ಮಹಾನಗರ ಪಾಲಿಕೆ ಅಧಿಕಾರಿಗೆ ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿದ ಬಿಜೆಪಿ ಶಾಸಕ: ವಿಡಿಯೋ ವೈರಲ್
ಈತ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯರ ಪುತ್ರ!
ಮಧ್ಯಪ್ರದೇಶ, ಜೂ.26: ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಮುನಿಸಿಪಲ್ ಕಾರ್ಪೊರೇಷನ್ ಅಧಿಕಾರಿಯೊಬ್ಬರಿಗೆ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಮಾಧ್ಯಮಗಳ ಕ್ಯಾಮರಾ ಮುಂದೆಯೇ ಬಿಜೆಪಿ ಶಾಸಕ ಅಧಿಕಾರಿಗೆ ಥಳಿಸಿದ್ದಾನೆ. ಆಕಾಶ್ ವಿಜಯವರ್ಗಿಯ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗಿಯ ಅವರ ಪುತ್ರ.
ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ತೆರವುಗೊಳಿಸಲು ಅಧಿಕಾರಿ ಆಗಮಿಸಿದ್ದರು ಎಂದು ವರದಿಯಾಗಿದೆ. ಆಕಾಶ್ ಅಧಿಕಾರಿಗೆ ಥಳಿಸಿದ್ದು, ಆತನ ಬೆಂಬಲಿಗರೂ ಸಾಥ್ ನೀಡಿದ್ದಾರೆ.
#WATCH Madhya Pradesh: Akash Vijayvargiya, BJP MLA and son of senior BJP leader Kailash Vijayvargiya, thrashes a Municipal Corporation officer with a cricket bat, in Indore. The officers were in the area for an anti-encroachment drive. pic.twitter.com/AG4MfP6xu0
— ANI (@ANI) June 26, 2019
Next Story