Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಬಾ ಬುಡನ್‍ಗಿರಿಗೆ ಭೇಟಿ ನೀಡದೇ ವರದಿ...

ಬಾಬಾ ಬುಡನ್‍ಗಿರಿಗೆ ಭೇಟಿ ನೀಡದೇ ವರದಿ ನೀಡಿದ್ದೇನೆಂಬ ವಾದ ಸುಳ್ಳು: ಎಚ್.ಎನ್.ನಾಗಮೋಹನ್‍ದಾಸ್

ವಾರ್ತಾಭಾರತಿವಾರ್ತಾಭಾರತಿ29 Jun 2019 11:28 PM IST
share
ಬಾಬಾ ಬುಡನ್‍ಗಿರಿಗೆ ಭೇಟಿ ನೀಡದೇ ವರದಿ ನೀಡಿದ್ದೇನೆಂಬ ವಾದ ಸುಳ್ಳು: ಎಚ್.ಎನ್.ನಾಗಮೋಹನ್‍ದಾಸ್

ಚಿಕ್ಕಮಗಳೂರು, ಜೂ.29: ಬಾಬಾಬುಡನ್‍ಗಿರಿ ವಿವಾದ ಸಂಬಂದ ಹಿಂದಿನ ರಾಜ್ಯ ಸರಕಾರಕ್ಕೆ ವರದಿ ನೀಡಲು ನನ್ನ ನೇತೃತ್ವದ ಸಮಿತಿ ರಚಿಸಿತ್ತು. ಈ ಸಮಿತಿಯಲ್ಲಿ ಇನ್ನೂ ಮೂವರು ತಜ್ಞ ಸದಸ್ಯರಿದ್ದರು. ಈ ಸಮಿತಿ ನೀಡಿದ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದು, ವರದಿಯನ್ನು ಸರಕಾರ ಮಾನ್ಯ ಮಾಡಿದೆ. ಆದರೆ ವರದಿ ಬಗ್ಗೆ ಟೀಕೆಗಳು ಬಂದಿದ್ದು, ಬಾಬಾಬುಡನ್‍ಗಿರಿಗೆ ಭೇಟಿ ನೀಡದೇ ವರದಿ ಸಿದ್ಧಪಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನಾಯಾಧೀಶ ಎಚ್.ಎನ್.ನಾಗಮೋಹನ್‍ದಾಸ್ ಸ್ಪಷ್ಟನೆ ನೀಡಿದ್ದಾರೆ.

ಸಂವಿಧಾನ ಓದು ಅಭಿಯಾನದ ಅಂಗವಾಗಿ ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿರುವ ಅವರನ್ನು ಶನಿವಾರ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಕಾಲೇಜು ದಿನಗಳಲ್ಲೇ ಬಾಬಾಬುಡನ್‍ಗಿರಿಗೆ ಭೇಟಿ ನೀಡಿದ್ದೆ. ನಂತರ ಸ್ನೇಹಿತರು, ಕುಟುಂಬಸ್ಥರೊಂದಿಗೆ ಭೇಟಿ ನೀಡಿದ್ದೇನೆ. ಈ ವೇಳೆಯಲ್ಲಿ ನಾನು ಬಾಬಾ ಬುಡನಗಿರಯ ಇತಿಹಾಸ ತಿಳಿದುಕೊಂಡಿದ್ದೆ ಎಂದರು.

ಸರಕಾರ ಗಿರಿಯ ವಿವಾದ ಸಂಬಂಧ ವರದಿ ಸಲ್ಲಿಸಲು ಸಮಿತಿ ರಚನೆ ಮಾಡಿದ ಸಂದರ್ಭದಲ್ಲಿ ತನ್ನೊಂದಿಗಿದ್ದ ಮೂವರು ಸದಸ್ಯರು ರಾಜ್ಯದ ಪ್ರಮುಖ ಚಿಂತಕರು, ಆಳವಾದ ಇತಿಹಾಸ ಜ್ಞಾನ ಹೊಂದಿರುವವರು, ಅಧ್ಯಯನ ಶೀಲರು ಹಾಗೂ ಕಳಂಕ ರಹಿತರೂ ಆಗಿದ್ದರು. ಸಮಿತಿ ಸದಸ್ಯರಿಗೆ ಪ್ರತ್ಯೇಕವಾಗಿ ಬರವಣಿಗೆ ಹಾಗೂ ಮೌಖಿಕ ಅಭಿಪ್ರಾಯ ತಿಳಿಸಲು ಕೋರಲಾಗಿತ್ತು. ಎಲ್ಲರು ಸೂಕ್ತ ದಾಖಲೆಗಳನ್ನು ಅಧ್ಯಯನ ಮಾಡಿ ಅತ್ಯುತ್ತಮ ವರದಿಯನ್ನು ನೀಡಿದ್ದೇವೆ. ಸರಕಾರ ಈ ವರದಿಯನ್ನು ಒಪ್ಪಿತ್ತು ಎಂದರು.

ತಾನು ತನ್ನ ನೇತೃತ್ವದ ಸಮಿತಿಯು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದ ವರದಿ ವಿರುದ್ಧ ಕೆಲವರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದಾರೆ. ನ್ಯಾಯಾಲಯ ಈ ವರದಿ ಸಂಬಂಧ ತೀರ್ಪು ನೀಡಬೇಕಿರುವುದರಿಂದ ಇದಕ್ಕಿಂತ ಹೆಚ್ಚಿಗೆ ಮಾತನಾಡಲು ಸಾಧ್ಯವಿಲ್ಲ. ತನ್ನ ಸಮಿತಿ ನೀಡಿದ ವರದಿ ಸಂಬಂಧ ನ್ಯಾಯಾಲಯ ನೀಡುವ ಯಾವುದೇ ತೀರ್ಪಿಗೆ ತಾನು ಬದ್ಧನಾಗಿರುತ್ತೇನೆ ಎಂದು ನಾಗಮೋಹನ್‍ದಾಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X