Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್-ಫೆಲೆಸ್ತೀನ್ ಶಾಂತಿಗಾಗಿ 50...

ಇಸ್ರೇಲ್-ಫೆಲೆಸ್ತೀನ್ ಶಾಂತಿಗಾಗಿ 50 ಬಿಲಿಯ ಡಾಲರ್ ಪರಿಹಾರ ಸೂತ್ರ

ಟ್ರಂಪ್ ಸಲಹೆಗಾರ ಜ್ಯಾರ್ಡ್ ಕಶ್ನರ್ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ26 Jun 2019 10:46 PM IST
share
ಇಸ್ರೇಲ್-ಫೆಲೆಸ್ತೀನ್ ಶಾಂತಿಗಾಗಿ 50 ಬಿಲಿಯ ಡಾಲರ್ ಪರಿಹಾರ ಸೂತ್ರ

ಮನಾಮ (ಬಹರೈನ್), ಜೂ. 26: ಇಸ್ರೇಲ್-ಫೆಲೆಸ್ತೀನ್ ಶಾಂತಿಗಾಗಿ ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ಮಂಗಳವಾರ 50 ಬಿಲಿಯ ಡಾಲರ್ (3.46 ಲಕ್ಷ ಕೋಟಿ ರೂಪಾಯಿ) ಮೌಲ್ಯದ ಆರ್ಥಿಕ ಸೂತ್ರವೊಂದನ್ನು ಮುಂದಿಟ್ಟಿದೆ. ದಶಕಗಳ ಹಳೆಯ ಸಂಘರ್ಷವನ್ನು ಕೊನೆಗೊಳಿಸಲು, ಈ ಹೂಡಿಕೆ ಕಾರ್ಯಕ್ರಮವು ಫೆಲೆಸ್ತೀನಿಯರಿಗೆ ಪೂರ್ವಶರತ್ತಾಗಿರುತ್ತದೆ ಎಂದು ಅದು ಹೇಳಿದೆ.

ಈ ಶಾಂತಿ ಸೂತ್ರಕ್ಕೆ ಬೆಂಬಲ ಗಳಿಸುವುದಕ್ಕಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಹಿರಿಯ ಸಲಹೆಗಾರ ಹಾಗೂ ಅಳಿಯ ಜ್ಯಾರ್ಡ್ ಕಶ್ನರ್ ಬಹರೈನ್ ರಾಜಧಾನಿ ಮನಾಮದಲ್ಲಿ ಮಂಗಳವಾರ ಎರಡು ದಿನಗಳ ಅಂತರ್‌ರಾಷ್ಟ್ರೀಯ ಸಮಾವೇಶವೊಂದಕ್ಕೆ ಚಾಲನೆ ನೀಡಿದರು.

ಆದರೆ, ಈ ಸೂತ್ರಕ್ಕೆ ಫೆಲೆಸ್ತೀನಿಯರು ಮತ್ತು ಅರಬ್ ಜಗತ್ತಿನ ಇತರರಿಂದ ವ್ಯಾಪಕ ತಿರಸ್ಕಾರ ವ್ಯಕ್ತವಾಗಿದೆ. ಆದಾಗ್ಯೂ, ಸೌದಿ ಅರೇಬಿಯದಂಥ ಅಮೆರಿಕದ ಪ್ರಾದೇಶಿಕ ಮಿತ್ರದೇಶಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿವೆ.

‘‘ನಾವು ಈ ವಲಯವನ್ನು ಹಿಂದಿನ ಸಂಘರ್ಷಗಳ ಬಲಿಪಶು ಸ್ಥಿತಿಯಿಂದ ವ್ಯಾಪಾರ ಮತ್ತು ಅಭಿವೃದ್ಧಿಯ ಮಾದರಿ ವಲಯವಾಗಿ ಮಾರ್ಪಡಿಸಬಹುದು’’ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಕಶ್ನರ್ ಹೇಳಿದರು.

