Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ‘ಪ್ರತೀಕಾರದ ತೆರಿಗೆ ’...

ಭಾರತದ ‘ಪ್ರತೀಕಾರದ ತೆರಿಗೆ ’ ಅಸ್ವೀಕಾರಾರ್ಹ: ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ27 Jun 2019 9:17 PM IST
share
ಭಾರತದ ‘ಪ್ರತೀಕಾರದ ತೆರಿಗೆ ’ ಅಸ್ವೀಕಾರಾರ್ಹ: ಟ್ರಂಪ್

ಜಿ20 ಶೃಂಗಸಭೆಯಲ್ಲಿ ಮೋದಿ ಜೊತೆ ಮಾತುಕತೆಗೆ ಇಂಗಿತ

   ಹೊಸದಿಲ್ಲಿ,ಒಸಾಕಾ,ಜೂ.27: ಭಾರತವು ತನ್ನ ದೇಶದ ವಿರುದ್ಧ ‘ಪ್ರತೀಕಾರಾತ್ಮಕ ತೆರಿಗೆ’ಗಳನ್ನು ಹೇರಿರುವುದು ಅಸ್ವೀಕಾರಾರ್ಹವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ. ಈ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಈ ಕುರಿತು ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಟ್ರಂಪ್, ‘‘ಹಲವಾರು ವರ್ಷಗಳಿಂದ ಭಾರತವು ಅಮೆರಿಕದ ಉತ್ಪನ್ನಗಳ ಮೇಲೆ ಅತ್ಯಧಿಕ ತೆರಿಗೆಗಳನ್ನು ವಿಧಿಸುತ್ತಿರುವ ಹೊರತಾಗಿಯೂ, ಅದು ತೀರಾ ಇತ್ತೀಚೆಗೆ ಸುಂಕಗಳನ್ನು ಇನ್ನಷ್ಟು ಹೆಚ್ಚಿಸಿದೆ. ಇದು ಅಸ್ವೀಕಾರಾರ್ಹ ಹಾಗೂ ತೆರಿಗೆಗಳನ್ನು ಹಿಂತೆಗೆದುಕೊಳ್ಳಬೇಕು’’ ಎಂದು ಹೇಳಿದ್ದಾರೆ.

 ಜಪಾನ್‌ನ ಒಸಾಕಾದಲ್ಲಿ ಶುಕ್ರವಾರ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಟ್ರಂಪ್ ಹಾಗೂ ಮೋದಿ ಪಾಲ್ಗೊಳ್ಳಲಿದ್ದು, ಈ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಆದರೆ ಇತರ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಮೆರಿಕದ ಉತ್ಪನ್ನಗಳಿಗೆ ವಿಧಿಸುತ್ತಿರುವ ತೆರಿಗೆ ಅಧಿಕವೇನಲ್ಲವೆಂದು ಭಾರತವು ಹೇಳಿರುವುದಾಗಿ ವಿವಿಧ ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

    ಭಾರತದಿಂದ ಆಮದಾಗುವ ಹಲವಾರು ಉತ್ಪನ್ನಗಳಿಗೆ ಸುದೀರ್ಘ ಕಾಲದಿಂದ ತಾನು ನೀಡುತ್ತಿದ್ದ ತೆರಿಗೆ ರಿಯಾಯಿತಿಗಳನ್ನು ಅಮೆರಿಕವು ಜೂನ್ 1ರಂದು ಹಿಂತೆಗೆದುಕೊಂಡ ಬಳಿಕ ಭಾರತವು ಅಮೆರಿಕದ 28 ಉತ್ಪನ್ನಗಳ ಮೇಲೆ ಸುಂಕಗಳನ್ನು ವಿಧಿಸಿತ್ತು.

ಅಮೆರಿಕ ಹಾಗೂ ಇತರ ದೇಶಗಳ ನಡುವಣ ಅಮದು ಹಾಗೂ ರಫ್ತಿನಲ್ಲಿ ವಾಣಿಜ್ಯ ಕೊರತೆಯನ್ನು ಸರಿದೂಗಿಸುವ ಅಧ್ಯ ಕ್ಷ  ಟ್ರಂಪ್ ಅವರ ನಿಲುವಿಗೆ ಅನುಗುಣವಾಗಿ ಅಮೆರಿಕವು ಭಾರತದ ಉತ್ಪನ್ನಗಳ ವಿರುದ್ಧ ತೆರಿಗೆಗಳನ್ನು ವಿಧಿಸಿದೆ. ಅಮೆರಿಕವು ಇತರ ದೇಶಗಳಿಗೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕಿಂತ ಅಧಿಕವಾಗಿ ಅವುಗಳ ಉತ್ಪನ್ನಗಳನ್ನು ಖರೀದಿಸುತ್ತಿರುವುದರಿಂದ ದೇಶದ ಉತ್ಪಾದನಾ ರಂಗವು ಕುಂಠಿತಗೊಂಡಿದೆಯೆಂದು ಮೂಲಗಳು ತಿಳಿಸಿವೆ.

ಕಳೆದ ಕೆಲವು ತಿಂಗಳುಗಳಿಂದ ಅಮೆರಿಕವು ಚೀನಾ ಹಾಗೂ ಭಾರತ ಸೇರಿದಂತೆ ಜಗತ್ತಿನಾದ್ಯಂತದ ವಿವಿಧ ರಾಷ್ಟ್ರಗಳಿಂದ ತಾನು ಆಮದು ಮಾಡಿಕೊಳ್ಳುತ್ತಿರುವ ಕೋಟ್ಯಂತರ ಡಾಲರ್ ಮೌಲ್ಯದ ಉತ್ಪನ್ನಗಳಿಗೆ ನೀಡಿದ್ದ ರಿಯಾಯಿತಿಗಳನ್ನು ಹಿಂತೆಗೆದುಕೊಂಡು ಹೊಸದಾಗಿ ತೆರಿಗೆಗಳನ್ನು ವಿಧಿಸಿರುವುದು, ವಾಣಿಜ್ಯಸಮರಕ್ಕೆ ಎಡೆಮಾಡಿಕೊಟ್ಟಿದೆ. ಭಾರತದಂತೆ ವಿವಿಧ ರಾಷ್ಟ್ರಗಳು ಕೂಡಾ ಅಮೆರಿಕದ ಉತ್ಪನ್ನಗಳಿಗೆ ಪ್ರತೀಕಾರಾತ್ಮಕ ತೆರಿಗೆಗಳನ್ನು ಹೇರಿವೆ.

ಅಮೆರಿಕದ ವಿದೇಶಾಗ ಸಚಿವ ಮೈಕ್ ಪಾಂಪಿಯೊ ಅವರು ಬುಧವಾರ ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಭಾರತೀಯ ಉತ್ಪನ್ನಗಳಿಗೆ ಅಧಿಕ ತೆರಿಗೆಗಳನ್ನು ವಿದಿಸುವ ತನ್ನ ಆಡಳಿತದ ಕ್ರಮವನ್ನು ಸಮರ್ಥಿಸಿದ್ದರು. ಭಾರತೀಯ ಮಾರುಕಟ್ಟೆಯನ್ನು ದೊಡ್ಡ ಮಟ್ಟದಲ್ಲಿ ತಲುಪುವ ಅವಶ್ಯಕತೆ ಅಮೆರಿಕಕ್ಕೆ ಇರುವುದಾಗಿ ಅವರು ಪ್ರತಿಪಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X