Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ 2022ರ ವೇಳೆ ಗಿಡ್ಡ ಮಕ್ಕಳ...

ಭಾರತದಲ್ಲಿ 2022ರ ವೇಳೆ ಗಿಡ್ಡ ಮಕ್ಕಳ ಪ್ರಮಾಣ ಶೇ.31.4 : ವರದಿ

ವಾರ್ತಾಭಾರತಿವಾರ್ತಾಭಾರತಿ26 Jun 2019 7:57 PM IST
share
ಭಾರತದಲ್ಲಿ 2022ರ ವೇಳೆ ಗಿಡ್ಡ ಮಕ್ಕಳ ಪ್ರಮಾಣ ಶೇ.31.4 : ವರದಿ

ಹೊಸದಿಲ್ಲಿ, ಜೂ.26: ಭಾರತದಲ್ಲಿ ಐದು ವರ್ಷದ ಕೆಳಹರೆಯದ ಮಕ್ಕಳಲ್ಲಿ ದೀರ್ಘಕಾಲದ ಅಪೌಷ್ಟಿಕತೆಯಿಂದ ಬೆಳವಣಿಗೆ ಕುಂಠಿತವಾಗುವ ಪ್ರಮಾಣ ಕಳೆದ ದಶಕದಲ್ಲಿ ವರ್ಷಕ್ಕೆ ಸುಮಾರು ಶೇ.1ರ ಪ್ರಮಾಣಕ್ಕೆ ಇಳಿಕೆಯಾಗಿದೆ. ಈ ಪ್ರಮಾಣ ಮುಂದುವರಿದರೆ 2022ರ ವೇಳೆಗೆ ದೇಶದ 31.4% ಮಕ್ಕಳು ಬೆಳವಣಿಗೆ ಕುಂಠಿತಗೊಂಡು ಗಿಡ್ಡಗಾಗುತ್ತಾರೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.

ಮಂಗಳವಾರ ಸ್ವಿಝರ್ಲ್ಯಾಂಡಿನ ಜಿನೆವ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯ ಬಳಿಕ ವಿಶ್ವಸಂಸ್ಥೆಯ ವಿಶ್ವ ಆರೋಗ್ಯ ಯೋಜನೆಯ ವಕ್ತಾರ ಹಾರ್ವೆ ವೆರ್ಹೂಸೆಲ್ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಹಾಗೂ ಏಶ್ಯಾದ ಬಹುತೇಕ ರಾಷ್ಟ್ರಗಳ ಪೈಕಿ ಭಾರತದಲ್ಲಿ ಮಕ್ಕಳ ಬೆಳವಣಿಗೆ ಕುಂಠಿತದ ಇಳಿಕೆಯ ಪ್ರಮಾಣವು ಅತ್ಯಂತ ನಿಧಾನಗತಿಯಲ್ಲಿದೆ ಎಂದು ವರದಿ ತಿಳಿಸಿದೆ. ರಾಷ್ಟ್ರೀಯ ಪೌಷ್ಟಿಕ ಅಭಿಯಾನದಡಿ ನಿಗದಿಗೊಳಿಸಿರುವಂತೆ, 2022ರ ವೇಳೆಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುವ ಪ್ರಮಾಣವನ್ನು 25%ಕ್ಕೆ ಇಳಿಸುವ ಗುರಿಯನ್ನು ಭಾರತ ಹೊಂದಿದ್ದು, ಇದನ್ನು ಸಾಧಿಸಬೇಕಿದ್ದರೆ ಬೆಳವಣಿಗೆ ಕುಂಠಿತ ಇಳಿಕೆಯ ಪ್ರಮಾಣ ವಾರ್ಷಿಕ 2% ಗೆ ಹೆಚ್ಚಬೇಕು.

