Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರೀಕ್ಷಾ ದಿನಾಂಕಗಳ ಮುಂದೂಡಿಕೆ:...

ಪರೀಕ್ಷಾ ದಿನಾಂಕಗಳ ಮುಂದೂಡಿಕೆ: ವಿದ್ಯಾರ್ಥಿಗಳ ಪರದಾಟ

ವಾರ್ತಾಭಾರತಿವಾರ್ತಾಭಾರತಿ29 Jun 2019 10:09 PM IST
share
ಪರೀಕ್ಷಾ ದಿನಾಂಕಗಳ ಮುಂದೂಡಿಕೆ: ವಿದ್ಯಾರ್ಥಿಗಳ ಪರದಾಟ

ಬೆಂಗಳೂರು, ಜೂ.29: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಪರೀಕ್ಷಾ ದಿನಾಂಕಗಳು ಪದೇ ಪದೇ ಮುಂದೂಡುತ್ತಿದ್ದು, ವಿದ್ಯಾರ್ಥಿಗಳು ಗೊಂದಲಕ್ಕೀಡಾಗುತ್ತಿದ್ದಾರೆ.

ಪದೇಪದೇ ಪರೀಕ್ಷೆ ಮುಂದೂಡಿಕೆ, ಪರೀಕ್ಷಾ ದಿನಾಂಕದಲ್ಲಿ ಗೊಂದಲ, ಅಸಮರ್ಪಕ ವೇಳಾಪಟ್ಟಿಗಳು ಬೆಂಗಳೂರು ವಿವಿಯ ಸ್ನಾತಕೋತ್ತರ ವಿಭಾಗದ ಅಧಿಕಾರಿಗಳ ಕಾರ್ಯವೈಖರಿಗೆ ಉದಾಹರಣೆಯಾಗಿದೆ ಎಂದು ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರು ಬಾರಿ ಪರಿಷ್ಕರಣೆ: ರಾಜ್ಯದ ಬಹುತೇಕ ಎಲ್ಲ ವಿವಿಗಳಲ್ಲಿ 2018-19 ನೆ ಸಾಲಿನ ಸ್ನಾತಕೋತ್ತರ ವಿಭಾಗದ ಪರೀಕ್ಷೆಗಳು ಮೇ ಕೊನೆ ಅಥವಾ ಜೂನ್ ಆರಂಭದಲ್ಲಿ ನಡೆದಿವೆ. ಆದರೆ, ಬೆಂಗಳೂರು ವಿವಿ ಇದುವರೆಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿಯಲ್ಲಿ ಸ್ಪಷ್ಟತೆ ಕಂಡುಕೊಂಡಿಲ್ಲ. ವಿವಿಯು ಇದುವರೆಗೂ ಸುಮಾರು ಮೂರು ಬಾರಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ.

ಸ್ನಾತಕೋತ್ತರ ವಿಭಾಗದ ವಿಜ್ಞಾನ ವಿಷಯಗಳ ಪರೀಕ್ಷೆ ಜುಲೈ 1ರಿಂದ ನಡೆಯಲಿದೆ ಎಂದು ವೇಳಾಪಟ್ಟಿ ಪ್ರಕಟಿಸಲಾಗಿತ್ತು. ನಂತರ ಅದನ್ನು ಜುಲೈ 5ರಿಂದ ಎಂದು ಮುಂದೂಡಲಾಗಿತ್ತು. ಆದರೆ, ಅಲ್ಲಿಯೂ ಗಣಿತ ವಿಷಯಕ್ಕೆ ಸಂಬಂಧಿಸಿದ ವೇಳಾಪಟ್ಟಿಯಲ್ಲಿ ಜುಲೈ 10ರಿಂದ ಪರೀಕ್ಷೆ ಆರಂಭ ಎಂದು ಉಲ್ಲೇಖಿಸಲಾಗಿತ್ತು. ಇದರಲ್ಲಿ ಎರಡು ಕಡ್ಡಾಯ ವಿಷಯಗಳನ್ನು ನಮೂದಿಸಿರಲಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪಿಸಿದ್ದಾರೆ.

