Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದುರ್ಬಲ ಮುಂಗಾರಿನ ನಡುವೆ ಕೊಡಗಿನ...

ದುರ್ಬಲ ಮುಂಗಾರಿನ ನಡುವೆ ಕೊಡಗಿನ ವಿವಿಧೆಡೆ ಉತ್ತಮ ಮಳೆ

ವಾರ್ತಾಭಾರತಿವಾರ್ತಾಭಾರತಿ2 July 2019 8:30 PM IST
share
ದುರ್ಬಲ ಮುಂಗಾರಿನ ನಡುವೆ ಕೊಡಗಿನ ವಿವಿಧೆಡೆ ಉತ್ತಮ ಮಳೆ

ಮಡಿಕೇರಿ, ಜು.2 : ಕಾವೇರಿಯ ಒಡಲು ತುಂಬುವ ಕೊಡಗಿನಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅತ್ಯಂತ ದುರ್ಬಲವಾಗಿದ್ದು, ಉತ್ತಮ ಮಳೆಯ ನಿರೀಕ್ಷೆಗಳು ಹುಸಿಗೊಂಡಿರುವ ಹಂತದಲ್ಲೆ, ಜಿಲ್ಲೆಯ ವಿವಿಧೆಡೆ ಇಂದು ಉತ್ತಮ ಮಳೆಯಾಗಿದೆ. 

ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭಗೊಳ್ಳುತ್ತದೆಯಾದರೂ, ಈ ಬಾರಿ ಜೂನ್ ತಿಂಗಳು ಪೂರ್ಣಗೊಂಡು ಜುಲೈಗೆ ಹೆಜ್ಜೆ ಹಾಕಿರುವ ಹಂತದಲ್ಲೂ ನಿರಂತರವಾದ ಉತ್ತಮ ಮಳೆಯಾಗದಿರುವುದು ಕೃಷಿಕ ಸಮೂಹದೊಂದಿಗೆ ನಗರ ಪ್ರದೇಶದ ಜನರಲ್ಲೂ ಆತಂಕವನ್ನು ಹುಟ್ಟು ಹಾಕಲಾರಂಭಿಸಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಾರ್ಮೋಡಗಳು ಕಾಣಿಸಿಕೊಳ್ಳುತ್ತಿದ್ದರು, ಅದು ಉತ್ತಮ ಮಳೆಯಾಗಿ ಮಾತ್ರ ಸುರಿಯುತ್ತಿಲ್ಲ. ಬದಲಾಗಿ ಹನಿ ಮಳೆಯಾಗಿ ಕರಗಿ ಹೋಗುತ್ತಿತ್ತು. ಇದಕ್ಕೆ ವಿರುದ್ಧವೆಂಬಂತೆ ಇಂದು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಾಹ್ನ ಮತ್ತು ಸಂಜೆಯ ವೇಳೆ ಉತ್ತಮ ಮಳೆಯಾಗಿದೆ. 

ಕಳೆದ ಸಾಲಿನ ಮಳೆಯ ಚಿತ್ರಣವನ್ನು ಗಮನಿಸಿದಾಗ, ಈ ಬಾರಿಯಂತೆ ಹಿಂದಿನ ಸಾಲಿನಲ್ಲಿಯೂ ಜೂನ್‍ನಲ್ಲಿ ನಿರೀಕ್ಷಿತ ಮಳೆಯಾಗಿರಲಿಲ್ಲ. ಆದರೆ, ಅದಕ್ಕೂ ಮುಂಚಿತವಾಗಿ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಭರ್ಜರಿ ಮಳೆಯಾಗಿ ತೊರೆಗಳು ಉಕ್ಕಿ ಹರಿದಿದ್ದವು, ಹಾರಂಗಿ ಅಣೆಕಟ್ಟೆ ಬಹುತೇಕ ಪೂರ್ಣ ಗೊಳ್ಳುವ ಹಂತ ತಲುಪಿತ್ತು.ಈ ಬಾರಿ ಇಲ್ಲಿಯವರೆಗೆ ಅಂತಹ ಮಳೆಯಾಗದಿರುವುದರಿಂದ ಜಲ ಮೂಲಗಳಲ್ಲಿ ನೀರಿನ ಪ್ರಮಾಣ ಕ್ಷೀಣವಾಗಿದೆ, ಹಾರಂಗಿ ಅಣೆಕಟ್ಟೆಯ ನೀರಿನ ಮಟ್ಟ ತಳ ಸೇರಿದ ಸ್ಥಿತಿಯಲ್ಲೆ ಇದೆ.

