಕೇರಳ, ಪಂಜಾಬ್, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಗೋವಾ ಸಾಮಾಜಿಕ ಅಭಿವೃದ್ಧಿಯ ಮುಂಚೂಣಿಯಲ್ಲಿದ್ದರೆ ಅಸ್ಸಾಂ, ಬಿಹಾರ, ಚತ್ತೀಸ್‌ಗಡ, ಒಡಿಶಾ ಮತ್ತು ಉತ್ತರ ಪ್ರದೇಶ ಕೊನೆಯ ಸಾಲಿನಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X