ಹಿಂದಿನ ಮಾಹಿತಿ ಪ್ರಕಾರ ಜುಲೈ 1ರಿಂದಲೇ ಆರಂಭವಾಗಲಿದೆಯೇ ಅಥವಾ ಇತರ ವಿಷಯಗಳ ಪರೀಕ್ಷೆ ಜತೆ 5ರಿಂದ ಶುರುವಾಗಲಿದೆಯೇ ಎಂಬ ಪ್ರಶ್ನೆ ಹುಟ್ಟುಹಾಕಿತು. ಈ ವಿಚಾರ ಅರಿವಿಗೆ ಬರುತ್ತಿದ್ದಂತೆ ಎಚ್ಚೆತ್ತ ವಿಶ್ವವಿದ್ಯಾಲಯ ಜೂನ್ 28ರಂದು ಮತ್ತೆ ವೇಳಾಪಟ್ಟಿ ಪರಿಷ್ಕರಣೆ ಮಾಡಿದೆ.

ದಿನಾಂಕಗಳೇ ಇರುವುದಿಲ್ಲ: ವಿಶ್ವವಿದ್ಯಾಲಯವು ಕೊನೆಯವರೆಗೂ ಪರೀಕ್ಷಾ ದಿನಾಂಕದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವುದಿಲ್ಲ. ಇದರಿಂದಾಗಿ ದಿನಾಂಕ ನಮೂದಿಸದೆಯೇ ಪ್ರವೇಶ ಪತ್ರ ವಿತರಣೆ ಮಾಡಿದ ಅನೇಕ ಉದಾಹರಣೆಗಳಿವೆ. 2018ರ ಜುಲೈನಲ್ಲಿ ಮತ್ತು 2019ರ ಜನವರಿ-ಫೆಬ್ರವರಿಯಲ್ಲಿ ನಡೆದ ಪರೀಕ್ಷೆ ವೇಳೆ ಪರೀಕ್ಷಾ ದಿನಾಂಕ ನಮೂದಿಸದೆಯೇ ಪ್ರವೇಶಪತ್ರ ನೀಡಲಾಗಿತ್ತು.

ಫಲಿತಾಂಶಕ್ಕೆ ಕಾಯಬೇಕು: ಪರೀಕ್ಷಾ ಫಲಿತಾಂಶ ಪ್ರಕಟಿಸುವಾಗಲೂ ವಿಶ್ವವಿದ್ಯಾಲಯ ತೀರಾ ವಿಳಂಬ ನೀತಿ ಅನುಸರಿಸುತ್ತಿದೆ. 2019ರ ಜನವರಿ ಫೆಬ್ರವರಿಯಲ್ಲಿ ನಡೆದ ಸ್ನಾತಕೋತ್ತರ ಪರೀಕ್ಷೆಯ ಫಲಿತಾಂಶ ಪ್ರಕಟವಾದದ್ದು ಜೂನ್ ಮಧ್ಯಭಾಗದಲ್ಲಿ. ಈ ವೇಳೆಯಲ್ಲಿ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವುದರಿಂದ ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕುವುದು, ಉತ್ತರಪತ್ರಿಕೆಯ ನಕಲು ಪ್ರತಿಗೆ ಮನವಿ ಸಲ್ಲಿಸುವುದು ಮತ್ತಿತರ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಲ್ಲ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ.

ಉದ್ಯೋಗ್ಕಕೆ ಕುತ್ತು: ಈಗಾಗಲೇ ರಾಜ್ಯಾದ್ಯಂತ ಪಿಯುಸಿ ವಿದ್ಯಾರ್ಥಿಗಳ ಕಾಲೇಜುಗಳು ಮರು ಆರಂಭಗೊಂಡು, ತರಗತಿಗಳು ನಡೆಯುತ್ತಿವೆ. ಇನ್ನು ಜೂನ್ ಕೊನೆ ಅಥವಾ ಜುಲೈ ಮೊದಲನೆ ವಾರದಿಂದ ಪದವಿ ತರಗತಿಗಳು ಆರಂಭವಾಗಲಿವೆ. ಆದರೆ, ಇಲ್ಲಿ ಇನ್ನೂ ಪರೀಕ್ಷೆಗಳೇ ಪೂರ್ಣಗೊಂಡಿಲ್ಲ. ಇದರಿಂದ ಉದ್ಯೋಗಕ್ಕೆ ಸೇರಲು ತೊಂದರೆಯಾಗುತ್ತದೆ ಎಂದು ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X