Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಬೆಂಗಳೂರಿಗೆ ಶರಾವತಿ ನೀರು': ಯೋಜನೆಗೆ...

'ಬೆಂಗಳೂರಿಗೆ ಶರಾವತಿ ನೀರು': ಯೋಜನೆಗೆ ರೈತ ಸಂಘದ ವಿರೋಧ

ವಾರ್ತಾಭಾರತಿವಾರ್ತಾಭಾರತಿ26 Jun 2019 11:59 PM IST
share
ಬೆಂಗಳೂರಿಗೆ ಶರಾವತಿ ನೀರು: ಯೋಜನೆಗೆ ರೈತ ಸಂಘದ ವಿರೋಧ

ಶಿವಮೊಗ್ಗ, ಜೂ. 26: ಜಿಲ್ಲೆಯ ಶರಾವತಿ ನದಿಯಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡುವ ರಾಜ್ಯ ಸರ್ಕಾರದ ಪ್ರಾಸ್ತಾವಿಕ ಯೋಜನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಯೋಜನೆ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದೆ. 

ಈ ಸಂಬಂಧ ಬುಧವಾರ ನಗರದ ರೈತ ಸಂಘದ ಕಾರ್ಯಾಲಯದಲ್ಲಿ ಮುಖಂಡರು ಸಭೆ ನಡೆಸಿದರು. ಈ ವೇಳೆ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಮಲೆನಾಡಿನ ಭಾಗದಲ್ಲಿ ಈಗಾಗಲೇ ಹಲವಾರು ಆಣೆಕಟ್ಟುಗಳನ್ನು ನಿರ್ಮಿಸಲಾಗಿದೆ. ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇಡೀ ರಾಜ್ಯಕ್ಕೆ ಬೆಳಕು ನೀಡಲು ಸರ್ವಸ್ವ ತ್ಯಾಗ ಮಾಡಿದ ಈ ಭಾಗದ ಜನರು ಇಂದಿಗೂ ಕತ್ತಲೆಯಲ್ಲಿದ್ದಾರೆ. ಮುಳುಗಡೆ ಸಂತ್ರಸ್ತರಿಗೆ ಇನ್ನೂ ಸರ್ಕಾರ ಮೂಲಸೌಲಭ್ಯ ಒದಗಿಸಿಲ್ಲ. ಈ ನಡುವೆ ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಪೂರೈಸುವ ಯೋಜನೆ ಸಿದ್ದಪಡಿಸಲಾಗಿದೆ. ಪರಿಸರಕ್ಕೆ ಹಾನಿ ಮಾಡುವ ಇಂತಹ ಅವೈಜ್ಞಾನಿಕ ಯೋಜನೆ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸುವುದಿಲ್ಲ ಎಂದು ತಿಳಿಸಿದ್ದಾರೆ. 

ಬೆಂಗಳೂರು ನಗರ ಬೇಕಾಬಿಟ್ಟಿಯಾಗಿ ಬೆಳೆದು ನಿಂತಿದೆ. ಈ ಕಾರಣದಿಂದಲೇ ಹಿಂದೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ರಚಿಸುವ ಪ್ರಸ್ತಾಪವನ್ನು ರೈತ ಸಂಘ ವಿರೋಧಿಸಿತ್ತು. ಬೆಂಗಳೂರು ಬೆಳವಣಿಗೆಗೆ ಮೊದಲು ಕಡಿವಾಣ ಹಾಕಬೇಕು. ರಾಜ್ಯದ ಇತರೆ ನಗರಗಳ ಬೆಳವಣಿಗೆಗೆ ಸರ್ಕಾರ ಯೋಜನೆ ರೂಪಿಸಬೇಕು. ಬೆಂಗಳೂರಿನ ಜನದಟ್ಟಣೆ ಕಡಿಮೆಗೊಳಿಸಬೇಕು. 

ಸ್ಥಳೀಯವಾಗಿ ಬೀಳುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು, ಕೆರೆಕಟ್ಟೆ ಒತ್ತುವರಿಗೊಳಿಸಿ, ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಿ ಅಂತರ್ಜಲ ವೃದ್ದಿಯತ್ತ ಚಿತ್ತ ಹರಿಸಬೇಕು. ಈ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. 

ಜುಲೈ 10 ರಂದು ಬೆಂಗಳೂರಿಗೆ ಶರಾವತಿ ನೀರು ಕೊಂಡೊಯ್ಯುವ ತೀರ್ಮಾನದ ವಿರುದ್ದ ವಿವಿಧ ಸಂಘಸಂಸ್ಥೆಗಳು ಕರೆ ನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್‍ಗೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಲಿದೆ. ಹೋರಾಟದಲ್ಲಿಯೂ ಭಾಗಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ. 
ಸಭೆಯಲ್ಲಿ ರೈತ ಸಂಘದ ಮುಖಂಡ ಕಡಿದಾಳು ಶಾಮಣ್ಣ, ಟಿ.ಎಂ.ಚಂದ್ರಪ್ಪ, ಕೆ. ರಾಘವೇಂದ್ರ, ಪಿ. ಶೇಖರಪ್ಪ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X