Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಕತೆಯ ಪ್ರತಿಮೆಯ ವೀಕ್ಷಣಾ ಗ್ಯಾಲರಿ...

ಏಕತೆಯ ಪ್ರತಿಮೆಯ ವೀಕ್ಷಣಾ ಗ್ಯಾಲರಿ ಸೋರುತ್ತಿದೆ ಎಂದರೆ ‘ವಿನ್ಯಾಸವೇ ಹಾಗೆ' ಎಂದ ಅಧಿಕಾರಿಗಳು!

ವಾರ್ತಾಭಾರತಿವಾರ್ತಾಭಾರತಿ1 July 2019 3:27 PM IST
share
ಏಕತೆಯ ಪ್ರತಿಮೆಯ ವೀಕ್ಷಣಾ ಗ್ಯಾಲರಿ ಸೋರುತ್ತಿದೆ ಎಂದರೆ ‘ವಿನ್ಯಾಸವೇ ಹಾಗೆ ಎಂದ ಅಧಿಕಾರಿಗಳು!

ಅಹ್ಮದಾಬಾದ್, ಜು.1: ಗುಜರಾತ್ ರಾಜ್ಯದ ನರ್ಮದಾ ಜಿಲ್ಲೆ ಕೇವಡಿಯಾ ಎಂಬಲ್ಲಿ ಬರೋಬ್ಬರಿ 3,000 ಕೋಟಿ ರೂ. ವೆಚ್ಚದಲ್ಲಿ ತಲೆಯೆತ್ತಿರುವ ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಏಕತೆಯ ಪ್ರತಿಮೆಯ ವೀಕ್ಷಣಾ ಗ್ಯಾಲರಿಯಲ್ಲಿ ಮಳೆ ನೀರು ತುಂಬಿರುವ ಬಗ್ಗೆ ಹಾಗೂ ಅದರ ಛಾವಣಿ ಸೋರುತ್ತಿರುವ ಕುರಿತಾದ ಇತ್ತೀಚಿಗಿನ ವರದಿಗಳಿಗೆ ಈ ಪ್ರತಿಮೆಗೆ ಸಂಬಂಧಿಸಿದ ಟ್ವಿಟರ್ ಹ್ಯಾಂಡಲ್ ಮೂಲಕ ಅಧಿಕಾರಿಗಳು ಅಚ್ಚರಿಯ ಉತ್ತರ ನೀಡಿದ್ದಾರೆ. ವೀಕ್ಷಣಾ ಗ್ಯಾಲರಿಯ ವಿನ್ಯಾಸವನ್ನು ಇದೇ ರೀತಿ ಇರಲೆಂದೇ ಮಾಡಲಾಗಿದೆ ಎಂಬ ಉತ್ತರ ಬಂದಿದೆ.

ಯುಟ್ಯೂಬರ್ ಧ್ರುವ್ ರಾಠಿ ಇತ್ತೀಚೆಗೆ ಪ್ರತಿಮೆಯ ವೀಕ್ಷಣಾ ಗ್ಯಾಲರಿಯ ವೀಡಿಯೋ ಶೇರ್ ಮಾಡಿದ್ದರು. ಅದರಲ್ಲಿ ಈ 597 ಅಡಿ ಎತ್ತರದ ಪ್ರತಿಮೆಯನ್ನು ವೀಕ್ಷಿಸಲು ಅನುವು ಮಾಡಿಕೊಡುವ ಗ್ಯಾಲರಿ ಒಳಗೆ ಮಳೆ ನೀರು ಎದುರಿನಿಂದ ಹಾಗೂ ಛಾವಣಿಯಿಂದ  ಬೀಳುತ್ತಿರುವುದು ಹಾಗೂ ಗ್ಯಾಲರಿಯಲ್ಲಿ ಜನರಿರುವಂತೆಯೇ ನೀರು ಶೇಖರಣೆಗೊಂಡಿರುವುದು ಕಾಣಿಸುತ್ತದೆ.

ಗ್ಯಾಲರಿ ವಿನ್ಯಾಸದಲ್ಲಿ ಏನಾದರೂ ದೋಷದಿಂದ ಹೀಗಾಗಿರಬಹುದೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರನ್ನೂ ಕಾಡುತ್ತಿದೆ. ಆದರೆ ಏಕತೆಯ ಪ್ರತಿಮೆಯ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಅಧಿಕಾರಿಗಳು ನೀಡಿದ ಉತ್ತರ ಹೀಗಿತ್ತು. ``ತೀವ್ರ ಗಾಳಿಯಿಂದಾಗಿ ಮಳೆ ನೀರು ವೀಕ್ಷಣ ಗ್ಯಾಲರಿ ಪ್ರವೇಶಿಸಿದೆ, ವಿನ್ಯಾಸವೇ ಹಾಗೆ ಹಾಗೂ ಪ್ರವಾಸಿಗರಿಗೆ ಪ್ರತಿಮೆಯನ್ನು ಚೆನ್ನಾಗಿ ವೀಕ್ಷಿಸಲು ಅನುವು ಮಾಡಿಕೊಡಲು ಅದು ತೆರೆದ ಗ್ಯಾಲರಿಯಾಗಿದೆ. ಶೇಖರಣೆಯಾದ ನೀರಿನ ವಿಚಾರವನ್ನು ನಿರ್ವಹಣಾ ತಂಡ ನಿಭಾಯಿಸಿದೆ.''

ಇದಕ್ಕೂ ಮುಂಚೆ ಈ ಹ್ಯಾಂಡಲ್ ನಲ್ಲಿ ಮೂಡಿ ಬಂದ ಇನ್ನೊಂದು ಟ್ವೀಟ್ ನಲ್ಲಿ ``ಮುಂಗಾರಿನ ಮೊದಲ ಮಳೆಯನ್ನು ಸ್ವಾಗತಿಸುತ್ತಾ ಏಕತೆಯ ಪ್ರತಿಮೆ ತನ್ನ ಸಂಪೂರ್ಣ ವೈಭವದಲ್ಲಿ ನಿಂತಿದೆ,'' ಎಂದು ಬರೆಯಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X