Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾತ್ರೋರಾತ್ರಿ ಬೋರ್‍ವೆಲ್ ಕೊರೆದ...

ರಾತ್ರೋರಾತ್ರಿ ಬೋರ್‍ವೆಲ್ ಕೊರೆದ ಗುತ್ತಿಗೆದಾರರು: ಸಾರ್ವಜನಿಕರಿಂದ ಅಧಿಕಾರಿಗಳಿಗೆ ತರಾಟೆ

ಕಿರುಗುಂದ ಗ್ರಾಮ ಸಭೆ

ವಾರ್ತಾಭಾರತಿವಾರ್ತಾಭಾರತಿ2 July 2019 10:49 PM IST
share
ರಾತ್ರೋರಾತ್ರಿ ಬೋರ್‍ವೆಲ್ ಕೊರೆದ ಗುತ್ತಿಗೆದಾರರು: ಸಾರ್ವಜನಿಕರಿಂದ ಅಧಿಕಾರಿಗಳಿಗೆ ತರಾಟೆ

ಮೂಡಿಗೆರೆ, ಜು.2: ಕೆರೆ ಕಾಮಗಾರಿ ಸಂಬಂಧ ದೂರು ನೀಡಿದವರೇ ಲಂಚ ಕೇಳಿರುವುದು, ಸ್ಥಳೀಯ ಗ್ರಾಪಂ ಸದಸ್ಯರ ಗಮನಕ್ಕೆ ತಾರದೇ ರಾತ್ರೋರಾತ್ರಿ ಬೋರ್‍ವೆಲ್ ಕೊರೆದ ಬಗ್ಗೆ ಸದಸ್ಯರಿಂದ ದೂರು, ಸರಕಾರಿ ಶಾಲೆಗೆ ಹೆಚ್ಚುವರಿ ಶಿಕ್ಷಕರನ್ನು ನೇಮಿಸದಿದ್ದಲ್ಲಿ ಶಾಲೆಗೆ ಬಿಗ ಜಡಿಯುವುದಾಗಿ ಗ್ರಾಮಸ್ಥರಿಂದ ಎಚ್ಚರಿಕೆ.

ಇದು ಮಂಗಳವಾರ ತಾಲೂಕಿನ ಕಿರುಗುಂದ ಗ್ರಾಪಂ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮಸಭೆಯಲ್ಲಿ ನಡೆದ ಪ್ರಮುಖ ವಿದ್ಯಮಾನಗಳು. ಮಂಗಳವಾರ ಕಿರುಗುಂದ ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಪಂ ಅಧ್ಯಕ್ಷೆ ಭಾಗ್ಯಾ ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ಸಭೆಯ ಆರಂಭದಲ್ಲಿ ಗ್ರಾಮಸ್ಥರಾದ ಯು.ಜಿ.ಅಣ್ಣೇಗೌಡ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್‍ಗೆ ಐದು ಲಕ್ಷ ರೂ. ಮಂಜೂರಾಗಿದೆ. ಈ ಅನುದಾನ ಬಳಸಿಕೊಂಡು ಜನರಿಂದ ಕೆಲಸ ಮಾಡಿಸಬೇಕಿತ್ತು. ಆದರೆ ಯಂತ್ರಗಳಿಂದ ಕಾಮಗಾರಿಯನ್ನು ಮಾಡಿಸಲಾಗಿದೆ ಎಂದು ಆರೋಪಿಸಿದರು. ಇದಕ್ಕೆ ಕಿರುಗುಂದ ಲೋಕೇಶ್ ಹಾಗೂ ಚೆನ್ನಕೇಶವ ಎಂಬವರು ಪ್ರತಿಕ್ರಿಯಿಸಿ, ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ. ಇದನ್ನು ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಮಗಾರಿ ಮಾಡಿದವರ ಬಳಿ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದೀರಿ. ಅದನ್ನು ಕೊಡಲಿಲ್ಲ ಎಂಬ ಕಾರಣಕ್ಕೆ ಗ್ರಾಮಸಭೆಯಲ್ಲಿ ದೂರು ಹೇಳುತ್ತಿದ್ದೀರಿ. ನಿಮ್ಮ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತರಾಟೆಗೆ ತೆಗೆದರು.

ಗ್ರಾಪಂ ವ್ಯಾಪ್ತಿಯ ಹೆಗ್ಗರವಳ್ಳಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 30 ಮಕ್ಕಳಿಗೆ ಓರ್ವ ಶಿಕ್ಷಕ ಪಾಠ ಮಾಡುತ್ತಿದ್ದಾರೆ. ಇನ್ನೋರ್ವ ಶಿಕ್ಷಕ ರಜೆ ಮೇಲೆ ತೆರಳಿದ್ದು ಇದುವರೆಗೂ ಬಂದಿಲ್ಲ. ಶಾಲೆಗೆ ಹೆಚ್ಚುವರಿ ಶಿಕ್ಷಕನನ್ನು ನೇಮಿಸುವಂತೆ ಬಿಇಒ ಅವರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶಾಲೆಯಲ್ಲಿ ಓದುತ್ತಿರುವ ಬಡ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಕೂಡಲೇ ಶಿಕ್ಷಕನನ್ನು ನೇಮಿಸಬೇಕು. ಮಕ್ಕಳ ಬದುಕಿನೊಂದಿಗೆ ಚೆಲ್ಲಾಟವಾಡುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. ತಪ್ಪಿದಲ್ಲಿ ಶಾಲಾ ಮಕ್ಕಳೊಂದಿಗೆ ಶಾಲೆಗೆ ಬೀಗ ಜಡಿದು ಧರಣಿ ಮಾಡಲಾಗುವುದು ಎಂದು ಗ್ರಾಮದ ಮುಖಂಡ ಕಿರುಗುಂದ ಕೆ.ಕೆ.ರಾಮಯ್ಯ ಸಭೆಯಲ್ಲಿದ್ದ ಸಿಆರ್‍ಪಿಯನ್ನು ಎಚ್ಚರಿಸಿದರು. ಇದಕ್ಕೆ ಶಿಕ್ಷಣಾಧಿಕಾರಿಯಿಂದ ಕ್ರಮವಹಿಸುವ ಭರವಸೆ ಸಿಕ್ಕಿತು.