ಏಕಾಏಕಿ ಮಳೆಯ ಆತಂಕ: ಹಿಂದಿನ 2018ನೇ ಸಾಲಿನಲ್ಲಿ ಯಾರೂ ನಿರೀಕ್ಷಿಸದಂತೆ ಆಗಸ್ಟ್ ತಿಂಗಳ ನಡು ಭಾಗದಲ್ಲಿ ನಾಲ್ಕೈದು ದಿನಗಳ ಕಾಲ ಸುರಿದ ಭಯಾನಕ ಸ್ವರೂಪದ ಮಳೆ ಪ್ರಾಕೃತಿಕ ವಿಕೋಪಗಳಿಗೆ ಎಡೆಮಾಡಿಕೊಟ್ಟಿತ್ತು. ಅದರಿಂದ ಇಲ್ಲಿಯವರೆಗೂ ಜಿಲ್ಲೆ ಸುಧಾರಿಸಿಕೊಂಡು ಮೇಲೇಳಲು ಸಾಧ್ಯವಾಗಿಲ್ಲ. ಈ ಕಹಿ ನೆನಪುಗಳ ನಡುವೆ, ಇದೀಗ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದರೂ ಮುಂಬರುವ ದಿನಗಳಲ್ಲಿ ಏಕಾಏಕಿ ಭಾರೀ ಮಳೆಯಾಗಿ ಮತ್ತೆ ಅನಾಹುತಗಳಿಗೆ ಎಡೆಮಾಡಿಕೊಟ್ಟು ಬಿಡಬಹುದೆನ್ನುವ ಆತಂಕ ಜಿಲ್ಲೆಯ ಜನತೆಯನ್ನು ಕಾಡುತ್ತಿದೆ.

ಜೂನ್, ಜುಲೈ ತಿಂಗಳಲ್ಲಿ ಜಿಲ್ಲೆಯಲ್ಲಿ ನಿತ್ಯ ನಿರಂತರವಾಗಿ ಸುರಿಯುತ್ತಿದ್ದ ಮಳೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ, ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಆತಂಕವನ್ನು ದೂರಮಾಡುತ್ತಿತ್ತು. ಆದರೆ, ಈ ಬಾರಿ ವರ್ಷದಾರಂಭದಿಂದ ಇಲ್ಲಿಯವರೆಗೆ ಉತ್ತಮ ಮಳೆಯಾಗದಿರುವುದು ಹಾಗೂ ಕಳೆದ ಸಾಲಿನ ಪ್ರಾಕೃತಿಕ ವಿಕೋಪದ ಪರಿಣಾಮಗಳಿಂದ ಅಂತರ್ಜಲ ಮಟ್ಟದಲ್ಲಿ ಏರು ಪೇರಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಕಾವೇರಿಯ ನಾಡಲ್ಲಿ ನೀರಿನ ಹಾಹಾಕಾರವೇಳುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಎಲ್ಲರ ಚಿತ್ತ ಕಾವೇರಿಯತ್ತ: ಮುಂಗಾರಿನ ಅವಧಿಯಲ್ಲಿ ಕೊಡಗಿನಲ್ಲಿ ಸುರಿಯುವ ಮಲೆ ಕಾವೇರಿಯ ಒಡಲನ್ನಷ್ಟೇ ತುಂಬುವುದಲ್ಲ, ಇದರೊಂದಿಗೆ ಕೆಆರ್‍ಎಸ್ ಭರ್ತಿಗೆ ಕಾರಣವಾಗುವುದರೊಂದಿಗೆ ಕೋಟ್ಯಾಂತರ ಜನರ ಬದುಕನ್ನು ಹಸನುಗೊಳಿಸುತ್ತದೆ. ಈ ಎಲ್ಲಾ ಕಾರಣಗಳಿಂದ ಕೊಡಗಿನಲ್ಲಿ ಇನ್ನಾದರು ಉತ್ತಮ ಮಳೆಯಾಗಿ ನಾಡಿನಲ್ಲಿ ಸುಭಿಕ್ಷೆ ಮನೆಮಾಡಲಿ ಎನ್ನುವ ಹಾರೈಕೆ ಪ್ರತಿಯೊಬ್ಬರದ್ದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X