Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ. 16 ತಾಲೂಕು, ಮಂಡಲ, ಬ್ಲಾಕ್‌ಗಳಲ್ಲಿ...

ಶೇ. 16 ತಾಲೂಕು, ಮಂಡಲ, ಬ್ಲಾಕ್‌ಗಳಲ್ಲಿ ಅಂತರ್ಜಲ ‘ಅತಿ ಹೆಚ್ಚು ಬಳಕೆ’: ದತ್ತಾಂಶ

ವಾರ್ತಾಭಾರತಿವಾರ್ತಾಭಾರತಿ30 Jun 2019 10:03 PM IST
share
ಶೇ. 16 ತಾಲೂಕು, ಮಂಡಲ, ಬ್ಲಾಕ್‌ಗಳಲ್ಲಿ ಅಂತರ್ಜಲ ‘ಅತಿ ಹೆಚ್ಚು ಬಳಕೆ’: ದತ್ತಾಂಶ

ಹೊಸದಿಲ್ಲಿ, ಜೂ. 30: ದೇಶದ ಶೇ. 16 ತಾಲೂಕು, ಮಂಡಲ ಹಾಗೂ ಬ್ಲಾಕ್ ಮಟ್ಟದ ಘಟಕಗಳ ಅಂತರ್ಜಲ ಮಟ್ಟ ‘ಅತಿ ಹೆಚ್ಚು ಬಳಕೆ’ ವರ್ಗದ ಅಡಿಯಲ್ಲಿ ಬರುತ್ತದೆ. ಶೇ. 4 ‘ಗಂಭೀರ’ ವರ್ಗದ ಅಡಿಯಲ್ಲಿ ಬರುತ್ತದೆ ಎಂದು ಸರಕಾರದ ದತ್ತಾಂಶ ಬಹಿರಂಗಪಡಿಸಿದೆ.

6,584 ಬ್ಲಾಕ್, ಮಂಡಲ ಹಾಗೂ ತಾಲೂಕು ಮಟ್ಟದ ಘಟಕಗಳ ಅಂತರ್ಜಲ ಮಟ್ಟವನ್ನು ಮೌಲ್ಯಮಾಪನ ಮಾಡಿರುವ ಕೇಂದ್ರ ಅಂತರ್ಜಲ ಮಂಡಳಿ, ಇದರಲ್ಲಿ 4,520 ಘಟಕಗಳು ‘ಸುರಕ್ಷಾ ವರ್ಗ’ದ ಅಡಿಯಲ್ಲಿ ಬರುತ್ತದೆ ಎಂದು ಕಳೆದ ವಾರ ಲೋಕಸಭೆಯಲ್ಲಿ ನೀಡಲಾದ ದತ್ತಾಂಶದಲ್ಲಿ ಹೇಳಿದೆ.

1,034ಕ್ಕೂ ಅಧಿಕ ಘಟಕಗಳನ್ನು ‘ಅತಿಯಾದ ಬಳಕೆ’ ವರ್ಗದ ಅಡಿಯಲ್ಲಿ ಗುರುತಿಸಲಾಗಿದೆ ಎಂದು ದತ್ತಾಂಶ ತಿಳಿಸಿದೆ.

ದೇಶದ ಒಟ್ಟು ಅಂಕಿ-ಅಂಶದ ಶೇ. 10ರಷ್ಟಾಗುವ ಸುಮಾರು 681 ಬ್ಲಾಕ್, ಮಂಡಲ, ತಾಲೂಕು ಮಟ್ಟದ ಘಟಕಗಳು ‘ಅರೆ ಗಂಭೀರ’ ವರ್ಗದ ಅಡಿಯಲ್ಲಿ ಬರುತ್ತದೆ. 253 ಘಟಕಗಳನ್ನು ‘ಗಂಭೀರ’ ವರ್ಗದಲ್ಲಿ ಬರುತ್ತದೆ. ಸುಮಾರು ಶೇ. 1 ಬ್ಲಾಕ್, ಮಂಡಲ ಹಾಗೂ ತಾಲೂಕುಗಳಲ್ಲಿ ಲವಣಯುಕ್ತ ನೀರು ಕಂಡು ಬಂದಿದೆ. ಈ ಅಂಕಿ-ಅಂಶ ಸರಕಾರದ 2013ರ ಮೌಲ್ಯಮಾಪನವನ್ನು ಆಧಾರವಾಗಿ ಹೊಂದಿದೆ.