ಬೆಟ್ಟದಮನೆ ಗ್ರಾಮದಲ್ಲಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಾತ್ರೋರಾತ್ರಿ ಬೋರ್‍ವೆಲ್ ಕೊರೆಯಲಾಗಿದೆ. ಈ ಸಂಬಂಧ ಗ್ರಾಪಂ ಸದಸ್ಯರ ಗಮನಕ್ಕೆ ತಂದಿಲ್ಲ. ಕೊಳವೆ ಬಾವಿಯನ್ನು ರಾತ್ರಿ ಕೊರೆಯುವ ಆವಶ್ಯಕತೆ ಏನಿತ್ತು ಎಂದು ಯು.ಎಚ್.ಹೇಮಶೇಖರ್ ಇಲಾಖೆಯ ಇಂಜಿನಿಯರ್ ರನ್ನು ತರಾಟೆಗೆ ಪಡೆದರು. ಇದೇ ವೇಳೆ ಅವರು ಗ್ರಾಮದಲ್ಲಿ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಇದುವರೆಗೂ ಹಕ್ಕುಪತ್ರ ನೀಡಿಲ್ಲ. ಇದರಿಂದ ಬಡವರು ತೊಂದರೆಗೊಳಗಾಗಿದ್ದಾರೆ. ತಾಲೂಕು ಆಡಳಿತ ಕೂಡಲೇ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಬೇಕೆಂದು ಕಂದಾಯಾಧಿಕಾರಿಗಳನ್ನು ಆಗ್ರಹಿಸಿದರು. ನಂತರ ಮಾತನಾಡಿದ ಕೆ.ಕೆ.ರಾಮಯ್ಯ, ಕೃಷಿ, ತೋಗಾರಿಕೆ ಇಲಾಖೆಗಳ ಸೌಲಭ್ಯಗಳು ರಾಜಕಾರಣಿಗಳು ಶಿಫಾರಸು ಮಾಡಿದವರಿಗೆ ಮಾತ್ರ ಸಿಗುತ್ತಿದೆ. ಇದರಿಂದಾಗಿ ನೈಜ ಫಲಾನುಭವಿಗಳು, ಬಡವರಿಗೆ ಸೌಲಭ್ಯ ಸಿಗುತ್ತಿಲ್ಲ. ಇಂತಹ ತಾರತಮ್ಯವನ್ನು ಅಧಿಕಾರಿಗಳು ತಡೆಯಬೇಕೆಂದು ಒತ್ತಾಯಿಸಿದರು. 

ಸಭೆಯಲ್ಲಿ ಮರಳಿನ ಸಮಸ್ಯೆಯ ಬಗ್ಗೆ ಗ್ರಾಮಸ್ಥರು, ಗ್ರಾಪಂ ಸದಸ್ಯರು ವ್ಯಾಪಕವಾಗಿ ದೂರು ಹೇಳಿದರು. ಈ ಸಂಬಂಧ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಲು ತೀರ್ಮಾನಿಸಲಾಯಿತು.

ಸಭೆಯ ಅಂತ್ಯದಲ್ಲಿ ಜಿಪಂ ಸದಸ್ಯೆ ಅನಿತಾ ಮುತ್ತಪ್ಪ ಮಾತನಾಡಿ, ತನ್ನ ಅವಧಿಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳು, ಕಾಮಗಾರಿಗಳನ್ನು ತರಲಾಗಿದೆ. ಉಳಿದ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದರು.

ತಾಪಮ ಉಪಾಧ್ಯಕ್ಷೆ ಸವಿತಾ ರಮೇಶ್, ನೋಡಲ್ ಅಧಿಕಾರಿ ಡಾ.ಮನು, ಗ್ರಾಪಂ ಉಪಾಧ್ಯಕ್ಷ ಚಂದ್ರಶೇಖರ್, ಮೆಸ್ಕಾಂ ಅಧಿಕಾರಿ ರವಿಕುಮಾರ್, ಎಎಸ್ಸೈ ಗೋಪಾಲಗೌಡ, ಪಿಡಿಒ ಸಾಹಿತ್ಯಾ, ಕಾರ್ಯದರ್ಶಿ ಪ್ರಶಾಂತ್ ಮತ್ತು ಗ್ರಾಪಂ ಸದಸ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X