ಗೋವಾ, ಕೇರಳ , ದಾಮನ್ ಮತ್ತು ದಿಯು, ಅಂಡಮಾನ್ ಮತ್ತು ನಿಕೋಬಾರ್, ಪುದುಚೇರಿ ಮತ್ತು ತ್ರಿಪುರಾ ರಾಜ್ಯಗಳು ಈ ಗುರಿಯನ್ನು ಸಾಧಿಸಿರುವುದು 2015-16ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ತಿಳಿದು ಬಂದಿದೆ. 25.7% ಪ್ರಮಾಣದಲ್ಲಿರುವ ಪಂಜಾಬ್ ರಾಜ್ಯ ಕೂಡಾ ಗುರಿಯ ನಿಕಟದಲ್ಲಿದೆ. 2030ರ ವೇಳೆಗೆ ದೇಶವನ್ನು ಹಸಿವುಮುಕ್ತಗೊಳಿಸುವ ಸುಸ್ಥಿರ ಅಭಿವೃದ್ಧಿಯ ಗುರಿಯೆಡೆಗೆ ಭಾರತದ ಮುನ್ನಡೆಯನ್ನು ಆಧಾರವಾಗಿರಿಸಿ ಈ ವಿಶ್ಲೇಷಣೆ ನಡೆಸಲಾಗಿದೆ. ಅಕ್ಕಿ, ಗೋಧಿ ಹಾಗೂ ಇತರ ಧಾನ್ಯಗಳ ಉತ್ಪಾದನೆಯಲ್ಲಿ ಭಾರೀ ಪ್ರಮಾಣದ ಹೆಚ್ಚಳವಾಗಿ ಆಹಾರಧಾನ್ಯ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿಯಾಗಿದ್ದರೂ, ಈ ಧಾನ್ಯಗಳ ತಲಾ ಲಭ್ಯತೆ ಇದೇ ಪ್ರಮಾಣದಲ್ಲಿ ಹೆಚ್ಚಿಲ್ಲ. ಇದಕ್ಕೆ ಅಸಮಾನತೆ, ಜನಸಂಖ್ಯಾ ಹೆಚ್ಚಳ, ಆಹಾರದ ನಷ್ಟ ಮತ್ತು ಆಹಾರವನ್ನು ಪೋಲು ಮಾಡುವುದು ಹಾಗೂ ರಫ್ತು ಕಾರಣವಾಗಿದೆ ಎಂದು ವೆರ್ಹೂಸೆಲ್ ಹೇಳಿದ್ದಾರೆ.

ದೇಶದ ಜನಸಂಖ್ಯೆಯ ಪ್ರಮಾಣ 1.32 ಬಿಲಿಯನ್ ಆಗಿರುವುದು ಸುಸ್ಥಿರ ಅಭಿವೃದ್ಧಿಯ ಗುರಿಯೆಡೆಗೆ ಭಾರತದ ಮುನ್ನಡೆಗೆ ಮತ್ತು ಹಸಿವುಮುಕ್ತ ದೇಶದ ಕಲ್ಪನೆಯ ಯಶಸ್ಸಿನ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ ಎಂದವರು ಹೇಳಿದ್ದಾರೆ. ಆಹಾರ ಭದ್ರತೆಯ ಸುಧಾರಣೆಯ ಸಕಾರಾತ್ಮಕ ಪ್ರವೃತ್ತಿ ಹಾಗೂ ವಿಧಾನಗಳ ಹೊರತಾಗಿಯೂ ದೇಶದಲ್ಲಿ ಅಪೌಷ್ಟಿಕತೆಯ ದರ ಸ್ವೀಕಾರಾರ್ಹ ಮಟ್ಟಕ್ಕಿಂತ ತುಂಬಾ ಕಡಿಮೆಯಾಗಿರುವ ಬಗ್ಗೆ ವರದಿ ಬೆಟ್ಟು ಮಾಡಿದೆ ಎಂದು ವೆರ್ಹೂಸೆಲ್ ಹೇಳಿದ್ದಾರೆ.

ಬಿಹಾರದಲ್ಲಿ ಅಧಿಕ ಐದು ವರ್ಷದ ಕೆಳಗಿನ ಹರೆಯದ ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗುವ ಪ್ರಮಾಣ ಬಿಹಾರದಲ್ಲಿ ಅತ್ಯಧಿಕವಾಗಿದೆ( 48%). ಆ ಬಳಿಕದ ಸ್ಥಾನದಲ್ಲಿ ಉತ್ತರಪ್ರದೇಶ(46%), ಜಾರ್ಖಂಡ್(45%), ಮೇಘಾಲಯ(44%) ರಾಜ್ಯಗಳಿವೆ. ಕಡಿಮೆ ತೂಕದ ಮತ್ತು ನಿಶ್ಯಕ್ತ ಮಕ್ಕಳ ಪ್ರಮಾಣವೂ ಜಾರ್ಖಂಡ್ ರಾಜ್ಯದಲ್ಲಿ ಅತ್ಯಧಿಕವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X