 ‘‘2013ರ ಮೌಲ್ಯಮಾಪನದಂತೆ ಮೌಲ್ಯಮಾಪನ ಮಾಡಲಾದ ಒಟ್ಟು 6,584 ಘಟಕ (ಬ್ಲಾಕ್, ತಾಲೂಕು, ಮಂಡಲಗಳು)ಗಳಲ್ಲಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 1,034 ಘಟಕಗಳು ‘ಅತಿ ಹೆಚ್ಚು ಬಳಕೆ’ ಅಡಿಯಲ್ಲಿ ವರ್ಗೀಕರಿಸಲಾಗಿದೆ.

253 ಘಟಕಗಳನ್ನು ‘ಗಂಭೀರ’ ಎಂದು ವರ್ಗೀಕರಿಸಲಾಗಿದೆ. 681 ಘಟಕಗಳನ್ನು ‘ಅರೆ ಗಂಭೀರ’, 4,520 ಘಟಕಗಳನ್ನು ‘ಸುರಕ್ಷಿತ’ ಎಂದು ವರ್ಗೀಕರಿಸಲಾಗಿದೆ ಎಂದು ಜಲಶಕ್ತಿ ಸಚಿವಾಲಯದ ಸಹಾಯಕ ಸಚಿವರು ಕಳೆದ ವಾರ ಸಂಸತ್ತಿನಲ್ಲಿ ಮಾಹಿತಿ ನೀಡಿದರು.

   ಅಂತರ್ಜಲ ‘ಅತಿ ಹೆಚ್ಚು ಬಳಕೆ’ಯಲ್ಲಿ ಪಂಜಾಬ್ (ಶೇ. 76) ಹಾಗೂ ರಾಜಸ್ಥಾನ (ಶೇ. 66) ಮೊದಲಿನ ಸ್ಥಾನದಲ್ಲಿದೆ. ಅನಂತರದ ಸ್ಥಾನವನ್ನು ದಿಲ್ಲಿ (ಶೇ. 56) ಹಾಗೂ ಹರ್ಯಾಣ (ಶೇ. 54) ಪಡೆದುಕೊಂಡಿದೆ. ಪಶ್ಚಿಮಬಂಗಾಳ, ಉತ್ತರಾಖಂಡ, ತ್ರಿಪುರಾ, ಒಡಿಶ್ಶಾ, ನಾಗಾಲ್ಯಾಂಡ್, ಮೇಘಾಲಯ ಮಿಝೊರಾಮ್, ಮಣಿಪುರ, ಜಮ್ಮುಕಾಶ್ಮೀರ, ಅಸ್ಸಾಂ, ಅರುಣಾಚಲಪ್ರದೇಶ ಹಾಗೂ ಗೋವಾದಲ್ಲಿ ಅಂತರ್ಜಲ ಅತಿಯಾದ ಬಳಕೆಯಾಗಿರುವ ಬಗ್ಗೆ ವರದಿಯಾಗಿಲ್ಲ.

 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಗೋವಾ, ಮಣಿಪುರ, ಮೇಘಾಲಯ, ಮಿಝೊರಾಮ್, ನಾಗಾಲ್ಯಾಂಡ್, ಅಂಡಮಾನ್ ಹಾಗೂ ನಿಕೋಬಾರ್, ಚಂಡಿಗಢ, ದಾದ್ರಾ ಹಾಗೂ ನಗರಹವೇಲಿಯ ಎಲ್ಲ ಬ್ಲಾಕ್, ತಾಲೂಕು, ಮಂಡಲ ಮಟ್ಟದ ಘಟಕಗಳಲ್ಲಿ ಅಂತರ್ಜಲದ ಮಟ್ಟ ಸುರಕ್ಷಿತ ವರ್ಗದಲ್ಲಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X