Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಓಎಲ್‍ಎಕ್ಸ್' ವಂಚಕರ ಮಾತು ನಂಬಿ...

'ಓಎಲ್‍ಎಕ್ಸ್' ವಂಚಕರ ಮಾತು ನಂಬಿ ಸಾವಿರಾರು ರೂ. ಕಳೆದುಕೊಂಡ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ26 Jun 2019 10:38 PM IST
share
ಓಎಲ್‍ಎಕ್ಸ್ ವಂಚಕರ ಮಾತು ನಂಬಿ ಸಾವಿರಾರು ರೂ. ಕಳೆದುಕೊಂಡ ವಿದ್ಯಾರ್ಥಿ

ದಾವಣಗೆರೆ, ಜೂ.26: ಓಎಲ್‍ಎಕ್ಸ್ ಜಾಹೀರಾತು ನಂಬಿದ ವಿದ್ಯಾರ್ಥಿಯೊಬ್ಬ ವಂಚಕರ ಮಾತಿಗೆ ಕಿವಿಗೊಟ್ಟು 15,999 ರೂ. ಕಳೆದುಕೊಂಡ ಘಟನೆ ನಗರದಲ್ಲಿ ವರದಿಯಾಗಿದೆ.

ಇಲ್ಲಿನ ಆಂಜನೇಯ ಬಡಾವಣೆ ವಾಸಿ ವೈ.ಕೆ. ಕೌಶಿಕ್(23) ಹಣ ಕಳೆದುಕೊಂಡ ವಿದ್ಯಾರ್ಥಿ. ಜೂ.21ರಂದು ಬೆಳಗ್ಗೆ 10ರಿಂದ ಜೂ. 24ರ ರಾತ್ರಿ 10 ಗಂಟೆ ಅವಧಿಯಲ್ಲಿ ಕೌಶಿಕ್‍ಗೆ ಆನ್‍ಲೈನ್‍ನಲ್ಲಿ ವಂಚಕರು ಕಾರು ಮಾರಾಟ ಮಾಡುವುದಾಗಿ ನಂಬಿಸಿ, ವಂಚನೆ ಮಾಡಿರುವ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೌಶಿಕ್ ಜೂ.21ರಂದು ಓಎಲ್‍ಎಕ್ಸ್ ಜಾಹೀರಾತಿನಲ್ಲಿ ಕಾರು ಮಾರಾಟಕ್ಕಿದ್ದ ಬಗ್ಗೆ ಜಾಹೀರಾತು ಬಂದಿದೆ. ಅದರಲ್ಲಿದ್ದ ನಂಬರ್ ಗೆ ಕರೆ ಮಾಡಿ, ಕಾರನ್ನು ಕೇಳಿದ್ದಾರೆ. ಅದಕ್ಕೆ ಆ ಕಡೆಯಿಂದ ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿಯು ಕಾರನ್ನು 1.10 ಲಕ್ಷ ರೂ.ಗೆ ಮಾರುವುದಾಗಿ ಹೇಳಿದ್ದಾನೆ. ಕೊನೆಗೆ, 1 ಲಕ್ಷಕ್ಕೆ ಕಾರು ಕೊಡುವುದಾಗಿ ಹೇಳಿದ್ದಾನೆ. 

ಖುಷಿಯಾದ ಕೌಶಿಕ್‍ಗೆ ವಾಹನ ಕೊಳ್ಳುವುದಾದರೆ ನಿಮ್ಮ ದೃಢೀಕರಣಕ್ಕಾಗಿ ನಿಮ್ಮ ಐಡಿ ಕಳಿಸುವಂತೆ, ಫೋಟೋ, ಡಿಎಲ್‍ನ್ನು ತನ್ನ ನಂಬರ್ ಗೆ ವಾಟ್ಸಪ್ ಮಾಡಿಸಿಕೊಂಡಿದ್ದಾನೆ. ನಂತರ ಜೂ.24ರ ಬೆಳಿಗ್ಗೆ 10ಕ್ಕೆ ಪುನಃ ಕರೆ ಮಾಡಿ, ಕಾರನ್ನು ಟೆಸ್ಟ್ ಡ್ರೈವ್ ಮಾಡಲು ಲಾರಿಯಲ್ಲಿ ಕಳಿಸಲು ಟ್ರಾನ್ಸ್‍ ಪೋರ್ಟ್ ಚಾರ್ಜ್ 2 ಸಾವಿರ ಹಣ ಕಳಿಸುವಂತೆ ಹೇಳಿದ ಆರೋಪಿಗೆ ಗೂಗಲ್ ಪೇ ಮೂಲಕ ಕೌಶಿಕ್ ಹಣ ಕಳಿಸಿದ್ದಾರೆ. ನಂತರ ತಮ್ಮ ಕಾರ್ ಡ್ರೈವರ್ ಎಂಬುದಾಗಿ ಒಂದು ಮೊಬೈಲ್ ನಂಬರ್ ಕೊಟ್ಟು, ಲೊಕೇಷನ್ ಕಳಿಸುವಂತೆ ಹೇಳಿದ್ದಾನೆ. ಕೌಶಿಕ್ ತಾವಿದ್ದ ಸ್ಥಳದ ಲೊಕೇಷನ್ ಶೇರ್ ಮಾಡಿದ್ದಾರೆ. ಲೊಕೇಷನ್ ತೆಗೆದುಕೊಳ್ಳುತ್ತಿಲ್ಲ, ಅದಕ್ಕಾಗಿ ನೀವು 13,999 ರು. ಕಳಿಸಿ ಎಂಬುದಾಗಿ ವಂಚಕ ಹೇಳಿದಾಗಲೂ ಕೌಶಿಕ್ ಅಷ್ಟು ಹಣ ತನ್ನ ಅಣ್ಣನ ಗೂಗಲ್ ಪೇ ಮೂಲಕ ಕಳಿಸಿದ್ದಾರೆ ಎನ್ನಲಾಗಿದೆ. 

ಬಳಿಕ, ಕಾರಿನ ದಾಖಲೆ ನಿಮ್ಮ ಹೆಸರಿಗೆ ವರ್ಗಾವಣೆ ಮಾಡುತ್ತಿದ್ದು, 16 ಸಾವಿರ ರೂ. ವರ್ಗಾವಣೆ ಮಾಡುವಂತೆ ವಂಚಕ ಹೇಳಿದ್ದಾನೆ. ಆಗ ಕೌಶಿಕ್ ತಾನು ಕಾರನ್ನೇ ನೋಡಿಲ್ಲ, ನಿಮಗೆ ಹೇಗೆ ಹಣ ವರ್ಗಾವಣೆ ಮಾಡಲಿ ಎಂಬುದಾಗಿ ಕೇಳಿದ್ದು, ಈ ವೇಳೆ ಕರೆ ಕಟ್ ಮಾಡಿದ್ದಾರೆ. ಘಟನೆ ಬಳಿಕ ಕೌಶಿಕ್ ಸಿಇಎನ್ ಅಪರಾಧ ಠಾಣೆಯ ಮೊರೆ ಹೋಗಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X