Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲದ ಹೊರೆ ತಗ್ಗಿಸಲು ಕಂಪನಿಯ ಕೇಂದ್ರ...

ಸಾಲದ ಹೊರೆ ತಗ್ಗಿಸಲು ಕಂಪನಿಯ ಕೇಂದ್ರ ಕಚೇರಿಯನ್ನು ಭೋಗ್ಯಕ್ಕೆ ನೀಡಲಿರುವ ರಿಲಯನ್ಸ್ ಗ್ರೂಪ್

ವಾರ್ತಾಭಾರತಿವಾರ್ತಾಭಾರತಿ2 July 2019 9:23 PM IST
share
ಸಾಲದ ಹೊರೆ ತಗ್ಗಿಸಲು ಕಂಪನಿಯ ಕೇಂದ್ರ ಕಚೇರಿಯನ್ನು ಭೋಗ್ಯಕ್ಕೆ ನೀಡಲಿರುವ ರಿಲಯನ್ಸ್ ಗ್ರೂಪ್

ಮುಂಬೈ,ಜು.2: ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಗ್ರುಪ್ ಮುಂಬೈನ ಪ್ರಮುಖ ಪ್ರದೇಶದಲ್ಲಿಯ ತನ್ನ ಕೇಂದ್ರ ಕಚೇರಿಯನ್ನು ಭೋಗ್ಯಕ್ಕೆ ನೀಡಲು ನಿರ್ಧರಿಸಿದೆ. ಕಂಪನಿಯ ಈ ಕ್ರಮವು ಅದು ತನ್ನ ಸಾಲ ಮರುಪಾವತಿಗೆ ಹಣಕಾಸನ್ನು ಕ್ರೋಢೀಕರಿಸಲು ನೆರವಾಗಲಿದೆ.

ಅನಿಲ್ ಅಂಬಾನಿ ನಿಯಂತ್ರಣದ ಕೆಲವು ಕಂಪನಿಗಳು ಸರಣಿ ಕ್ರೆಡಿಟ್ ರೇಟಿಂಗ್ಸ್ ಇಳಿಸುವಿಕೆ ಮತ್ತು ಆಡಿಟ್ ವಿವಾದಗಳಿಂದಾಗಿ ಸಂಕಷ್ಟದ ಸುಳಿಯಲ್ಲಿ ಸಿಲುಕಿವೆ.

ರಿಲಯನ್ಸ್ ಇನ್ಫಾ ಸ್ಟ್ರಕ್ಚರ್ ಮುಂಬೈನ ಸಾಂತಾಕ್ರೂಝ್(ಪೂರ್ವ)ದಲ್ಲಿರುವ ತನ್ನ ರಿಲಯನ್ಸ್ ಸೆಂಟರ್ ಕಚೇರಿಯನ್ನು ಭೋಗ್ಯಕ್ಕೆ ನೀಡಲಿದೆ. ರಿಲಯನ್ಸ್‌ನ ಕಚೇರಿಗಳ ಒಡೆತನ ಮುಂದುವರಿಯಲಿದೆ ಮತ್ತು ಭೋಗ್ಯದ ಹಣವನ್ನು ಸಾಲ ಮರುಪಾವತಿಗೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.

ಭೋಗ್ಯಕ್ಕೆ ನೀಡಲು ಉದ್ದೇಶಿಸಿರುವ ಕಂಪನಿಯ ಕೇಂದ್ರ ಕಚೇರಿಯು ಪಶ್ಚಿಮ ಮುಂಬೈನ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿ ಹೆದ್ದಾರಿಗೆ ಹೊಂದಿಕೊಂಡಿದ್ದು, ಏಳು ಲಕ್ಷ ಚದುರಡಿ ವಿಸ್ತೀರ್ಣವನ್ನು ಹೊಂದಿದೆ ಮತ್ತು 3,000ಕ್ಕೂ ಅಧಿಕ ಉದ್ಯೋಗಿಗಳು ಇಲ್ಲಿ ದುಡಿಯುತ್ತಿದ್ದಾರೆ. ಈ ಆಸ್ತಿಯು ಅನಿಲ ನೇತೃತ್ವದ ರಿಲಯನ್ಸ್ ಗ್ರೂಪ್‌ನ ಮುಂಚೂಣಿ ಕಂಪನಿಯಾಗಿರುವ ರಿಲಯನ್ಸ್ ಇನ್ಫ್ರಾ ಸ್ಟ್ರಕ್ಚರ್‌ನ ನಿಯಂತ್ರಣದಲ್ಲಿದೆ.

ಆರ್-ಇನ್ಫ್ರಾ ಅಥವಾ ರಿಲಯನ್ಸ್ ಇನ್ಫ್ರಾ ಸ್ಟ್ರಕ್ಚರ್ ಸೇತುವೆಗಳು, ರಸ್ತೆಗಳು, ಮೆಟ್ರೋ ರೈಲು ಮತ್ತು ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಿ ಅವುಗಳನ್ನು ನಿರ್ವಹಿಸುತ್ತಿದೆ. ಶೈಶವಾವಸ್ಥೆಯಲ್ಲಿರುವ ರಿಲಯನ್ಸ್‌ನ ರಕ್ಷಣಾ ವ್ಯವಹಾರವನ್ನೂ ಅದು ನಿಭಾಯಿಸುತ್ತಿದೆ. ರಿಲಯನ್ಸ್ ಗ್ರುಪ್‌ನಲ್ಲಿ ಹೆಚ್ಚು ಸಾಲಬಾಧಿತ ಕಂಪನಿಗಳ ಪೈಕಿ ಒಂದಾಗಿರುವ ಅದು ಕಳೆದೆರಡು ವರ್ಷಗಳಲ್ಲಿ ತನ್ನ ಹಲವು ಆಸ್ತಿಗಳನ್ನು ಮಾರಾಟ ಮಾಡಿದೆ.

  ಆರ್-ಇನ್ಫ್ರಾ ಹಾಲಿ 15,000 ಕೋ.ರೂ.ಗಳ ಸಾಲವನ್ನು ಹೊಂದಿದೆ. ಕಂಪನಿಯನ್ನು ಮುಂದಿನ ವರ್ಷದ ವೇಳೆಗೆ ಸಾಲಮುಕ್ತವನ್ನಾಗಿಸಲು ಬಯಸಿದ್ದು,ಅದರ ಎಲ್ಲ ರಸ್ತೆ ಆಸ್ತಿಗಳನ್ನು ಮಾರಾಟ ಮಾಡುವುದಾಗಿ ಅನಿಲ ಅಂಬಾನಿ ಕಳೆದ ತಿಂಗಳು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X