Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಧಾರ್ಮಿಕ ಕೇಂದ್ರಗಳ ತೆರವು ಕೈಗೊಂಡಿರುವ...

ಧಾರ್ಮಿಕ ಕೇಂದ್ರಗಳ ತೆರವು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ2 July 2019 10:29 PM IST
share
ಧಾರ್ಮಿಕ ಕೇಂದ್ರಗಳ ತೆರವು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿ: ಹೈಕೋರ್ಟ್

ಬೆಂಗಳೂರು, ಜು.2: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ.29 ರೊಳಗೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ಅಗ್ರಹಾರ ದಾಸರಹಳ್ಳಿ ನಿವಾಸಿ ಎಸ್.ರವಿಚಂದ್ರ ಹಾಗೂ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಸಾರ್ವಜನಿಕ ಸ್ಥಳ, ಸಾರ್ವಜನಿಕ ಪಾರ್ಕ್‌ಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಬಾರದು. ಆದರೆ, ಅಗ್ರಹಾರ ದಾಸರಹಳ್ಳಿಯಲ್ಲಿ ಸಾರ್ವಜನಿಕ ಪಾರ್ಕ್‌ನಲ್ಲಿಯೆ ಕಾನೂನು ಬಾಹಿರವಾಗಿ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದಾರೆ ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಎನ್.ಪಿ.ಅಮೃತೇಶ್ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಬೇಕಾದರೆ, ರಾಜಕೀಯ ಪ್ರಭಾವಿಗಳ ಬೆಂಬಲವಿರುತ್ತದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾನೂನು ಬಾಹಿರವಾಗಿ ನಿರ್ಮಾಣವಾಗಿರುವ ಎಷ್ಟು ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. ಕಾನೂನು ಬಾಹಿರವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳು ಎಷ್ಟು ಇವೆ ಎಂಬುದರ ಕುರಿತು ಮಾಹಿತಿ ನೀಡಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು ವಾದಿಸಿ, ರಾಜ್ಯದಲ್ಲಿ ಕಾನೂನು ಬಾಹಿರವಾಗಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಿರುವ ಕುರಿತು ಸೆ.15 ರೊಳಗಾಗಿ ಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಸೆ.29ಕ್ಕೆ ಮುಂದೂಡಿತು.

2006ರ ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ: ಸಾರ್ವಜನಿಕ ಸ್ಥಳಗಳಲ್ಲಿ ಮಸೀದಿ, ದೇವಸ್ಥಾನ, ಚರ್ಚ್ ಹಾಗೂ ಗುರುದ್ವಾರ ಸೇರಿದಂತೆ ಅನಧಿಕೃತವಾಗಿ ಯಾವುದೇ ರೀತಿಯ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ನಿರ್ಮಿಸಬಾರದು. ನಿರ್ಮಿಸಿದರೆ ಅವುಗಳನ್ನು ತೆರವುಗೊಳಿಸಬೇಕು. 2006ರಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X