ಅಂತರ್‌ರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ವಿಶ್ವಬ್ಯಾಂಕ್‌ಗಳ ಮುಖ್ಯಸ್ಥರು ಸಮ್ಮೇಳನದಲ್ಲಿ ಹಾಜರಿದ್ದರು.

ಈ ಪ್ರಸ್ತಾಪದ ಬಗ್ಗೆ ಇಸ್ರೇಲ್ ಮುಕ್ತ ಮನೋಭಾವ ಹೊಂದಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಆಪ್ತ ಮಿತ್ರನಾಗಿದ್ದಾರೆ.

 ‘ಎರಡು-ದೇಶ ಪರಿಹಾರ’ ಏನಾಯಿತು?

‘ಎರಡು-ದೇಶ ಪರಿಹಾರ’ವನ್ನು ಟ್ರಂಪ್ ತಂಡ ಕೈಬಿಡಲು ಉದ್ದೇಶಿಸಿದೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

ಇಸ್ರೇಲ್ ಮತ್ತು ಸ್ವತಂತ್ರ ಫೆಲೆಸ್ತೀನ್ ದೇಶಗಳು ಅಕ್ಕಪಕ್ಕದಲ್ಲಿರುವ ‘ಎರಡು-ದೇಶ’ ಪರಿಹಾರದ ಪರವಾಗಿ ವ್ಯಾಪಕ ಜನಾಭಿಪ್ರಾಯ ಈ ಹಿಂದೆ ವ್ಯಕ್ತವಾಗಿರುವುದನ್ನು ಸ್ಮರಿಸಬಹುದಾಗಿದೆ.

ವಿಶ್ವಸಂಸ್ಥೆ ಮತ್ತು ಹೆಚ್ಚಿನ ದೇಶಗಳು ಈ ಪರಿಹಾರಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಆದರೆ, ಟ್ರಂಪ್ ಆಡಳಿತ ಮಾತ್ರ ಇದನ್ನು ಗಣನೆಗೆ ತೆಗೆದುಕೊಳ್ಳಲು ನಿರಾಕರಿಸುತ್ತಿದೆ.

ಫೆಲೆಸ್ತೀನ್ ನಾಯಕರ ಬಹಿಷ್ಕಾರ

ಜ್ಯಾರ್ಡ್ ಕಶ್ನರ್ ಏರ್ಪಡಿಸಿರುವ ಎರಡು ದಿನಗಳ ಸಮ್ಮೇಳನವನ್ನು ಫೆಲೆಸ್ತೀನ್ ನಾಯಕರು ಬಹಿಷ್ಕರಿಸಿದ್ದಾರೆ. ಅಮೆರಿಕವು ಇಸ್ರೇಲ್ ಪರವಾಗಿದೆ ಎಂಬುದಾಗಿ ಆರೋಪಿಸಿರುವ ಅವರು, ಈ ವಿಷಯದಲ್ಲಿ ಅಮೆರಿಕದೊಂದಿಗೆ ವ್ಯವಹರಿಸಲು ನಿರಾಕರಿಸಿವೆ.

ಟ್ರಂಪ್ 2017ರಲ್ಲಿ ಅಂತರ್‌ರಾಷ್ಟ್ರೀಯ ಒಮ್ಮತವನ್ನು ಕಡೆಗಣಿಸಿ ಜೆರುಸಲೇಮನ್ನು ಇಸ್ರೇಲ್ ರಾಜಧಾನಿಯಾಗಿ ಮಾನ್ಯ ಮಾಡಿದ್ದರು. ಇದು ಫೆಲೆಸ್ತೀನಿಯರು ಮತ್ತು ಇತರ ಅರಬ್ಬರನ್ನು ಕೆರಳಿಸಿದೆ.

ಆದಾಗ್ಯೂ, ಸಮ್ಮೇಳನದಲ್ಲಿ ಫೆಲೆಸ್ತೀನ್ ಮತ್ತು ಇಸ್ರೇಲ್ ಉದ್ಯಮಿಗಳು ಭಾಗವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X