Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೆರಿನ್ ಮ್ಯಾಥ್ಯೂ ಸಾವು: ತಪ್ಪೊಪ್ಪಿಕೊಂಡ...

ಶೆರಿನ್ ಮ್ಯಾಥ್ಯೂ ಸಾವು: ತಪ್ಪೊಪ್ಪಿಕೊಂಡ ದತ್ತು ತಂದೆ

ವಾರ್ತಾಭಾರತಿವಾರ್ತಾಭಾರತಿ25 Jun 2019 11:12 PM IST
share
ಶೆರಿನ್ ಮ್ಯಾಥ್ಯೂ ಸಾವು: ತಪ್ಪೊಪ್ಪಿಕೊಂಡ ದತ್ತು ತಂದೆ

ಹ್ಯೂಸ್ಟನ್ (ಅಮೆರಿಕ), ಜೂ. 25: ತನ್ನ ಮೂರು ವರ್ಷದ ದತ್ತು ಪುತ್ರಿ ಶೆರಿನ್ ಮ್ಯಾಥ್ಯೂಸ್‌ಳನ್ನು ಕೊಂದ ಆರೋಪವನ್ನು ಎದುರಿಸುತ್ತಿರುವ ಭಾರತೀಯ ಅಮೆರಿಕನ್ ವ್ಯಕ್ತಿಯು, ಕಡಿಮೆ ತೀವ್ರತೆಯ ಅಪರಾಧವನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಮಾಧ್ಯಮ ವರದಿಗಳು ಹೇಳಿವೆ.

39 ವರ್ಷದ ವೆಸ್ಲಿ ಮ್ಯಾಥ್ಯೂಸ್ ಮಗುವನ್ನು ಕೊಂದು ದೇಹವನ್ನು ಉಪನಗರ ಡಲ್ಲಾಸ್‌ನ ಚರಂಡಿಯೊಂದರಲ್ಲಿ ಅಡಗಿಸಿಟ್ಟಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದಾನೆ.

 ಡಲ್ಲಾಸ್ ಜಿಲ್ಲಾ ನ್ಯಾಯಾಲಯದಲ್ಲಿ ಸೋಮವಾರ ಅವರ ವಿರುದ್ಧದ ಕೊಲೆ ಪ್ರಕರಣದ ವಿಚಾರಣೆ ಆರಂಭಗೊಳ್ಳುವ ಮೊದಲೇ, ನಿರ್ಲಕ್ಷದ ಮೂಲಕ ಮಗುವಿಗೆ ಗಾಯ ಉಂಟು ಮಾಡಿದ ಆರೋಪವನ್ನು ಒಪ್ಪಿಕೊಂಡಿದ್ದಾನೆ. ಕಡಿಮೆ ತೀವ್ರತೆಯ ಅಪರಾಧಕ್ಕೆ ಕಡಿಮೆ ತೀವ್ರತೆಯ ಶಿಕ್ಷೆಯಾಗುವ ಸಾಧ್ಯತೆಯಿದೆ.

10 ವರ್ಷಕ್ಕಿಂತ ಕೆಳಗಿನ ಮಕ್ಕಳ ಗುರುತರ ಕೊಲೆ ಆರೋಪವು ಅವನ ವಿರುದ್ಧ 2017 ಅಕ್ಟೋಬರ್‌ನಲ್ಲಿ ದಾಖಲಾಗಿತ್ತು.

ಈ ಆರೋಪ ಸಾಬೀತಾದರೆ ವೆಸ್ಲಿಗೆ ಪರೋಲ್ ಇಲ್ಲದೆ ಜೀವಮಾನವಿಡೀ ಜೈಲಿನಲ್ಲಿ ಕಳೆಯುವ ಶಿಕ್ಷೆ ವಿಧಿಸಬಹುದಾಗಿದೆ. ಈಗ ನಿರ್ಲಕ್ಷದಿಂದಾಗಿ ಮಗುವಿಗೆ ಗಾಯ ಉಂಟು ಮಾಡಿದ ಆರೋಪ ದಾಖಲಾದರೆ, 30 ವರ್ಷ ಜೈಲಿನಲ್ಲಿ ಕಳೆದ ಬಳಿಕ ಪರೋಲ್‌ನಲ್ಲಿ ಹೊರಬರುವ ಅವಕಾಶವಿರುತ್ತದೆ.

ಭಾರತೀಯ ಮಗುವಿನ ದುರಂತ ಅಂತ್ಯವು 2017ರ ಅಕ್ಟೋಬರ್‌ನಲ್ಲಿ ಅಂತರ್‌ರಾಷ್ಟ್ರೀಯ ಗಮನವನ್ನು ಸೆಳೆದಿತ್ತು.

ವೆಸ್ಲಿ ಮ್ಯಾಥ್ಯೂಸ್ ಮತ್ತು ಅವನ ಪತ್ನಿ ಸಿನಿ ಇಬ್ಬರೂ ಕೇರಳದವರು. ಅವರು 2016ರಲ್ಲಿ ಬಿಹಾರದ ಅನಾಥಾಶ್ರಮವೊಂದರಿಂದ ಶೆರಿನ್‌ಳನ್ನು ದತ್ತು ತೆಗೆದುಕೊಂಡಿದ್ದರು. ನೋಂದಾಯಿತ ನರ್ಸ್ ಆಗಿರುವ ಸಿನಿ ವಿರುದ್ಧ ಆರಂಭದಲ್ಲಿ ಮಗುವನ್ನು ಅಪಾಯಕ್ಕೆ ಸಿಲುಕಿಸಿದ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಪುರಾವೆ ಕೊರತೆಯ ಹಿನ್ನೆಲೆಯಲ್ಲಿ ಬಳಿಕ ಪ್ರಾಸಿಕ್ಯೂಟರ್‌ಗಳು ಅವರ ವಿರುದ್ಧದ ಆರೋಪವನ್ನು ಕೈಬಿಟ್ಟಿದ್ದಾರೆ.

ಮುಂಜಾನೆ 3 ಗಂಟೆಗೆ ಮಗುವನ್ನು ಹೊರಗೆ ನಿಲ್ಲಿಸಿದ್ದೆ ಎಂದಿದ್ದ ಆರೋಪಿ!

ಶೆರಿನ್ ನಾಪತ್ತೆಯಾಗಿರುವ ವಿಷಯವನ್ನು ಮ್ಯಾಥ್ಯೂಸ್ 2017 ಅಕ್ಟೋಬರ್ 7ರಂದು ಪೊಲೀಸರಿಗೆ ತಿಳಿಸಿದ್ದನು. ಹಾಲು ಕುಡಿಯಲು ನಿರಾಕರಿಸಿರುವುದಕ್ಕಾಗಿ ಮುಂಜಾನೆ 3 ಗಂಟೆಗೆ ಮಗುವನ್ನು ಮನೆಯ ಹಿಂದಿನ ಮರದ ಬಳಿ ಬಿಟ್ಟಿದ್ದಾಗಿ ಆರಂಭಿಕ ಹೇಳಿಕೆಯಲ್ಲಿ ಅವನು ತಿಳಿಸಿದ್ದನು. 15 ನಿಮಿಷದ ಬಳಿಕ ಹೋಗಿ ನೋಡಿದಾಗ ಮಗು ನಾಪತ್ತೆಯಾಗಿತ್ತು ಎಂದಿದ್ದನು.

ಮಗುವಿನ ದೇಹವು ಎರಡು ವಾರಗಳ ಬಳಿಕ, ಸಮೀಪದ ಚರಂಡಿಯಲ್ಲಿ ಪತ್ತೆಯಾಗಿತ್ತು. ಆಗ ತನ್ನ ಹೇಳಿಕೆಯನ್ನು ಬದಲಿಸಿದ ಮ್ಯಾಥ್ಯೂಸ್, ತಾನು ತನ್ನ ದತ್ತು ಪುತ್ರಿಗೆ ಬಲವಂತವಾಗಿ ಹಾಲು ಕುಡಿಸಿದಾಗ ಮಗುವಿನ ಉಸಿರುಗಟ್ಟಿತು ಎಂದು ಹೇಳಿದ್ದನು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X